ಮತ್ತೊಂದು ಹಗರಣ ಬಯಲು! RTOನಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ, ಸರ್ಕಾರದ ಮೌನ?

ಮತ್ತೊಂದು ಹಗರಣ ಬಯಲು! RTOನಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ, ಸರ್ಕಾರದ ಮೌನ?

Published : Jul 05, 2022, 12:50 PM IST

ರಾಜ್ಯದ ಆರ್‌ಟಿಒ ಕಚೇರಿಗಳಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ನಡೆಯುತ್ತಿದೆ. ಸರ್ಕಾರದ ಬೊಕ್ಕಸಕ್ಕೆ ದೊಡ್ಡ ಕತ್ತರಿ ಹಾಕಲಾಗುತ್ತಿದೆ. ಆದರೆ ಸರ್ಕಾರ ಮಾತ್ರ ಈ ವಿಚಾರದಲ್ಲಿ ಮೌನವಾಗಿ ಕುಳಿತುಕೊಂಡಿದೆ.

ಬೆಂಗಳೂರು (ಜುಲೈ 5): ಆದಾಯ ತರುವಂಥ ಇಲಾಖೆಯಲ್ಲಿಯೇ ಬ್ರಹ್ಮಾಂಡ ಭ್ರಷ್ಟಾಚಾರ ವರದಿಯಾಗಿದೆ.  ತೆರಿಗೆ ಕಟ್ಟಿಸಿಕೊಳ್ಳದೆ ಸರ್ಕಾರಕ್ಕೆಕೋಟಿ ಕೋಟಿ ವಂಚನೆ ನಡೆದಿರುವ ಪ್ರಕರಣ ಬೆಳಕಿಗೆ ಬಂದಿದೆ. ಪ್ರಭಾವಿಗಳ ತೆರಿಗೆ ವಂಚನೆಗೆ ಸರ್ಕಾರಿ ಅಧಿಕಾರಿಗಳೇ ಇಲ್ಲಿ ಸಾಥ್‌ ನೀಡಿದ್ದಾರೆ.

ರಾಜ್ಯದ ಆರ್‌ಟಿಒ (RTO Office) ಕಚೇರಿಯಿಂದಲೇ ಸರ್ಕಾರಕ್ಕೆ ಮಹಾಮೋಸವಾಗಿರುವ ಪ್ರಕರಣ ವರದಿಯಾಗಿದೆ. ಐಷಾರಾಮಿ ಕಾರುಗಳ ಲೈಫ್‌ ಟ್ಯಾಕ್ಸ್ (Life Tax), ಸೆಸ್‌ ಪಾವತಿಸದೆ ವಂಚನೆ ಮಾಡಿರುವ ಘಟನೆ ನಡೆದಿದೆ. ರಾಜ್ಯದ ಬೇರೆ ಬೇರೆ ಆರ್‌ಟಿಓ ಕಚೇರಿಗಳಲ್ಲಿ ಈ ವಂಚನೆ ನಡೆದಿದೆ. ಐಷಾರಾಮಿ ಕಾರುಗಳಿಗೆ ತೆರಿಗೆ ಕಟ್ಟಿಸಿಕೊಳ್ಳದೆ ನೋಂದಣಿ ಮಾಡಿಕೊಳ್ಳಲಾಗಿದೆ.

ಸಾರಿಗೆ ಇಲಾಖೆಯ ಆನ್‌ಲೈನ್ ವಾಹನ ಸೇವೆಗೆ ಅಧಿಕಾರಿಗಳ ವಿರೋಧ: 1.7 ಲಕ್ಷ ಅರ್ಜಿಗಳ ವಿಲೇವಾರಿ ಬಾಕಿ

ತೆರಿಗೆ ವಂಚನೆಯಲ್ಲಿ ಕಾರು ಮಾಲೀಕರಿಗೆ ಅಧಿಕಾರಿಗಳು ಸಾಥ್‌ ನೀಡಿದ್ದಾರೆ. ಒಟ್ಟಾರೆ ಅರ್‌ಟಿಓ ಕಚೇರಿಯಿಂದ 100 ಕೋಟಿ ರೂಪಾಯಿ ತೆರಿಗೆ ವಂಚನೆ ಆಗಿರುವ ಮಾಹಿತಿ ಸಿಕ್ಕಿದೆ.
ಕೋರಮಂಗಲ ಆರ್‌ಟಿಒನಲ್ಲಿ 100 ಕಾರುಗಳಿಂದ ತೆರಿಗೆ ವಸೂಲಿ ಮಾಡದೆ ಅಧಿಕಾರಿಗಳು ನೋಂದಣಿ ಮಾಡಿದ್ದಾರೆ.  ಆದರೆ, ಆರ್‌ಟಿಓ ಕಚೇರಿಗಳ ಮಹಾಮೋಸಕ್ಕೆ ಸರ್ಕಾರ ದಿವ್ಯ ಮೌನ ವಹಿಸಿದೆ. ತೆರಿಗೆ ವಂಚನೆಗೆ ಸಹಕರಿಸಿದವರಿಗೆ ಸರ್ಕಾರ ಶಿಕ್ಷೆ ನೀಡೋದಿಲ್ವಾ? ಭ್ರಷ್ಟ ಅಧಿಕಾರಿಗಳ ಬೆನ್ನಿಗೆ ಸರ್ಕಾರ ನಿಂತಿದೆಯೇ ಎನ್ನುವ ಅನುಮಾನ ಕಾಡಿದೆ. 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
Read more