ಕೊರೋನಾ ಕಮಾಂಡರ್‌ವೊಬ್ಬರ ಜೀವ ಉಳಿಸಲಾಗದೇ ಕೈಚೆಲ್ಲಿದ ಬಿಬಿಎಂಪಿ..!

ಕೊರೋನಾ ಕಮಾಂಡರ್‌ವೊಬ್ಬರ ಜೀವ ಉಳಿಸಲಾಗದೇ ಕೈಚೆಲ್ಲಿದ ಬಿಬಿಎಂಪಿ..!

Suvarna News   | Asianet News
Published : Jul 16, 2020, 12:04 PM IST

ಶಿವನಗರದ ಬಿಬಿಎಂಪಿ ವರ್ಕ್ ಇನ್ಸ್‌ಪೆಕ್ಟರ್ ಇದೀಗ ಬಿಬಿಎಂಪಿ ನಿರ್ಲಕ್ಷ್ಯ ವ್ಯವಸ್ಥೆಗೆ ಬಲಿಯಾಗಿದ್ದಾರೆ. ಬಿಬಿಎಂಪಿ ಅಧಿಕಾರಿ ಒಂದುವರೆ ತಿಂಗಳುಗಳ ಕಾಲ ರೈಲ್ವೇ ಸ್ಟೇಷನ್‌ನಲ್ಲಿ ಕ್ವಾರಂಟೈನ್ ಡ್ಯೂಟಿ ಮಾಡಿದ್ದಾರೆ. ಮಳೆಯಲ್ಲೇ ನೆನೆದುಕೊಂಡು ಎರಡು ದಿನ ಕೆಲಸ ನಿರ್ವಹಿಸಿದ್ದಾರೆ. ಆದರೆ ಈ ಕೊರೋನಾ ಕಮಾಂಡರ್ ಜೀವ ಉಳಿಸಲಾಗದೇ ಬಿಬಿಎಂಪಿ ಕೈಚೆಲ್ಲಿದೆ.

ಬೆಂಗಳೂರು(ಜು.16): ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕೊರೋನಾ ಅಬ್ಬರ ಜೋರಾಗಿದೆ. ಇದೇ ವೇಳೆ ಬಿಬಿಎಂಪಿಯ ದಿವ್ಯನಿರ್ಲಕ್ಷ್ಯ ಮತ್ತೊಮ್ಮೆ ಬಟಾಬಯಲಾಗಿದೆ. ಡೋಂಟ್ ಕೇರ್, ಕೇರ್ ಲೆಸ್ ಬಿಬಿಎಂಪಿ ಕಥೆಯನ್ನು ಸುವರ್ಣ ನ್ಯೂಸ್ ನಿಮ್ಮ ಮುಂದೆ ಬಿಚ್ಚಿಟ್ಟಿದೆ ನೋಡಿ.

ಹೌದು, ಶಿವನಗರದ ಬಿಬಿಎಂಪಿ ವರ್ಕ್ ಇನ್ಸ್‌ಪೆಕ್ಟರ್ ಇದೀಗ ಬಿಬಿಎಂಪಿ ನಿರ್ಲಕ್ಷ್ಯ ವ್ಯವಸ್ಥೆಗೆ ಬಲಿಯಾಗಿದ್ದಾರೆ. ಬಿಬಿಎಂಪಿ ಅಧಿಕಾರಿ ಒಂದುವರೆ ತಿಂಗಳುಗಳ ಕಾಲ ರೈಲ್ವೇ ಸ್ಟೇಷನ್‌ನಲ್ಲಿ ಕ್ವಾರಂಟೈನ್ ಡ್ಯೂಟಿ ಮಾಡಿದ್ದಾರೆ. ಮಳೆಯಲ್ಲೇ ನೆನೆದುಕೊಂಡು ಎರಡು ದಿನ ಕೆಲಸ ನಿರ್ವಹಿಸಿದ್ದಾರೆ. ಆದರೆ ಈ ಕೊರೋನಾ ಕಮಾಂಡರ್ ಜೀವ ಉಳಿಸಲಾಗದೇ ಬಿಬಿಎಂಪಿ ಕೈಚೆಲ್ಲಿದೆ.

ಉಸಿರಾಟದ ತೊಂದರೆ ಅನುಭವಿಸುತ್ತಿದ್ದ ಆ ಅಧಿಕಾರಿಗೆ ಸೂಕ್ತ ಆಸ್ಪತ್ರೆಯಲ್ಲಿ ಚಿಕಿತ್ಸೆ ಸಿಗಲೇ ಇಲ್ಲ. ಈ ಕುರಿತಂತೆ ಆಸ್ಪತ್ರೆಯ ಬಳಿ ನಿಂತು ಆ ಅಧಿಕಾರಿ ಲಾಯರ್ ಬಳಿ ಫೋನ್‌ ಮೂಲಕ ತಮ್ಮ ಅಸಹಾಯಕತೆಯನ್ನು ತೋಡಿಕೊಂಡಿದ್ದಾರೆ. ಸರ್ಕಾರಿ, ಖಾಸಗಿ ಆಸ್ಪತ್ರೆ ಅಲೆದು ಅಲೆದು ಸುಸ್ತಾಗಿ ಅ ಅಧಿಕಾರಿ ಕೊನೆಯುಸಿರೆಳೆದಿದ್ದಾರೆ. ಬಿಬಿಎಂಪಿ ಉನ್ನತ ಅಧಿಕಾರಿಗಳು, ಅಷ್ಟದಿಕ್ಪಾಲಕ ಸಚಿವರೇ ಈ ಸ್ಟೋರಿ ನೋಡಿ, ಸಾಧ್ಯವಾದ್ರೆ ಒಂದು ಹನಿ ಕಣ್ಣೀರು ಹಾಕಿ...
 

22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