'ತರಾತುರಿಯಲ್ಲಿ ಮತಾಂತರ ನಿಷೇಧಕ್ಕೆ ಹುನ್ನಾರ ಇದು. ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ದಮನ ಮಾಡುವ ಕೆಲಸ. ವೋಟ್ ಬ್ಯಾಂಕ್ಗಾಗಿ ತಮ್ಮ ಅಜೆಂಡಾವನ್ನು ಜಾರಿಗೆ ತರುತ್ತಿದ್ದಾರೆ. ಇದರಿಂದ ಬಿಜೆಪಿ ಏನನ್ನೂ ಸಾಧಿಸಿದಂತಾಗುವುದಿಲ್ಲ' ಎಂದು ಎಚ್ಡಿಕೆ ಹೇಳಿದ್ದಾರೆ.
ಬೆಂಗಳೂರು (ಡಿ. 22): ರಾಜ್ಯದಲ್ಲಿ ಒತ್ತಾಯ ಅಥವಾ ಆಮಿಷವೊಡ್ಡಿ ಮತಾಂತರ ಮಾಡುವುದಕ್ಕೆ ಕಡಿವಾಣ ಹಾಕುವ ಉದ್ದೇಶದಿಂದ ಕನಿಷ್ಠ 3 ರಿಂದ 10 ವರ್ಷದವರೆಗೆ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಲು ಅವಕಾಶ ಕಲ್ಪಿಸುವ ‘ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ ವಿಧೇಯಕ-2021’ (Anti Conversion Bill) ಅನ್ನು ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ವಿಧಾನಸಭೆಯಲ್ಲಿ ಮಂಡಿಸಲಾಯಿತು. ಕಾರ್ಯ ಕಲಾಪ ಪಟ್ಟಿ ಪ್ರಸ್ತಾಪಿಸದೆ ಏಕಾಏಕಿ ವಿಧೇಯಕವನ್ನು ಪರ್ಯಾಲೋಚನೆಗೆ ಮಂಡನೆ ಮಾಡಿದ್ದಕ್ಕೆ ಕಾಂಗ್ರೆಸ್ ಹಾಗೂ ಜೆಡಿಎಸ್ ಸದಸ್ಯರು ಆಕ್ರೋಶ ವ್ಯಕ್ತಪಡಿಸಿದರು.
'ತರಾತುರಿಯಲ್ಲಿ ಮತಾಂತರ ನಿಷೇಧಕ್ಕೆ ಹುನ್ನಾರ ಇದು. ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ದಮನ ಮಾಡುವ ಕೆಲಸ. ವೋಟ್ ಬ್ಯಾಂಕ್ಗಾಗಿ ತಮ್ಮ ಅಜೆಂಡಾವನ್ನು ಜಾರಿಗೆ ತರುತ್ತಿದ್ದಾರೆ. ಇದರಿಂದ ಬಿಜೆಪಿ ಏನನ್ನೂ ಸಾಧಿಸಿದಂತಾಗುವುದಿಲ್ಲ' ಎಂದು ಎಚ್ಡಿಕೆ ಹೇಳಿದ್ದಾರೆ.