ಕೊರೋನಾ ಕಮಾಂಡರ್‌ವೊಬ್ಬರ ಜೀವ ಉಳಿಸಲಾಗದೇ ಕೈಚೆಲ್ಲಿದ ಬಿಬಿಎಂಪಿ..!

ಕೊರೋನಾ ಕಮಾಂಡರ್‌ವೊಬ್ಬರ ಜೀವ ಉಳಿಸಲಾಗದೇ ಕೈಚೆಲ್ಲಿದ ಬಿಬಿಎಂಪಿ..!

Suvarna News   | Asianet News
Published : Jul 16, 2020, 12:04 PM IST

ಶಿವನಗರದ ಬಿಬಿಎಂಪಿ ವರ್ಕ್ ಇನ್ಸ್‌ಪೆಕ್ಟರ್ ಇದೀಗ ಬಿಬಿಎಂಪಿ ನಿರ್ಲಕ್ಷ್ಯ ವ್ಯವಸ್ಥೆಗೆ ಬಲಿಯಾಗಿದ್ದಾರೆ. ಬಿಬಿಎಂಪಿ ಅಧಿಕಾರಿ ಒಂದುವರೆ ತಿಂಗಳುಗಳ ಕಾಲ ರೈಲ್ವೇ ಸ್ಟೇಷನ್‌ನಲ್ಲಿ ಕ್ವಾರಂಟೈನ್ ಡ್ಯೂಟಿ ಮಾಡಿದ್ದಾರೆ. ಮಳೆಯಲ್ಲೇ ನೆನೆದುಕೊಂಡು ಎರಡು ದಿನ ಕೆಲಸ ನಿರ್ವಹಿಸಿದ್ದಾರೆ. ಆದರೆ ಈ ಕೊರೋನಾ ಕಮಾಂಡರ್ ಜೀವ ಉಳಿಸಲಾಗದೇ ಬಿಬಿಎಂಪಿ ಕೈಚೆಲ್ಲಿದೆ.

ಬೆಂಗಳೂರು(ಜು.16): ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕೊರೋನಾ ಅಬ್ಬರ ಜೋರಾಗಿದೆ. ಇದೇ ವೇಳೆ ಬಿಬಿಎಂಪಿಯ ದಿವ್ಯನಿರ್ಲಕ್ಷ್ಯ ಮತ್ತೊಮ್ಮೆ ಬಟಾಬಯಲಾಗಿದೆ. ಡೋಂಟ್ ಕೇರ್, ಕೇರ್ ಲೆಸ್ ಬಿಬಿಎಂಪಿ ಕಥೆಯನ್ನು ಸುವರ್ಣ ನ್ಯೂಸ್ ನಿಮ್ಮ ಮುಂದೆ ಬಿಚ್ಚಿಟ್ಟಿದೆ ನೋಡಿ.

ಹೌದು, ಶಿವನಗರದ ಬಿಬಿಎಂಪಿ ವರ್ಕ್ ಇನ್ಸ್‌ಪೆಕ್ಟರ್ ಇದೀಗ ಬಿಬಿಎಂಪಿ ನಿರ್ಲಕ್ಷ್ಯ ವ್ಯವಸ್ಥೆಗೆ ಬಲಿಯಾಗಿದ್ದಾರೆ. ಬಿಬಿಎಂಪಿ ಅಧಿಕಾರಿ ಒಂದುವರೆ ತಿಂಗಳುಗಳ ಕಾಲ ರೈಲ್ವೇ ಸ್ಟೇಷನ್‌ನಲ್ಲಿ ಕ್ವಾರಂಟೈನ್ ಡ್ಯೂಟಿ ಮಾಡಿದ್ದಾರೆ. ಮಳೆಯಲ್ಲೇ ನೆನೆದುಕೊಂಡು ಎರಡು ದಿನ ಕೆಲಸ ನಿರ್ವಹಿಸಿದ್ದಾರೆ. ಆದರೆ ಈ ಕೊರೋನಾ ಕಮಾಂಡರ್ ಜೀವ ಉಳಿಸಲಾಗದೇ ಬಿಬಿಎಂಪಿ ಕೈಚೆಲ್ಲಿದೆ.

ಉಸಿರಾಟದ ತೊಂದರೆ ಅನುಭವಿಸುತ್ತಿದ್ದ ಆ ಅಧಿಕಾರಿಗೆ ಸೂಕ್ತ ಆಸ್ಪತ್ರೆಯಲ್ಲಿ ಚಿಕಿತ್ಸೆ ಸಿಗಲೇ ಇಲ್ಲ. ಈ ಕುರಿತಂತೆ ಆಸ್ಪತ್ರೆಯ ಬಳಿ ನಿಂತು ಆ ಅಧಿಕಾರಿ ಲಾಯರ್ ಬಳಿ ಫೋನ್‌ ಮೂಲಕ ತಮ್ಮ ಅಸಹಾಯಕತೆಯನ್ನು ತೋಡಿಕೊಂಡಿದ್ದಾರೆ. ಸರ್ಕಾರಿ, ಖಾಸಗಿ ಆಸ್ಪತ್ರೆ ಅಲೆದು ಅಲೆದು ಸುಸ್ತಾಗಿ ಅ ಅಧಿಕಾರಿ ಕೊನೆಯುಸಿರೆಳೆದಿದ್ದಾರೆ. ಬಿಬಿಎಂಪಿ ಉನ್ನತ ಅಧಿಕಾರಿಗಳು, ಅಷ್ಟದಿಕ್ಪಾಲಕ ಸಚಿವರೇ ಈ ಸ್ಟೋರಿ ನೋಡಿ, ಸಾಧ್ಯವಾದ್ರೆ ಒಂದು ಹನಿ ಕಣ್ಣೀರು ಹಾಕಿ...
 

23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?