ರಾಜ್ಯ ಸರ್ಕಾರದಲ್ಲಿ ಮತ್ತೆ ಶಾಸಕ vs ಸಚಿವರ ಸಂಘರ್ಷ!

ರಾಜ್ಯ ಸರ್ಕಾರದಲ್ಲಿ ಮತ್ತೆ ಶಾಸಕ vs ಸಚಿವರ ಸಂಘರ್ಷ!

Published : Dec 19, 2024, 08:36 PM ISTUpdated : Dec 19, 2024, 09:05 PM IST

ದಾವಣಗೆರೆಯಲ್ಲಿ ವರ್ಗಾವಣೆ ವಿಚಾರದಲ್ಲಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್​ ಹಾಗೂ ಶಾಸಕ ಶಿವಗಂಗಾ ಬಸವರಾಜ್ ನಡುವೆ ಆಂತರಿಕ ಕಿತ್ತಾಟ ತಾರಕಕ್ಕೇರಿದೆ. FDA ವರ್ಗಾವಣೆಯಲ್ಲಿ ಸಚಿವರ ಹೊಂದಾಣಿಕೆ ಆರೋಪದ ಮೇರೆಗೆ ಸಿಎಂಗೆ ಶಾಸಕರು ಪತ್ರ ಬರೆದಿದ್ದಾರೆ.

ಕಾಂಗ್ರೆಸ್ ಸರ್ಕಾರದಲ್ಲಿ ಗ್ಯಾರಂಟಿ ಮೇಲೆ ಸರ್ಕಾರ ನಡೆಯುತ್ತಿದ್ದರೂ ಎಲ್ಲವೂ ಸರಿಯಾಗಿಲ್ಲ. ಒಂದೆಡೆ ಅನುದಾನ ವಿಚಾರ, ಮುಡಾ ವಿಚಾರ, ಸಿಎಂ ಕುರ್ಚಿ ವಿಚಾರದ ಕಿತ್ತಾಟದ ನಡುವೆಯೇ ಇದೀಗ ಮತ್ತೊಮ್ಮೆ ಶಾಸಕರು ಹಾಗೂ ಸಚಿವರ ನಡುವಿನ ಕಿತ್ತಾಟ ಹೊರಗೆ ಬಂದಿದೆ. ದಾವಣಗೆರೆಯಲ್ಲಿ ವರ್ಗಾವಣೆ ವಿಚಾರದಲ್ಲಿ ಎಸ್.ಎಸ್.ಮಲ್ಲಿಕಾರ್ಜುನ್​ ಹಾಗೂ ಶಾಸಕ ಶಿವಗಂಗಾ ಬಸವರಾಜ್ ನಡುವೆ ಆಂತರಿಕ ಕಿತ್ತಾಟ ಶುರುವಾಗಿದ್ದು, ಕೂಡಲೇ ಜಿಲ್ಲಾ ಉಸ್ತುವಾರಿ ಸಚಿವರನ್ನು ಬದಲಾವಣೆ ಮಾಡುವಂತೆ ಸಿಎಂ ಸಿದ್ದರಾಮಯ್ಯಗೆ ಶಾಸಕ ಶಿವಗಂಗಾ ಪತ್ರ ಬರೆದಿದ್ದಾರೆ.

