ರಾಜ್ಯ ಸರ್ಕಾರದಲ್ಲಿ ಮತ್ತೆ ಶಾಸಕ vs ಸಚಿವರ ಸಂಘರ್ಷ!

ರಾಜ್ಯ ಸರ್ಕಾರದಲ್ಲಿ ಮತ್ತೆ ಶಾಸಕ vs ಸಚಿವರ ಸಂಘರ್ಷ!

Published : Dec 19, 2024, 08:36 PM ISTUpdated : Dec 19, 2024, 09:05 PM IST

ದಾವಣಗೆರೆಯಲ್ಲಿ ವರ್ಗಾವಣೆ ವಿಚಾರದಲ್ಲಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್​ ಹಾಗೂ ಶಾಸಕ ಶಿವಗಂಗಾ ಬಸವರಾಜ್ ನಡುವೆ ಆಂತರಿಕ ಕಿತ್ತಾಟ ತಾರಕಕ್ಕೇರಿದೆ. FDA ವರ್ಗಾವಣೆಯಲ್ಲಿ ಸಚಿವರ ಹೊಂದಾಣಿಕೆ ಆರೋಪದ ಮೇರೆಗೆ ಸಿಎಂಗೆ ಶಾಸಕರು ಪತ್ರ ಬರೆದಿದ್ದಾರೆ.

ಕಾಂಗ್ರೆಸ್ ಸರ್ಕಾರದಲ್ಲಿ ಗ್ಯಾರಂಟಿ ಮೇಲೆ ಸರ್ಕಾರ ನಡೆಯುತ್ತಿದ್ದರೂ ಎಲ್ಲವೂ ಸರಿಯಾಗಿಲ್ಲ. ಒಂದೆಡೆ ಅನುದಾನ ವಿಚಾರ, ಮುಡಾ ವಿಚಾರ, ಸಿಎಂ ಕುರ್ಚಿ ವಿಚಾರದ ಕಿತ್ತಾಟದ ನಡುವೆಯೇ ಇದೀಗ ಮತ್ತೊಮ್ಮೆ ಶಾಸಕರು ಹಾಗೂ ಸಚಿವರ ನಡುವಿನ ಕಿತ್ತಾಟ ಹೊರಗೆ ಬಂದಿದೆ. ದಾವಣಗೆರೆಯಲ್ಲಿ ವರ್ಗಾವಣೆ ವಿಚಾರದಲ್ಲಿ ಎಸ್.ಎಸ್.ಮಲ್ಲಿಕಾರ್ಜುನ್​ ಹಾಗೂ ಶಾಸಕ ಶಿವಗಂಗಾ ಬಸವರಾಜ್ ನಡುವೆ ಆಂತರಿಕ ಕಿತ್ತಾಟ ಶುರುವಾಗಿದ್ದು, ಕೂಡಲೇ ಜಿಲ್ಲಾ ಉಸ್ತುವಾರಿ ಸಚಿವರನ್ನು ಬದಲಾವಣೆ ಮಾಡುವಂತೆ ಸಿಎಂ ಸಿದ್ದರಾಮಯ್ಯಗೆ ಶಾಸಕ ಶಿವಗಂಗಾ ಪತ್ರ ಬರೆದಿದ್ದಾರೆ.

