ರಾಜ್ಯದ 80 ಸ್ಥಳಗಳಲ್ಲಿ 21 ಭ್ರಷ್ಟರ ಮನೆಗಳು ಹಾಗೂ ಅವರಿಗೆ ಸಂಬಂಧಪಟ್ಟ ಸ್ಥಳಗಳ ಮೇಲೆ ಭ್ರಷ್ಟಾಚಾರ ವಿರೋಧಇ ಘಟಕ (ಎಸಿಬಿ) ದಾಳಿ ನಡೆಸಿದೆ. ಈ ದಾಳಿಯಲ್ಲಿ ಒಟ್ಟಾರೆ 300 ಅಧಿಕಾರಿಗಳು ಭಾಗಿಯಾಗಿದ್ದರು.
ಬೆಂಗಳೂರು (ಜೂನ್ 18): ಕರ್ನಾಟಕದ ಭ್ರಷ್ಟಾಚಾರ ನಿಗ್ರಹ ದಳದ (Anti Corruption Bureau of Karnataka) ಅಧಿಕಾರಿಗಳು ಭ್ರಷ್ಟಾಚಾರದ (Corruption) ಶಂಕೆ ಮಾಡಲಾದ 21 ಸರ್ಕಾರಿ ಅಧಿಕಾರಿಗಳ ಕಚೇರಿಗಳು ಮತ್ತು ಮನೆಗಳ ಮೇಲೆ ದಾಳಿ ನಡೆಸಿದ್ದಾರೆ. 300 ಅಧಿಕಾರಿಗಳನ್ನು ಬಳಸಿಕೊಂಡು 80 ಸ್ಥಳಗಳಲ್ಲಿ ದಾಳಿ ನಡೆಸಲಾಗಿತ್ತು.
ಶುಕ್ರವಾರ ಬೆಳಗ್ಗೆಯಿಂದಲೇ ಆರಂಭವಾದ ಕಸರತ್ತು 300 ಅಧಿಕಾರಿಗಳು ಮತ್ತು ಸಿಬ್ಬಂದಿ ಭಾಗವಹಿಸಿದ್ದರು ಎಂದು ಎಸಿಬಿ ತಿಳಿಸಿದೆ. ಎಸಿಬಿ (ACB) ಅಧಿಕಾರಿಗಳ ಪ್ರಕಾರ ಕರ್ನಾಟಕದ 14 ಜಿಲ್ಲೆಗಳಲ್ಲಿ ದಾಳಿ ನಡೆಸಲಾಗುತ್ತಿದೆ. ಲೋಕೋಪಯೋಗಿ ಇಲಾಖೆ, ದೊಡ್ಡ ಮತ್ತು ಸಣ್ಣ ನೀರಾವರಿ ಇಲಾಖೆಗಳು, ಸಾರಿಗೆ ಇಲಾಖೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಗಳ ಅಧಿಕಾರಿಗಳು ಮತ್ತು ಇತರರ ಮೇಲೆ ದಾಳಿ ನಡೆಸಲಾಗಿದೆ.
ಎಸಿಬಿ ದಾಳಿ: ಬಚ್ಚಲಲ್ಲಿ ಹಣ ಬಚ್ಚಿಟ್ಟಿದ್ದ ಭ್ರಷ್ಟ ಅಧಿಕಾರಿ..!
ಬೆಂಗಳೂರಿನಲ್ಲಿ ಎಸಿಬಿ ಅಧಿಕಾರಿಗಳು ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ನಿವೃತ್ತ ಮೌಲ್ಯಮಾಪನ ಕುಲಸಚಿವ ಜನಾರ್ದನಂ ಮತ್ತು ಉಪ ಮುಖ್ಯ ವಿದ್ಯುತ್ ಅಧಿಕಾರಿ ಸಿದ್ದಪ್ಪ ಟಿ ಎಂಬ ಇಬ್ಬರು ಅಧಿಕಾರಿಗಳ 10 ಸ್ಥಳಗಳಲ್ಲಿ ದಾಳಿ ನಡೆಸಿದ್ದರು.