ದಾವಣಗೆರೆಯಲ್ಲಿ ಲೋಕೋಪಯೋಗಿ ಇಲಾಖೆ FDA ವರ್ಗಾವಣೆ ವಿಚಾರದಲ್ಲಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ಹೊಂದಾಣಿಕೆ ಮಾಡಿಕೊಂಡಿದ್ದಾರೆ. FDA ಐ.ಎಸ್.ಓಡೆನಪುರ್ ವರ್ಗಾವಣೆಯಲ್ಲಿ ಸಚಿವರು ಹೊಂದಾಣಿಕೆ ಮಾಡಿಕೊಂಡಿದ್ದಾರೆ. ಓಡೆನಪುರ್​ ಜಾಗಕ್ಕೆ ವಿಜಯ್​ ಕುಮಾರ್​ ಎಂಬ ವ್ಯಕ್ತಿ ವರ್ಗಾವಣೆ ಆಗಿದ್ದರು. ಈ ನಿಯಮದಂತೆ ಚಲಾನಾದೇಶ ಪಡೆದಿರುವ ಓಡೆನಪುರ್​ ಅವರು, ಕರ್ತವ್ಯದಿಂದ ಬಿಡುಗಡೆ ಆಗುವ ವೇಳೆ ತೀವ್ರ ಒತ್ತಡ ಹೇರಿ ಸದರಿ ಆದೇಶ ಕಾಯ್ದಿರಿಸುವಂತೆ ಮಾಡಿದ್ದಾರೆ. ಇನ್ನು ಕರ್ತವ್ಯದಿಂದ ವಿಜಯ್​ ಕುಮಾರ್​ ಬಿಡುಗಡೆಗೊಳಿಸದಂತೆ ಆದೇಶವನ್ನು ಜಿಲ್ಲಾ ಉಸ್ತುವಾರಿ ಸಚಿವರಿಂದ ಕಳಿಸಿದ್ದಾರೆ.

ಇದನ್ನೂ ಓದಿ: ಸುವರ್ಣ ಸೌಧದೊಳಗೆ ನುಗ್ಗಿ ಸಿ.ಟಿ. ರವಿ ಅರೆಸ್ಟ್ ಮಾಡಿ, ಎತ್ಹಾಕೊಂಡು ಹೋದ ಪೊಲೀಸರು!

ಜಿಲ್ಲಾ ಉಸ್ತುವಾರಿ ಸಚಿವ ಮಲ್ಲಿಕಾರ್ಜುನ ಅವರು, ಒಂದೆಡೆ ಪತ್ರ ನೀಡುವುದು, ಇನ್ನೊಂದೆಡೆ ಪತ್ರಕ್ಕೆ ತಡೆ ನೀಡುವುದರ ಬಗ್ಗೆ ಇಬ್ಬಗೆ ನೀತಿ ಅನುಸರಿಸುತ್ತಿದ್ದಾರೆ. ದಾವಣಗೆರೆಯಿಂದ ವರ್ಗಾಯಿಸಲ್ಪಟ್ಟ ಓಡೆನಪುರ್​ ಇದೀಗ ಸರ್ಕಾರಿ ನೌಕರರ ಜಿಲ್ಲಾಧ್ಯಕ್ಷನಾಗಿ ಆಯ್ಕೆ ಆಗಿದ್ದಾರೆ. ಬಿಜೆಪಿ ಬೆಂಬಲದೊಂದಿಗೆ ಹೆಚ್ಚು ಹಣ ಖರ್ಚು ಮಾಡಿ ಜಿಲ್ಲಾಧ್ಯಕ್ಷ ಆಗಿದ್ದು, ಸ್ಥಳೀಯ ಕಾಂಗ್ರೆಸ್ ಶಾಸಕರ ಬೆಂಬಲಿತ ಅಭ್ಯರ್ಥಿಗೆ ಸೋಲು ಉಂಟಾಗಿದೆ. ಹೀಗಾಗಿ, ಅಧಿಕಾರಿ ಓಡೆನಪುರ್​ ಶಾಸಕರ ಬಗ್ಗೆ ಅಗೌರವದಿಂದ ಮಾತನಾಡುತ್ತಿದ್ದಾರೆ. ಇಷ್ಟಿದ್ದರೂ ಕಾಂಗ್ರೆಸ್ ಅಭ್ಯರ್ಥಿ ಸೋಲಿಸಿದವರ ಜತೆ ಜಿಲ್ಲಾ ಉಸ್ತುವಾರಿ ಸಚಿವರು ಸಾಥ್ ನೀಡುತ್ತಿದ್ದಾರೆ ಎಂದು ಶಾಸಕ ಶಿವಗಂಗಾ ಬಸವರಾಜ್ ಆರೋಪ ಮಾಡಿದ್ದಾರೆ.

21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
Read more