ಕೊರೋನಾ ಕಮಾಂಡರ್‌ವೊಬ್ಬರ ಜೀವ ಉಳಿಸಲಾಗದೇ ಕೈಚೆಲ್ಲಿದ ಬಿಬಿಎಂಪಿ..!

ಕೊರೋನಾ ಕಮಾಂಡರ್‌ವೊಬ್ಬರ ಜೀವ ಉಳಿಸಲಾಗದೇ ಕೈಚೆಲ್ಲಿದ ಬಿಬಿಎಂಪಿ..!

Suvarna News   | Asianet News
Published : Jul 16, 2020, 12:04 PM IST

ಶಿವನಗರದ ಬಿಬಿಎಂಪಿ ವರ್ಕ್ ಇನ್ಸ್‌ಪೆಕ್ಟರ್ ಇದೀಗ ಬಿಬಿಎಂಪಿ ನಿರ್ಲಕ್ಷ್ಯ ವ್ಯವಸ್ಥೆಗೆ ಬಲಿಯಾಗಿದ್ದಾರೆ. ಬಿಬಿಎಂಪಿ ಅಧಿಕಾರಿ ಒಂದುವರೆ ತಿಂಗಳುಗಳ ಕಾಲ ರೈಲ್ವೇ ಸ್ಟೇಷನ್‌ನಲ್ಲಿ ಕ್ವಾರಂಟೈನ್ ಡ್ಯೂಟಿ ಮಾಡಿದ್ದಾರೆ. ಮಳೆಯಲ್ಲೇ ನೆನೆದುಕೊಂಡು ಎರಡು ದಿನ ಕೆಲಸ ನಿರ್ವಹಿಸಿದ್ದಾರೆ. ಆದರೆ ಈ ಕೊರೋನಾ ಕಮಾಂಡರ್ ಜೀವ ಉಳಿಸಲಾಗದೇ ಬಿಬಿಎಂಪಿ ಕೈಚೆಲ್ಲಿದೆ.

ಬೆಂಗಳೂರು(ಜು.16): ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕೊರೋನಾ ಅಬ್ಬರ ಜೋರಾಗಿದೆ. ಇದೇ ವೇಳೆ ಬಿಬಿಎಂಪಿಯ ದಿವ್ಯನಿರ್ಲಕ್ಷ್ಯ ಮತ್ತೊಮ್ಮೆ ಬಟಾಬಯಲಾಗಿದೆ. ಡೋಂಟ್ ಕೇರ್, ಕೇರ್ ಲೆಸ್ ಬಿಬಿಎಂಪಿ ಕಥೆಯನ್ನು ಸುವರ್ಣ ನ್ಯೂಸ್ ನಿಮ್ಮ ಮುಂದೆ ಬಿಚ್ಚಿಟ್ಟಿದೆ ನೋಡಿ.

ಹೌದು, ಶಿವನಗರದ ಬಿಬಿಎಂಪಿ ವರ್ಕ್ ಇನ್ಸ್‌ಪೆಕ್ಟರ್ ಇದೀಗ ಬಿಬಿಎಂಪಿ ನಿರ್ಲಕ್ಷ್ಯ ವ್ಯವಸ್ಥೆಗೆ ಬಲಿಯಾಗಿದ್ದಾರೆ. ಬಿಬಿಎಂಪಿ ಅಧಿಕಾರಿ ಒಂದುವರೆ ತಿಂಗಳುಗಳ ಕಾಲ ರೈಲ್ವೇ ಸ್ಟೇಷನ್‌ನಲ್ಲಿ ಕ್ವಾರಂಟೈನ್ ಡ್ಯೂಟಿ ಮಾಡಿದ್ದಾರೆ. ಮಳೆಯಲ್ಲೇ ನೆನೆದುಕೊಂಡು ಎರಡು ದಿನ ಕೆಲಸ ನಿರ್ವಹಿಸಿದ್ದಾರೆ. ಆದರೆ ಈ ಕೊರೋನಾ ಕಮಾಂಡರ್ ಜೀವ ಉಳಿಸಲಾಗದೇ ಬಿಬಿಎಂಪಿ ಕೈಚೆಲ್ಲಿದೆ.

ಉಸಿರಾಟದ ತೊಂದರೆ ಅನುಭವಿಸುತ್ತಿದ್ದ ಆ ಅಧಿಕಾರಿಗೆ ಸೂಕ್ತ ಆಸ್ಪತ್ರೆಯಲ್ಲಿ ಚಿಕಿತ್ಸೆ ಸಿಗಲೇ ಇಲ್ಲ. ಈ ಕುರಿತಂತೆ ಆಸ್ಪತ್ರೆಯ ಬಳಿ ನಿಂತು ಆ ಅಧಿಕಾರಿ ಲಾಯರ್ ಬಳಿ ಫೋನ್‌ ಮೂಲಕ ತಮ್ಮ ಅಸಹಾಯಕತೆಯನ್ನು ತೋಡಿಕೊಂಡಿದ್ದಾರೆ. ಸರ್ಕಾರಿ, ಖಾಸಗಿ ಆಸ್ಪತ್ರೆ ಅಲೆದು ಅಲೆದು ಸುಸ್ತಾಗಿ ಅ ಅಧಿಕಾರಿ ಕೊನೆಯುಸಿರೆಳೆದಿದ್ದಾರೆ. ಬಿಬಿಎಂಪಿ ಉನ್ನತ ಅಧಿಕಾರಿಗಳು, ಅಷ್ಟದಿಕ್ಪಾಲಕ ಸಚಿವರೇ ಈ ಸ್ಟೋರಿ ನೋಡಿ, ಸಾಧ್ಯವಾದ್ರೆ ಒಂದು ಹನಿ ಕಣ್ಣೀರು ಹಾಕಿ...
 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!