ಅವರೇನಾ ಮಹಾ ಷಡ್ಯಂತ್ರದ ಮೂಲ ಪುರುಷ? ಬುರುಡೆ ಚಕ್ರವ್ಯೂಹ ಹೆಣೆದರಾ ತಮಿಳುನಾಡಿನ ಸಂಸದ?

ಅವರೇನಾ ಮಹಾ ಷಡ್ಯಂತ್ರದ ಮೂಲ ಪುರುಷ? ಬುರುಡೆ ಚಕ್ರವ್ಯೂಹ ಹೆಣೆದರಾ ತಮಿಳುನಾಡಿನ ಸಂಸದ?

Published : Aug 21, 2025, 01:16 PM IST
ಅನನ್ಯಾ ಭಟ್ ನಾಪತ್ತೆ ಪ್ರಕರಣವು ತಿರುವು ಪಡೆದುಕೊಂಡಿದ್ದು, ಇದು ಒಂದು ದೊಡ್ಡ ಷಡ್ಯಂತ್ರ ಎಂದು ಬಹಿರಂಗವಾಗಿದೆ. ಸುಜಾತಾ ಭಟ್ ತೋರಿಸಿದ ಫೋಟೋದ ಹುಡುಗಿ ಹುಟ್ಟೇ ಇಲ್ಲ ಎಂಬುದು ಬೆಳಕಿಗೆ ಬಂದಿದೆ. ಈ ಸುಳ್ಳಿನ ನಾಟಕದ ಹಿಂದೆ ತಮಿಳುನಾಡಿನ ಸಂಸದರ ಕೈವಾಡ ಇದೆ ಎಂದು ಬಿಜೆಪಿ ಆರೋಪಿಸಿದೆ.

ಬೆಂಗಳೂರು (ಆ.21): ಬಹುದಿನಗಳಿಂದ ಕುತೂಹಲ ಮೂಡಿಸಿದ್ದ 'ಅನನ್ಯಾ ಭಟ್ ಮಿಸ್ಸಿಂಗ್ ಮಿಸ್ಟರಿ' ಪ್ರಕರಣವು ಇದೀಗ ಪಕ್ಕಾ ಸಿನಿಮಾ ಕಥೆಯಂತೆ ತಿರುವು ಪಡೆದುಕೊಂಡಿದೆ. ಇದು ಹುಟ್ಟು ಸುಳ್ಳು, ಫೋಟೋ ಸುಳ್ಳು ಮತ್ತು ಒಂದು ದೊಡ್ಡ ಷಡ್ಯಂತ್ರದ ಭಾಗ ಎಂದು ವರದಿಗಳು ಬಹಿರಂಗಪಡಿಸಿವೆ. ಈ ಇಡೀ ಬುರುಡೆ  ಕಥೆಯ ಸೂತ್ರಧಾರ ತಮಿಳುನಾಡಿನ ಸಂಸದ ಎಂದು ಬಿಜೆಪಿ ಆರೋಪಿಸಿದ್ದು, ಈ ಆರೋಪ ರಾಜ್ಯ ರಾಜಕಾರಣದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ.

ಹಣದಾಸೆಗೆ ಹೆಣ್ಣು-ಹೆಣ ಕಥೆ? ಅನನ್ಯಾ ಭಟ್ – ಸುಜಾತ ರಹಸ್ಯ ಬಯಲಿಗೆ!

ಅನನ್ಯಾ ಭಟ್ ಎಂಬುವವರನ್ನು ತನ್ನ ಮಗಳು ಎಂದು ಹೇಳಿಕೊಂಡಿದ್ದ ಸುಜಾತಾ ಭಟ್, ಆಕೆಯ ಫೋಟೋ ತೋರಿಸಿ ಈ ಪ್ರಕರಣವನ್ನು ಮುನ್ನೆಲೆಗೆ ತಂದಿದ್ದರು. ಆದರೆ, 'ಸುಳ್ಳಿನ ಸಾಮ್ರಾಜ್ಯ' ಎಂದು ಬಣ್ಣಿಸಲಾದ ಈ ಕಥೆಯಲ್ಲಿ ಅನನ್ಯಾ ಭಟ್ ಹುಟ್ಟೇ ಇಲ್ಲ ಎಂದು ಸುಜಾತಾ ಭಟ್ ಅವರ ಬಾವನೇ ಹೇಳಿಕೆ ನೀಡಿದ್ದಾರೆ.

ಸುಜಾತಾ ಭಟ್ ಅವರು 2003ರಲ್ಲಿ ಕೊಲ್ಕತ್ತಾದಲ್ಲಿ ಸಿಬಿಐ ಸ್ಟೆನೋಗ್ರಾಫರ್ ಆಗಿದ್ದೆ ಎಂದು ಹೇಳಿಕೊಂಡರೆ, ಆ ಸಮಯದಲ್ಲಿ ಅವರು ಶಿವಮೊಗ್ಗದ ರಿಪ್ಪನ್‌ಪೇಟೆಯಲ್ಲಿದ್ದರು ಮತ್ತು ಅವರಿಗೆ ಮಕ್ಕಳಿರಲಿಲ್ಲ ಎಂದು ಸಾಕ್ಷಿಗಳು ಹೇಳುತ್ತಿವೆ.
 

26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್
Read more