ಮತ್ತೊಂದು ಹಗರಣ ಬಯಲು! RTOನಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ, ಸರ್ಕಾರದ ಮೌನ?

ಮತ್ತೊಂದು ಹಗರಣ ಬಯಲು! RTOನಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ, ಸರ್ಕಾರದ ಮೌನ?

Published : Jul 05, 2022, 12:50 PM IST

ರಾಜ್ಯದ ಆರ್‌ಟಿಒ ಕಚೇರಿಗಳಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ನಡೆಯುತ್ತಿದೆ. ಸರ್ಕಾರದ ಬೊಕ್ಕಸಕ್ಕೆ ದೊಡ್ಡ ಕತ್ತರಿ ಹಾಕಲಾಗುತ್ತಿದೆ. ಆದರೆ ಸರ್ಕಾರ ಮಾತ್ರ ಈ ವಿಚಾರದಲ್ಲಿ ಮೌನವಾಗಿ ಕುಳಿತುಕೊಂಡಿದೆ.

ಬೆಂಗಳೂರು (ಜುಲೈ 5): ಆದಾಯ ತರುವಂಥ ಇಲಾಖೆಯಲ್ಲಿಯೇ ಬ್ರಹ್ಮಾಂಡ ಭ್ರಷ್ಟಾಚಾರ ವರದಿಯಾಗಿದೆ.  ತೆರಿಗೆ ಕಟ್ಟಿಸಿಕೊಳ್ಳದೆ ಸರ್ಕಾರಕ್ಕೆಕೋಟಿ ಕೋಟಿ ವಂಚನೆ ನಡೆದಿರುವ ಪ್ರಕರಣ ಬೆಳಕಿಗೆ ಬಂದಿದೆ. ಪ್ರಭಾವಿಗಳ ತೆರಿಗೆ ವಂಚನೆಗೆ ಸರ್ಕಾರಿ ಅಧಿಕಾರಿಗಳೇ ಇಲ್ಲಿ ಸಾಥ್‌ ನೀಡಿದ್ದಾರೆ.

ರಾಜ್ಯದ ಆರ್‌ಟಿಒ (RTO Office) ಕಚೇರಿಯಿಂದಲೇ ಸರ್ಕಾರಕ್ಕೆ ಮಹಾಮೋಸವಾಗಿರುವ ಪ್ರಕರಣ ವರದಿಯಾಗಿದೆ. ಐಷಾರಾಮಿ ಕಾರುಗಳ ಲೈಫ್‌ ಟ್ಯಾಕ್ಸ್ (Life Tax), ಸೆಸ್‌ ಪಾವತಿಸದೆ ವಂಚನೆ ಮಾಡಿರುವ ಘಟನೆ ನಡೆದಿದೆ. ರಾಜ್ಯದ ಬೇರೆ ಬೇರೆ ಆರ್‌ಟಿಓ ಕಚೇರಿಗಳಲ್ಲಿ ಈ ವಂಚನೆ ನಡೆದಿದೆ. ಐಷಾರಾಮಿ ಕಾರುಗಳಿಗೆ ತೆರಿಗೆ ಕಟ್ಟಿಸಿಕೊಳ್ಳದೆ ನೋಂದಣಿ ಮಾಡಿಕೊಳ್ಳಲಾಗಿದೆ.

ಸಾರಿಗೆ ಇಲಾಖೆಯ ಆನ್‌ಲೈನ್ ವಾಹನ ಸೇವೆಗೆ ಅಧಿಕಾರಿಗಳ ವಿರೋಧ: 1.7 ಲಕ್ಷ ಅರ್ಜಿಗಳ ವಿಲೇವಾರಿ ಬಾಕಿ

ತೆರಿಗೆ ವಂಚನೆಯಲ್ಲಿ ಕಾರು ಮಾಲೀಕರಿಗೆ ಅಧಿಕಾರಿಗಳು ಸಾಥ್‌ ನೀಡಿದ್ದಾರೆ. ಒಟ್ಟಾರೆ ಅರ್‌ಟಿಓ ಕಚೇರಿಯಿಂದ 100 ಕೋಟಿ ರೂಪಾಯಿ ತೆರಿಗೆ ವಂಚನೆ ಆಗಿರುವ ಮಾಹಿತಿ ಸಿಕ್ಕಿದೆ.
ಕೋರಮಂಗಲ ಆರ್‌ಟಿಒನಲ್ಲಿ 100 ಕಾರುಗಳಿಂದ ತೆರಿಗೆ ವಸೂಲಿ ಮಾಡದೆ ಅಧಿಕಾರಿಗಳು ನೋಂದಣಿ ಮಾಡಿದ್ದಾರೆ.  ಆದರೆ, ಆರ್‌ಟಿಓ ಕಚೇರಿಗಳ ಮಹಾಮೋಸಕ್ಕೆ ಸರ್ಕಾರ ದಿವ್ಯ ಮೌನ ವಹಿಸಿದೆ. ತೆರಿಗೆ ವಂಚನೆಗೆ ಸಹಕರಿಸಿದವರಿಗೆ ಸರ್ಕಾರ ಶಿಕ್ಷೆ ನೀಡೋದಿಲ್ವಾ? ಭ್ರಷ್ಟ ಅಧಿಕಾರಿಗಳ ಬೆನ್ನಿಗೆ ಸರ್ಕಾರ ನಿಂತಿದೆಯೇ ಎನ್ನುವ ಅನುಮಾನ ಕಾಡಿದೆ. 

18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
Read more