ಮತ್ತೊಂದು ಹಗರಣ ಬಯಲು! RTOನಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ, ಸರ್ಕಾರದ ಮೌನ?

ಮತ್ತೊಂದು ಹಗರಣ ಬಯಲು! RTOನಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ, ಸರ್ಕಾರದ ಮೌನ?

Published : Jul 05, 2022, 12:50 PM IST

ರಾಜ್ಯದ ಆರ್‌ಟಿಒ ಕಚೇರಿಗಳಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ನಡೆಯುತ್ತಿದೆ. ಸರ್ಕಾರದ ಬೊಕ್ಕಸಕ್ಕೆ ದೊಡ್ಡ ಕತ್ತರಿ ಹಾಕಲಾಗುತ್ತಿದೆ. ಆದರೆ ಸರ್ಕಾರ ಮಾತ್ರ ಈ ವಿಚಾರದಲ್ಲಿ ಮೌನವಾಗಿ ಕುಳಿತುಕೊಂಡಿದೆ.

ಬೆಂಗಳೂರು (ಜುಲೈ 5): ಆದಾಯ ತರುವಂಥ ಇಲಾಖೆಯಲ್ಲಿಯೇ ಬ್ರಹ್ಮಾಂಡ ಭ್ರಷ್ಟಾಚಾರ ವರದಿಯಾಗಿದೆ.  ತೆರಿಗೆ ಕಟ್ಟಿಸಿಕೊಳ್ಳದೆ ಸರ್ಕಾರಕ್ಕೆಕೋಟಿ ಕೋಟಿ ವಂಚನೆ ನಡೆದಿರುವ ಪ್ರಕರಣ ಬೆಳಕಿಗೆ ಬಂದಿದೆ. ಪ್ರಭಾವಿಗಳ ತೆರಿಗೆ ವಂಚನೆಗೆ ಸರ್ಕಾರಿ ಅಧಿಕಾರಿಗಳೇ ಇಲ್ಲಿ ಸಾಥ್‌ ನೀಡಿದ್ದಾರೆ.

ರಾಜ್ಯದ ಆರ್‌ಟಿಒ (RTO Office) ಕಚೇರಿಯಿಂದಲೇ ಸರ್ಕಾರಕ್ಕೆ ಮಹಾಮೋಸವಾಗಿರುವ ಪ್ರಕರಣ ವರದಿಯಾಗಿದೆ. ಐಷಾರಾಮಿ ಕಾರುಗಳ ಲೈಫ್‌ ಟ್ಯಾಕ್ಸ್ (Life Tax), ಸೆಸ್‌ ಪಾವತಿಸದೆ ವಂಚನೆ ಮಾಡಿರುವ ಘಟನೆ ನಡೆದಿದೆ. ರಾಜ್ಯದ ಬೇರೆ ಬೇರೆ ಆರ್‌ಟಿಓ ಕಚೇರಿಗಳಲ್ಲಿ ಈ ವಂಚನೆ ನಡೆದಿದೆ. ಐಷಾರಾಮಿ ಕಾರುಗಳಿಗೆ ತೆರಿಗೆ ಕಟ್ಟಿಸಿಕೊಳ್ಳದೆ ನೋಂದಣಿ ಮಾಡಿಕೊಳ್ಳಲಾಗಿದೆ.

ಸಾರಿಗೆ ಇಲಾಖೆಯ ಆನ್‌ಲೈನ್ ವಾಹನ ಸೇವೆಗೆ ಅಧಿಕಾರಿಗಳ ವಿರೋಧ: 1.7 ಲಕ್ಷ ಅರ್ಜಿಗಳ ವಿಲೇವಾರಿ ಬಾಕಿ

ತೆರಿಗೆ ವಂಚನೆಯಲ್ಲಿ ಕಾರು ಮಾಲೀಕರಿಗೆ ಅಧಿಕಾರಿಗಳು ಸಾಥ್‌ ನೀಡಿದ್ದಾರೆ. ಒಟ್ಟಾರೆ ಅರ್‌ಟಿಓ ಕಚೇರಿಯಿಂದ 100 ಕೋಟಿ ರೂಪಾಯಿ ತೆರಿಗೆ ವಂಚನೆ ಆಗಿರುವ ಮಾಹಿತಿ ಸಿಕ್ಕಿದೆ.
ಕೋರಮಂಗಲ ಆರ್‌ಟಿಒನಲ್ಲಿ 100 ಕಾರುಗಳಿಂದ ತೆರಿಗೆ ವಸೂಲಿ ಮಾಡದೆ ಅಧಿಕಾರಿಗಳು ನೋಂದಣಿ ಮಾಡಿದ್ದಾರೆ.  ಆದರೆ, ಆರ್‌ಟಿಓ ಕಚೇರಿಗಳ ಮಹಾಮೋಸಕ್ಕೆ ಸರ್ಕಾರ ದಿವ್ಯ ಮೌನ ವಹಿಸಿದೆ. ತೆರಿಗೆ ವಂಚನೆಗೆ ಸಹಕರಿಸಿದವರಿಗೆ ಸರ್ಕಾರ ಶಿಕ್ಷೆ ನೀಡೋದಿಲ್ವಾ? ಭ್ರಷ್ಟ ಅಧಿಕಾರಿಗಳ ಬೆನ್ನಿಗೆ ಸರ್ಕಾರ ನಿಂತಿದೆಯೇ ಎನ್ನುವ ಅನುಮಾನ ಕಾಡಿದೆ. 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
Read more