Sri Rama: ಕರ್ನಾಟಕದಲ್ಲಿ ಶ್ರೀರಾಮನ ಹೆಜ್ಜೆ ಗುರುತು! ಮರ್ಯಾದಾ ಪುರುಷೋತ್ತಮನಿಗೂ ಕೋಟೆನಾಡಿಗೂ ಇದೆ ನಂಟು!

Sri Rama: ಕರ್ನಾಟಕದಲ್ಲಿ ಶ್ರೀರಾಮನ ಹೆಜ್ಜೆ ಗುರುತು! ಮರ್ಯಾದಾ ಪುರುಷೋತ್ತಮನಿಗೂ ಕೋಟೆನಾಡಿಗೂ ಇದೆ ನಂಟು!

Published : Jan 19, 2024, 11:02 AM IST

ಅಯೋಧ್ಯೆಯ ಶ್ರೀರಾಮನಿಗೂ ಕೋಟೆನಾಡಿಗೂ ಅವಿನಾಭಾವ ಸಂಬಂಧ ಇದೆ. ಅಷ್ಟೇ ಅಲ್ಲದೇ ರಾಯಚೂರಿನಲ್ಲೂ ಶ್ರೀರಾಮನ ಹೆಜ್ಜೆ ಗುರುತಿದೆ. ಚಿತ್ರದುರ್ಗ ಹಾಗೂ ರಾಯಚೂರಿನಲ್ಲಿ ರಾಮನ ಪಯಣ ಹೇಗಿತ್ತು ಗೊತ್ತಾ?

ಅಯೋಧ್ಯಾ ರಾಮ ಕರುನಾಡಿನಲ್ಲಿ ತನ್ನ ಹೆಜ್ಜೆ ಗುರುತುಗಳನ್ನ ಬಿಟ್ಟು ಹೋಗಿದ್ದಾನೆ. ಕೋಟೆನಾಡು ಚಿತ್ರದುರ್ಗಕ್ಕೂ(Chitradurga) ಭಗವಾನ್ ಶ್ರೀರಾಮನಿಗೂ(Sri Rama) ಅವಿನಾಭಾವ ನಂಟು ಇರುವುದು ನಮ್ಮ ಭಾಗದ ಪುಣ್ಯ ಅಂತಿದ್ದಾರೆ ಈ ಭಾಗದ ಜನರು. ಹೀಗೆ ಬೆಟ್ಟದ ತುತ್ತ ತುದಿಯಲ್ಲಿ ಇರುವ ದೇವಾಲಯದ ಹೆಸರು ಶ್ರೀ ಕರಿಸಿದ್ದೇಶ್ವರ ಸ್ವಾಮಿ ದೇಗುಲ(Karisiddeshwara Temple). ಶತಮಾನಗಳ ಹಿಂದೆ ಪವಾಡ ಪುರುಷ ಕರಿಸಿದ್ದೇಶ್ವರ ಸ್ವಾಮಿಗಳು ಬೆಟ್ಟದಲ್ಲಿ ವಾಸವಿದ್ದ ಸಮಯದಲ್ಲಿ, ಭಗವಾನ್ ಶ್ರೀರಾಮನು ತನ್ನ ಸೀತೆ ಮಾತೆಯ ಅನ್ವೇಷಣೆಗೆಂದು ಆಗಮಿಸಿದ್ದರು. ಈ ವೇಳೆ ಕರಿಸಿದ್ದೇಶ್ವರ ಶ್ರೀಗಳಿಗೆ ಶ್ರೀರಾಮನು ನಾನು ಇದೇ ಬೆಟ್ಟದಲ್ಲಿ ಎರಡು ದಿನ ಉಳಿಯುವುದಾಗಿ ಹೇಳಿದ್ರಂತೆ, ಯಾರೋ ಇರಬೇಕು ಎಂದು ಸ್ವಾಮಿಗಳು ಉಳಿಯಲು ಜಾಗ ಕೊಟ್ಟಿದ್ರು. ಈ ವೇಳೆ ಪೂಜೆಗೆಂದು ಶ್ರೀರಾಮನು ತನ್ನ ಬಾಣದಿಂದಲೇ ನಾವಿಯನ್ನು ನಿರ್ಮಿಸಿದಾಗ ಗಂಗೆಯು ಉದ್ಭವವಾಗಿದ್ದಾರೆ ಎನ್ನುವ ಪ್ರತೀತಿ ಇದೆ. ಅಂದಿನ ಭೈರವನ ಬೆಟ್ಟದಲ್ಲಿ ಶ್ರೀರಾಮನು ಸುತ್ತಾಡಿರುವ ಕುರುಹುಗಳಿವೆ. ಸೀತೆಯ ಅನ್ವೇಷಣೆ ಸಂದರ್ಭದಲ್ಲಿ ಶ್ರೀರಾಮ‌ ಚಿತ್ರದುರ್ಗಕ್ಕೆ ಭೇಟಿ ನೀಡಿದ್ದ ಮೊದಲ ಸ್ಥಳ ಭೈರವನ ಬೆಟ್ಟ ಈಗಿನ ರಾಮಗಿರಿ ಬೆಟ್ಟ.

ಇನ್ನೂ ಅಯೋಧ್ಯಾ(Ayodhya) ರಾಮನಿಗೂ ರಾಯಚೂರಿಗೂ ನಂಟಿಗೆ. ರಾಯಚೂರು(Raichur) ಜಿಲ್ಲೆಯ ಲಿಂಗಸುಗೂರು ತಾಲೂಕಿನ ಯರಡೋಣಿ ಎನ್ನುವ ಗ್ರಾಮಕ್ಕೆ ರಾಮ ಬಂದಿದ್ದ ಎಂಬ ಉಲ್ಲೇಖವಿದೆ. ಪುಣ್ಯಕ್ಷೇತ್ರ ಯರಡೋಣಿಯನ್ನ ರಾಮಾಯಣ ಕಾಲದಲ್ಲಿ ಜಟ್ಟಿಂಗ ಮಹರಾಜ ಪಟ್ಟಣ ಅಂತಾ ಕರೆಯಲಾಗ್ತಿತ್ತು. ಸೀತೆಯನ್ನ ಅರಸುತ್ತಾ ಬಂದ ರಾಮ, ಯರಡೋಣಿ ಗ್ರಾಮದ ಬಳಿ ದಂಡಕಾರಣ್ಯದಲ್ಲಿ ಬಾಯಾರಿಕೆಯಾಗಿ ಬೃಹದಾಕಾರವಾದ ಬಂಡೆಗೆ ಬಾಣ ಹೊಡೆದ, ಆ ಬಳಿಕ ಅಲ್ಲಿ ತೀರ್ಥ ಉದ್ಭವವಾಗಿದೆ ಎಂಬ ಪ್ರತೀತಿ ಇದೆ.

ಇದನ್ನೂ ವೀಕ್ಷಿಸಿ:  Today Horoscope: ಈ ರಾಶಿಯವರಿಗೆ ಗಜ ಕೇಸರಿ ಯೋಗವಿದ್ದು, ಇಂದು ಸುಬ್ರಹ್ಮಣ್ಯ ಪ್ರಾರ್ಥನೆ ಮಾಡಿ

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more