ಅಮರನಾಥದಲ್ಲಿ ಸಿಲುಕಿರುವ  ನೂರು ಕನ್ನಡಿಗರೂ ಸೇಫ್: ಸಿಎಂ ಬೊಮ್ಮಾಯಿ

ಅಮರನಾಥದಲ್ಲಿ ಸಿಲುಕಿರುವ ನೂರು ಕನ್ನಡಿಗರೂ ಸೇಫ್: ಸಿಎಂ ಬೊಮ್ಮಾಯಿ

Published : Jul 09, 2022, 03:36 PM IST

ಅಮರನಾಥದಲ್ಲಿ ಮೇಘಸ್ಪೋಟದಲ್ಲಿ ನೂರು ಕನ್ನಡಿಗರು ಸಿಲುಕಿದ್ದು ಎಲ್ಲರೂ ಸುರಕ್ಷಿತವಾಗಿದ್ದಾರೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ. ಮುಖ್ಯ ಕಾರ್ಯದರ್ಶಿ ರಕ್ಷಣಾ ಕಾರ್ಯದ ವಿಚಾರವಾಗಿ ಕೇಂದ್ರದ ಜೊತೆ ಸಂಪರ್ಕದಲ್ಲಿದ್ದಾರೆ ಎಂದು ತಿಳಿಸಿದರು.

ಬೆಂಗಳೂರು (ಜುಲೈ 9): ಅಮರನಾಥದ (Amarnath) ಗುಹೆಯ (Holy Cave) ಸಮೀಪ ಶುಕ್ರವಾರ ಸಂಜೆ ಸಂಭವಿಸಿದ ಭಾರೀ ಮೇಘಸ್ಫೋಟದಲ್ಲಿ (Cloudburst) ಈವರೆಗೂ 16 ಮಂದಿ ಸಾವನ್ನಪ್ಪಿದ್ದಾರೆ. ಈ ವೇಳೆ ರಾಜ್ಯದ ಜನರ ಸುರಕ್ಷತೆಗಾಗಿ ರಾಜ್ಯ ಸರ್ಕಾರ ಸಹಾಯವಾಣಿಯನ್ನೂ ಆರಂಭಿಸಿದೆ.

ಒಟ್ಟು 100 ಮಂದಿ ಕನ್ನಡಿಗರು ಅಮರನಾಥದಲ್ಲಿದ್ದು ಇವರೆಲ್ಲರೂ ಸಂಪೂರ್ಣ ಸುರಕ್ಷಿತವಾಗಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Chief Minister Basavaraj bommai) ತಿಳಿಸಿದ್ದಾರೆ. ರಾಜ್ಯದ ಜನರನ್ನು ಸುರಕ್ಷಿತವಾಗಿ ಕರೆತರುವ ಬಗ್ಗೆ ಕೇಂದ್ರದ ಜೊತೆ ಮುಖ್ಯ ಕಾರ್ಯದರ್ಶಿ ನಿರಂತರವಾಗಿ ಸಂಪರ್ಕದಲ್ಲಿದ್ದಾರೆ ಎಂದು ತಿಳಿಸಿದ್ದಾರೆ.

ನಾವು ಸೇಫ್‌ ಇದ್ದೇವೆ, ಆರ್ಮಿಯವರು ಚೆನ್ನಾಗಿ ನೋಡಿಕೊಂಡರು: ಶಿವಮೊಗ್ಗದ ಮಹಿಳಾ ತಂಡ

ಮೈಸೂರು, ಶಿವಮೊಗ್ಗ ಹಾಗೂ ಬೀದರದ ಯಾತ್ರಾರ್ಥಿಗಳು ಸೇಫ್‌ ಅಗಿರುವ ಬಗ್ಗೆ ಶುಕ್ರವಾರವೇ ಮಾಹಿತಿ ಸಿಕ್ಕಿತ್ತು. ಸರ್ಕಾರ ನೀಡಿರುವ ಹೆಲ್ಪ್‌ಲೈನ್‌ಗೆ ಈಗಾಗಲೇ 15 ರಿಂದ 20 ಮಂದಿ ಕರೆ ಮಾಡಿ ತಾವಿರುವ ಸ್ಥಳವನ್ನು ತಿಳಿಸಿದ್ದು ಅವರ ರಕ್ಷಣೆಗೂ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more