Oct 21, 2019, 3:24 PM IST
ಬೆಂಗಳೂರು/ ನವದೆಹಲಿ (ಅ.21): ಹವಾಲ ಪ್ರಕರಣದಲ್ಲಿ ತಿಹಾರ್ ಜೈಲು ಪಾಲಾಗಿರುವ ಕಾಂಗ್ರೆಸ್ ನಾಯಕ ಡಿ.ಕೆ.ಶಿವಕುಮಾರ್ಗೆ ಮತ್ತೊಂದು ಕಂಟಕ ಎದುರಾಗಿದೆ. ದೆಹಲಿಯಲ್ಲಿರುವ ಡಿಕೆಶಿ ನಿವಾಸದ ಮೇಲೆ CBI ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಅಕ್ರಮ ಹಣ ವ್ಯವಹಾರದ ವಿಚಾರಣೆಗೆ ಸಹಕರಿಸುತ್ತಿಲ್ಲ ಎಂಬ ಆರೋಪದಲ್ಲಿ ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳು ಡಿಕೆಶಿಯನ್ನು ಬಂಧಿಸಿ, ತಿಹಾರ್ ಜೈಲಿಗಟ್ಟಿದ್ದಾರೆ.
ED ವಿಶೇಷ ನ್ಯಾಯಾಲಯ ಜಾಮೀನು ನಿರಾಕರಿಸಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕ ದೆಹಲಿ ಹೈಕೋರ್ಟ್ ಮೊರೆಹೋಗಿದ್ದು, ಅರ್ಜಿಯು ವಿಚಾರಣೆ ಹಂತದಲ್ಲಿದೆ.