ಮತ್ತೊಂದು ಹಗರಣ ಬಯಲು! RTOನಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ, ಸರ್ಕಾರದ ಮೌನ?

ಮತ್ತೊಂದು ಹಗರಣ ಬಯಲು! RTOನಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ, ಸರ್ಕಾರದ ಮೌನ?

Published : Jul 05, 2022, 12:50 PM IST

ರಾಜ್ಯದ ಆರ್‌ಟಿಒ ಕಚೇರಿಗಳಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ನಡೆಯುತ್ತಿದೆ. ಸರ್ಕಾರದ ಬೊಕ್ಕಸಕ್ಕೆ ದೊಡ್ಡ ಕತ್ತರಿ ಹಾಕಲಾಗುತ್ತಿದೆ. ಆದರೆ ಸರ್ಕಾರ ಮಾತ್ರ ಈ ವಿಚಾರದಲ್ಲಿ ಮೌನವಾಗಿ ಕುಳಿತುಕೊಂಡಿದೆ.

ಬೆಂಗಳೂರು (ಜುಲೈ 5): ಆದಾಯ ತರುವಂಥ ಇಲಾಖೆಯಲ್ಲಿಯೇ ಬ್ರಹ್ಮಾಂಡ ಭ್ರಷ್ಟಾಚಾರ ವರದಿಯಾಗಿದೆ.  ತೆರಿಗೆ ಕಟ್ಟಿಸಿಕೊಳ್ಳದೆ ಸರ್ಕಾರಕ್ಕೆಕೋಟಿ ಕೋಟಿ ವಂಚನೆ ನಡೆದಿರುವ ಪ್ರಕರಣ ಬೆಳಕಿಗೆ ಬಂದಿದೆ. ಪ್ರಭಾವಿಗಳ ತೆರಿಗೆ ವಂಚನೆಗೆ ಸರ್ಕಾರಿ ಅಧಿಕಾರಿಗಳೇ ಇಲ್ಲಿ ಸಾಥ್‌ ನೀಡಿದ್ದಾರೆ.

ರಾಜ್ಯದ ಆರ್‌ಟಿಒ (RTO Office) ಕಚೇರಿಯಿಂದಲೇ ಸರ್ಕಾರಕ್ಕೆ ಮಹಾಮೋಸವಾಗಿರುವ ಪ್ರಕರಣ ವರದಿಯಾಗಿದೆ. ಐಷಾರಾಮಿ ಕಾರುಗಳ ಲೈಫ್‌ ಟ್ಯಾಕ್ಸ್ (Life Tax), ಸೆಸ್‌ ಪಾವತಿಸದೆ ವಂಚನೆ ಮಾಡಿರುವ ಘಟನೆ ನಡೆದಿದೆ. ರಾಜ್ಯದ ಬೇರೆ ಬೇರೆ ಆರ್‌ಟಿಓ ಕಚೇರಿಗಳಲ್ಲಿ ಈ ವಂಚನೆ ನಡೆದಿದೆ. ಐಷಾರಾಮಿ ಕಾರುಗಳಿಗೆ ತೆರಿಗೆ ಕಟ್ಟಿಸಿಕೊಳ್ಳದೆ ನೋಂದಣಿ ಮಾಡಿಕೊಳ್ಳಲಾಗಿದೆ.

ಸಾರಿಗೆ ಇಲಾಖೆಯ ಆನ್‌ಲೈನ್ ವಾಹನ ಸೇವೆಗೆ ಅಧಿಕಾರಿಗಳ ವಿರೋಧ: 1.7 ಲಕ್ಷ ಅರ್ಜಿಗಳ ವಿಲೇವಾರಿ ಬಾಕಿ

ತೆರಿಗೆ ವಂಚನೆಯಲ್ಲಿ ಕಾರು ಮಾಲೀಕರಿಗೆ ಅಧಿಕಾರಿಗಳು ಸಾಥ್‌ ನೀಡಿದ್ದಾರೆ. ಒಟ್ಟಾರೆ ಅರ್‌ಟಿಓ ಕಚೇರಿಯಿಂದ 100 ಕೋಟಿ ರೂಪಾಯಿ ತೆರಿಗೆ ವಂಚನೆ ಆಗಿರುವ ಮಾಹಿತಿ ಸಿಕ್ಕಿದೆ.
ಕೋರಮಂಗಲ ಆರ್‌ಟಿಒನಲ್ಲಿ 100 ಕಾರುಗಳಿಂದ ತೆರಿಗೆ ವಸೂಲಿ ಮಾಡದೆ ಅಧಿಕಾರಿಗಳು ನೋಂದಣಿ ಮಾಡಿದ್ದಾರೆ.  ಆದರೆ, ಆರ್‌ಟಿಓ ಕಚೇರಿಗಳ ಮಹಾಮೋಸಕ್ಕೆ ಸರ್ಕಾರ ದಿವ್ಯ ಮೌನ ವಹಿಸಿದೆ. ತೆರಿಗೆ ವಂಚನೆಗೆ ಸಹಕರಿಸಿದವರಿಗೆ ಸರ್ಕಾರ ಶಿಕ್ಷೆ ನೀಡೋದಿಲ್ವಾ? ಭ್ರಷ್ಟ ಅಧಿಕಾರಿಗಳ ಬೆನ್ನಿಗೆ ಸರ್ಕಾರ ನಿಂತಿದೆಯೇ ಎನ್ನುವ ಅನುಮಾನ ಕಾಡಿದೆ. 

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
Read more