ದಾವಣಗೆರೆಯಲ್ಲಿ ಲೋಕೋಪಯೋಗಿ ಇಲಾಖೆ FDA ವರ್ಗಾವಣೆ ವಿಚಾರದಲ್ಲಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ಹೊಂದಾಣಿಕೆ ಮಾಡಿಕೊಂಡಿದ್ದಾರೆ. FDA ಐ.ಎಸ್.ಓಡೆನಪುರ್ ವರ್ಗಾವಣೆಯಲ್ಲಿ ಸಚಿವರು ಹೊಂದಾಣಿಕೆ ಮಾಡಿಕೊಂಡಿದ್ದಾರೆ. ಓಡೆನಪುರ್​ ಜಾಗಕ್ಕೆ ವಿಜಯ್​ ಕುಮಾರ್​ ಎಂಬ ವ್ಯಕ್ತಿ ವರ್ಗಾವಣೆ ಆಗಿದ್ದರು. ಈ ನಿಯಮದಂತೆ ಚಲಾನಾದೇಶ ಪಡೆದಿರುವ ಓಡೆನಪುರ್​ ಅವರು, ಕರ್ತವ್ಯದಿಂದ ಬಿಡುಗಡೆ ಆಗುವ ವೇಳೆ ತೀವ್ರ ಒತ್ತಡ ಹೇರಿ ಸದರಿ ಆದೇಶ ಕಾಯ್ದಿರಿಸುವಂತೆ ಮಾಡಿದ್ದಾರೆ. ಇನ್ನು ಕರ್ತವ್ಯದಿಂದ ವಿಜಯ್​ ಕುಮಾರ್​ ಬಿಡುಗಡೆಗೊಳಿಸದಂತೆ ಆದೇಶವನ್ನು ಜಿಲ್ಲಾ ಉಸ್ತುವಾರಿ ಸಚಿವರಿಂದ ಕಳಿಸಿದ್ದಾರೆ.

ಇದನ್ನೂ ಓದಿ: ಸುವರ್ಣ ಸೌಧದೊಳಗೆ ನುಗ್ಗಿ ಸಿ.ಟಿ. ರವಿ ಅರೆಸ್ಟ್ ಮಾಡಿ, ಎತ್ಹಾಕೊಂಡು ಹೋದ ಪೊಲೀಸರು!

ಜಿಲ್ಲಾ ಉಸ್ತುವಾರಿ ಸಚಿವ ಮಲ್ಲಿಕಾರ್ಜುನ ಅವರು, ಒಂದೆಡೆ ಪತ್ರ ನೀಡುವುದು, ಇನ್ನೊಂದೆಡೆ ಪತ್ರಕ್ಕೆ ತಡೆ ನೀಡುವುದರ ಬಗ್ಗೆ ಇಬ್ಬಗೆ ನೀತಿ ಅನುಸರಿಸುತ್ತಿದ್ದಾರೆ. ದಾವಣಗೆರೆಯಿಂದ ವರ್ಗಾಯಿಸಲ್ಪಟ್ಟ ಓಡೆನಪುರ್​ ಇದೀಗ ಸರ್ಕಾರಿ ನೌಕರರ ಜಿಲ್ಲಾಧ್ಯಕ್ಷನಾಗಿ ಆಯ್ಕೆ ಆಗಿದ್ದಾರೆ. ಬಿಜೆಪಿ ಬೆಂಬಲದೊಂದಿಗೆ ಹೆಚ್ಚು ಹಣ ಖರ್ಚು ಮಾಡಿ ಜಿಲ್ಲಾಧ್ಯಕ್ಷ ಆಗಿದ್ದು, ಸ್ಥಳೀಯ ಕಾಂಗ್ರೆಸ್ ಶಾಸಕರ ಬೆಂಬಲಿತ ಅಭ್ಯರ್ಥಿಗೆ ಸೋಲು ಉಂಟಾಗಿದೆ. ಹೀಗಾಗಿ, ಅಧಿಕಾರಿ ಓಡೆನಪುರ್​ ಶಾಸಕರ ಬಗ್ಗೆ ಅಗೌರವದಿಂದ ಮಾತನಾಡುತ್ತಿದ್ದಾರೆ. ಇಷ್ಟಿದ್ದರೂ ಕಾಂಗ್ರೆಸ್ ಅಭ್ಯರ್ಥಿ ಸೋಲಿಸಿದವರ ಜತೆ ಜಿಲ್ಲಾ ಉಸ್ತುವಾರಿ ಸಚಿವರು ಸಾಥ್ ನೀಡುತ್ತಿದ್ದಾರೆ ಎಂದು ಶಾಸಕ ಶಿವಗಂಗಾ ಬಸವರಾಜ್ ಆರೋಪ ಮಾಡಿದ್ದಾರೆ.

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
Read more