ಕೊರೊನಾ ತಡೆಗೆ ರೋಗನಿರೋಧಕ ಶಕ್ತಿ ಹೆಚ್ಚಿಸಲು ಆಯುರ್ವೇದ ಔಷಧ ವಿತರಣೆ

Jul 4, 2020, 12:55 PM IST

ಬೆಂಗಳೂರು (ಜು. 04): ಕೊರೊನಾ ನಿಯಂತ್ರಣಕ್ಕೆ ವ್ಯಕ್ತಿಯಲ್ಲಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುವುದು ಅವಶ್ಯಕ. ಹೀಗಾಗಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುವ ಔ‍ಷಧವನ್ನು ವಿತರಣೆ ಮಾಡಿದ್ದೇವೆ ಎಂದು ಸುವರ್ಣ ನ್ಯೂಸ್‌ಗೆ ಆಯುರ್ವೇದ ವೈದ್ಯ ಡಾ. ವಿನಯ್ ಹೇಳಿದ್ದಾರೆ. 

ಬೆಂಗಳೂರಿನಲ್ಲಿ ಕಳೆದ 10 ದಿನಗಳಿಂದ ಕೊರೊನಾ ಶಾಕ್ ಮೇಲೆ ಶಾಕ್ ; ಸೋಂಕು, ಸಾವು ಎರಡೂ ಜಾಸ್ತಿ

ಈಗಾಗಲೇ 10 ಸಾವಿರಕ್ಕೂ ಹೆಚ್ಚು ಮಂದಿಗೆ ಔಷಧಿ ವಿತರಿಸಲಾಗಿದೆ. ಜನ ಕೂಡಾ ಕೇಂದ್ರ ಹಾಗೂ ರಾಜ್ಯದ ಮಾರ್ಗಸೂಚಿಗಳನ್ನು ಪಾಲನೆ ಮಾಡಬೇಕು. ಆಯುರ್ವೇದ ಔಷಧವನ್ನು ಬಳಸಿ ಕೊರೊನಾವನ್ನು ದೂರ ಇಡಬೇಕಾಗಿದೆ ಎಂದು ವೈದ್ಯರು ಸಲಹೆ ನೀಡಿದ್ದಾರೆ.