Sri Rama: ಕರ್ನಾಟಕದಲ್ಲಿ ಶ್ರೀರಾಮನ ಹೆಜ್ಜೆ ಗುರುತು! ಮರ್ಯಾದಾ ಪುರುಷೋತ್ತಮನಿಗೂ ಕೋಟೆನಾಡಿಗೂ ಇದೆ ನಂಟು!

Sri Rama: ಕರ್ನಾಟಕದಲ್ಲಿ ಶ್ರೀರಾಮನ ಹೆಜ್ಜೆ ಗುರುತು! ಮರ್ಯಾದಾ ಪುರುಷೋತ್ತಮನಿಗೂ ಕೋಟೆನಾಡಿಗೂ ಇದೆ ನಂಟು!

Published : Jan 19, 2024, 11:02 AM IST

ಅಯೋಧ್ಯೆಯ ಶ್ರೀರಾಮನಿಗೂ ಕೋಟೆನಾಡಿಗೂ ಅವಿನಾಭಾವ ಸಂಬಂಧ ಇದೆ. ಅಷ್ಟೇ ಅಲ್ಲದೇ ರಾಯಚೂರಿನಲ್ಲೂ ಶ್ರೀರಾಮನ ಹೆಜ್ಜೆ ಗುರುತಿದೆ. ಚಿತ್ರದುರ್ಗ ಹಾಗೂ ರಾಯಚೂರಿನಲ್ಲಿ ರಾಮನ ಪಯಣ ಹೇಗಿತ್ತು ಗೊತ್ತಾ?

ಅಯೋಧ್ಯಾ ರಾಮ ಕರುನಾಡಿನಲ್ಲಿ ತನ್ನ ಹೆಜ್ಜೆ ಗುರುತುಗಳನ್ನ ಬಿಟ್ಟು ಹೋಗಿದ್ದಾನೆ. ಕೋಟೆನಾಡು ಚಿತ್ರದುರ್ಗಕ್ಕೂ(Chitradurga) ಭಗವಾನ್ ಶ್ರೀರಾಮನಿಗೂ(Sri Rama) ಅವಿನಾಭಾವ ನಂಟು ಇರುವುದು ನಮ್ಮ ಭಾಗದ ಪುಣ್ಯ ಅಂತಿದ್ದಾರೆ ಈ ಭಾಗದ ಜನರು. ಹೀಗೆ ಬೆಟ್ಟದ ತುತ್ತ ತುದಿಯಲ್ಲಿ ಇರುವ ದೇವಾಲಯದ ಹೆಸರು ಶ್ರೀ ಕರಿಸಿದ್ದೇಶ್ವರ ಸ್ವಾಮಿ ದೇಗುಲ(Karisiddeshwara Temple). ಶತಮಾನಗಳ ಹಿಂದೆ ಪವಾಡ ಪುರುಷ ಕರಿಸಿದ್ದೇಶ್ವರ ಸ್ವಾಮಿಗಳು ಬೆಟ್ಟದಲ್ಲಿ ವಾಸವಿದ್ದ ಸಮಯದಲ್ಲಿ, ಭಗವಾನ್ ಶ್ರೀರಾಮನು ತನ್ನ ಸೀತೆ ಮಾತೆಯ ಅನ್ವೇಷಣೆಗೆಂದು ಆಗಮಿಸಿದ್ದರು. ಈ ವೇಳೆ ಕರಿಸಿದ್ದೇಶ್ವರ ಶ್ರೀಗಳಿಗೆ ಶ್ರೀರಾಮನು ನಾನು ಇದೇ ಬೆಟ್ಟದಲ್ಲಿ ಎರಡು ದಿನ ಉಳಿಯುವುದಾಗಿ ಹೇಳಿದ್ರಂತೆ, ಯಾರೋ ಇರಬೇಕು ಎಂದು ಸ್ವಾಮಿಗಳು ಉಳಿಯಲು ಜಾಗ ಕೊಟ್ಟಿದ್ರು. ಈ ವೇಳೆ ಪೂಜೆಗೆಂದು ಶ್ರೀರಾಮನು ತನ್ನ ಬಾಣದಿಂದಲೇ ನಾವಿಯನ್ನು ನಿರ್ಮಿಸಿದಾಗ ಗಂಗೆಯು ಉದ್ಭವವಾಗಿದ್ದಾರೆ ಎನ್ನುವ ಪ್ರತೀತಿ ಇದೆ. ಅಂದಿನ ಭೈರವನ ಬೆಟ್ಟದಲ್ಲಿ ಶ್ರೀರಾಮನು ಸುತ್ತಾಡಿರುವ ಕುರುಹುಗಳಿವೆ. ಸೀತೆಯ ಅನ್ವೇಷಣೆ ಸಂದರ್ಭದಲ್ಲಿ ಶ್ರೀರಾಮ‌ ಚಿತ್ರದುರ್ಗಕ್ಕೆ ಭೇಟಿ ನೀಡಿದ್ದ ಮೊದಲ ಸ್ಥಳ ಭೈರವನ ಬೆಟ್ಟ ಈಗಿನ ರಾಮಗಿರಿ ಬೆಟ್ಟ.

ಇನ್ನೂ ಅಯೋಧ್ಯಾ(Ayodhya) ರಾಮನಿಗೂ ರಾಯಚೂರಿಗೂ ನಂಟಿಗೆ. ರಾಯಚೂರು(Raichur) ಜಿಲ್ಲೆಯ ಲಿಂಗಸುಗೂರು ತಾಲೂಕಿನ ಯರಡೋಣಿ ಎನ್ನುವ ಗ್ರಾಮಕ್ಕೆ ರಾಮ ಬಂದಿದ್ದ ಎಂಬ ಉಲ್ಲೇಖವಿದೆ. ಪುಣ್ಯಕ್ಷೇತ್ರ ಯರಡೋಣಿಯನ್ನ ರಾಮಾಯಣ ಕಾಲದಲ್ಲಿ ಜಟ್ಟಿಂಗ ಮಹರಾಜ ಪಟ್ಟಣ ಅಂತಾ ಕರೆಯಲಾಗ್ತಿತ್ತು. ಸೀತೆಯನ್ನ ಅರಸುತ್ತಾ ಬಂದ ರಾಮ, ಯರಡೋಣಿ ಗ್ರಾಮದ ಬಳಿ ದಂಡಕಾರಣ್ಯದಲ್ಲಿ ಬಾಯಾರಿಕೆಯಾಗಿ ಬೃಹದಾಕಾರವಾದ ಬಂಡೆಗೆ ಬಾಣ ಹೊಡೆದ, ಆ ಬಳಿಕ ಅಲ್ಲಿ ತೀರ್ಥ ಉದ್ಭವವಾಗಿದೆ ಎಂಬ ಪ್ರತೀತಿ ಇದೆ.

ಇದನ್ನೂ ವೀಕ್ಷಿಸಿ:  Today Horoscope: ಈ ರಾಶಿಯವರಿಗೆ ಗಜ ಕೇಸರಿ ಯೋಗವಿದ್ದು, ಇಂದು ಸುಬ್ರಹ್ಮಣ್ಯ ಪ್ರಾರ್ಥನೆ ಮಾಡಿ

24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
Read more