ಕೊರೋನಾ ಆತಂಕ: ರಾಜ್ಯದಲ್ಲಿ ಸದ್ದಿಲ್ಲದೇ ನಡೆಯುತ್ತಿದೆ ಆಘಾತಕಾರಿ ಬೆಳವಣಿಗೆ!

May 11, 2020, 1:33 PM IST

ಬೆಂಗಳೂರು(ಮೇ.11): ಕೊರೋನಾ ಹಾವಳಿ ದಿನೇ ದಿನೇ ಹೆಚ್ಚಾಗುತ್ತಿದೆ. ಹೀಗಿರುವಾಗಲೇ ರಾಜ್ಯದಲ್ಲಿ ಸದ್ದಿಲ್ಲದೇ ಆಘಾತಕಾರಿ ಬೆಳವಣಿಗೆಯೊಂದು ನಡೆಯುತ್ತಿದೆ.

ಹೌದು ಕರ್ನಾಟಕದಲ್ಲಿ ಕೊರೋನಾ ಲಕ್ಷಣಗಳು ಗೋಚರಿಸದವರಲ್ಲೂ ಸೋಂಕು ಕಾಣಿಸಿಕೊಂಡಿದ್ದು, ಆತಂಕ ಹೆಚ್ಚಿಸಿದೆ. ಇದು ಸರ್ಕಾರಕ್ಕೆ ಮತ್ತೊಂದು ತಲೆನೋವಾಗಿ ಪರಿಣಮಿಸಿದೆ.

ಆರೋಗ್ಯವಂತರಾಗಿದ್ದವರಲ್ಲೂ ಕೊರೋನಾ ಸೋಂಕು ಕಾಣಿಸಿಕೊಳ್ಳುತ್ತಿರುವುದರಿಂದ ಜನರನ್ನು ಎಚ್ಚರದಿಂದಿರಲು ವೈದ್ಯಾಧಿಕಾರಿಗಳು ಮನವಿ ಮಾಡಿಕೊಂಡಿದ್ದಾರೆ.