ಹೊನ್ನಾವರ ಡೇಂಜರ್‌ ಸೇತುವೆಯಿಂದ ಮುಕ್ತಿ ಯಾವಾಗ? BIG 3 ವರದಿ ಬಳಿಕ ಎಚ್ಚೆತ್ತ ಆಡಳಿತ

ಹೊನ್ನಾವರ ಡೇಂಜರ್‌ ಸೇತುವೆಯಿಂದ ಮುಕ್ತಿ ಯಾವಾಗ? BIG 3 ವರದಿ ಬಳಿಕ ಎಚ್ಚೆತ್ತ ಆಡಳಿತ

Published : May 27, 2022, 05:13 PM IST

ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದಲ್ಲಿನ ಡೇಂಜರ್‌ ಸೇತುವೆ ಬಗ್ಗೆ ಬೆಳಗ್ಗೆ ವರದಿ ಮಾಡಿದ್ವಿ. ವರದಿ ಬೆನ್ನಲ್ಲೇ ಜಿಲ್ಲಾಡಳಿತ ಹಾಗೂ ಶಾಸಕರು ಎಚ್ಚೆತ್ತಿದ್ದಾರೆ. ತಾತ್ಕಾಲಿಕ ಪರ್ಯಾಯ ವ್ಯವಸ್ಥೆ ಮಾಡುವ ಆಶ್ವಾಸನೆ ನೀಡಿದ್ದಾರೆ.

ಉತ್ತರ ಕನ್ನಡ(ಮೇ.27):  ಶಾಲೆಗೆ ತೆರಳುವ ಮಕ್ಕಳು ಸೇರಿದಂತೆ ಎಲ್ಲರೂ ಈ ಸೇತುವೆ ಮೇಲೆ ನಡೆದಾಡೋವಾಗ ಜೀವ ಕೈಯಲ್ಲಿ ಹಿಡಿದುಕೊಂಡು ಓಡಾಡುವಂತ ಪರಿಸ್ಥಿತಿ ನಿರ್ಮಾಣವಾದ ಘಟನೆ ಉತ್ತರ ಕನ್ನಡ  (Uttara Kannada)ಜಿಲ್ಲೆಯ ಹೊನ್ನಾವರ ತಾಲೂಕಿನ (Honnavar Taluk) ಸಾಲ್ಕೋಡು ಗ್ರಾಮದಲ್ಲಿ (Salkodu Village) ನಡೆದಿದೆ. ಈ ಕುರಿತಂತೆ ಸುವರ್ಣ ನ್ಯೂಸ್ ಬಿಗ್ 3 ಕಾರ್ಯಕ್ರಮದಲ್ಲಿ ವಿಸ್ತಾರದ ವರದಿ ಪ್ರಕಟವಾಗಿತ್ತು.


ಸುದ್ದಿ ಪ್ರಸಾರವಾದ ಬೆನ್ನಲ್ಲಿಯೇ ಈ ಕುರಿತಂತೆ ಕ್ರಮ ಕೈಗೊಳ್ಳಲು ಉತ್ತರ ಕನ್ನಡ ಜಿಲ್ಲಾಡಳಿತ ಹಾಗೂ ಸ್ಥಳೀಯ ಶಾಸಕರು ಮುಂದಾಗಿದ್ದಾರೆ. ವರದಿ ಬಂದ ಬೆನ್ನಲ್ಲಿಯೇ ಶಾಸಕ ದಿನಕರ ಶೆಟ್ಟಿ (MLA Dinakar Shetty) ಹಾಗೂ ಸಿಇಒ ಪ್ರಿಯಾಂಕಾ ಸಭೆ ನಡೆಸಿದ್ದಾರೆ. ಶೀಘ್ರದಲ್ಲಿಯೇ ಸಾಲ್ಕೋಡಿಗೆ ತಂಡ ಕಳಿಸಿ ಆಗಬೇಕಾದ ಕೆಲಸಗಳ ಬಗ್ಗೆ ಮಾಹಿತಿ ಪಡೆಯಲಿದ್ದಾರೆ. ಶಾಶ್ವತ ಪರಿಹಾರಕ್ಕೂ ಮುನ್ನ ತಾತ್ಕಾಲಿಕ ವ್ಯವಸ್ಥೆ ಮಾಡಿಕೊಡುವುದಾಗಿಯೂ ಆಶ್ವಾಸನೆ ನೀಡಿದ್ದಾರೆ ಎಂದು ಹೇಳಲಾಗಿದೆ.

BIG 3: ಈ ಸೇತುವೆಯಲ್ಲಿ ನಡೆದಾಡಲಿಕ್ಕೆ ಗುಂಡಿಗೆ ಬೇಕು: ಅಡಿಕೆ ಮರವೇ ಸೇತುವೆ..!

ಅಡಿಕೆ ಮರದ ಸೇತುವೆ ಬದಲು ತಕ್ಷಣಕ್ಕೆ ಹಲಗೆಯ ಸೇತುವೆಯನ್ನು ಮಾಡಿಕೊಡುವುದಾಗಿ ಭರವಸೆ ನೀಡಿದ್ದಾರೆ. ಈಗಾಗಲೇ 60 ಲಕ್ಷ ರೂಪಾಯಿ ತೆಗೆದಿರಿಸಿದ್ದೇನೆ. ಮಳೆಗಾಲ ಪ್ರಾರಂಭವಾಗುವ ಮುನ್ನ ಜನರ ಸುರಕ್ಷತೆಗಾಗಿ ಆದಷ್ಟು ಕ್ರಮ ತೆಗೆದುಕೊಳ್ಳಲಿದ್ದೇನೆ ಎಂದು ಹೊನ್ನಾವರ ಶಾಸಕ ದಿನಕರ ಶೆಟ್ಟಿ ಹೇಳಿದ್ದಾರೆ.

27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!