ಬಳ್ಳಾರಿ ಬಾಣಂತಿಯರ ಸಾವಿನ ತನಿಖಾ ವರದಿಯೂ ಬಂತು; ಆದ್ರೂ ಸಚಿವ ಜಮೀರ್ ಬರಲಿಲ್ಲ!

ಬಳ್ಳಾರಿ ಬಾಣಂತಿಯರ ಸಾವಿನ ತನಿಖಾ ವರದಿಯೂ ಬಂತು; ಆದ್ರೂ ಸಚಿವ ಜಮೀರ್ ಬರಲಿಲ್ಲ!

Published : Dec 05, 2024, 07:37 PM IST

ಬಳ್ಳಾರಿಯಲ್ಲಿ ಬಾಣಂತಿಯರ ಸಾವು ಪ್ರಕರಣದಲ್ಲಿ ಬಿಜೆಪಿ ಮತ್ತು ಜೆಡಿಎಸ್ ನಾಯಕರು ಭೇಟಿ ನೀಡಿದ್ದಾರೆ. ಆದರೆ ಉಸ್ತುವಾರಿ ಸಚಿವ ಜಮೀರ್ ಅಹಮದ್ ಖಾನ್ ಮಾತ್ರ ಈವರೆಗೂ ಬಳ್ಳಾರಿ ಜಿಲ್ಲೆಗೆ ಭೇಟಿ ನೀಡಿಲ್ಲ. ಇದರಿಂದ ಸಚಿವರ ವಿರುದ್ಧ ಅಸಮಾಧಾನ ಭುಗಿಲೆದ್ದಿದೆ.

ಬಳ್ಳಾರಿ (ಡಿ.05): ಬಳ್ಳಾರಿಯಲ್ಲಿ ಬಾಣಂತಿಯರ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮತ್ತು ಜೆಡಿಎಸ್ ವಿರೋಧ ಪಕ್ಷದ ನಾಯಕರು ಬಂದು ಹೋದರು. ಈ ಪ್ರಕರಣದ ತನಿಖೆಗೆ ಸರ್ಕಾರ ಅದೇಶ ಮಾಡಿದೆ. ಮೃತಪಟ್ಟವರಿಗೆ ಪರಿಹಾರವನ್ನು ಘೋಷಣೆ ಮಾಡಿದೆ. ಆದರೆ, ಉಸ್ತುವಾರಿ ಸಚಿವ ಜಮೀರ್ ಅಹಮದ್ ಖಾನ್ ಮಾತ್ರ ಈವರೆಗೂ ಬಳ್ಳಾರಿ ಜಿಲ್ಲೆಗೆ ಭೇಟಿ ನೀಡಿಲ್ಲ. ಬಾಣಂತಿಯರ ಸಾವಿನ ನಂತರ ಜಿಲ್ಲೆಗೆ ಬಾರದ   ಸಚಿವ ಜಮೀರ ಅಹ್ಮದ ವಿರುದ್ಧ ಅಸಮಾಧಾನ ಭುಗಿಲೆದ್ದಿದೆ. ಹೀಗಾಗಿ, ಬಿಜೆಪಿ ವಿಪಕ್ಷ ನಾಯಕ ಆರ್. ಅಶೋಕ ಅವರು ಆಡಳಿತ ಪಕ್ಷದ ಕಾರ್ಯವೈಖರಿ ಪರಿಶೀಲನೆಗೆ ಮುಂದಾಗಿದ್ದಾರೆ.

ಬಳ್ಳಾರಿ ಜಿಲ್ಲಾ ಆಸ್ಪತ್ರೆಯಲ್ಲಿ ಬಾಣಂತಿಯರ ಸಾವು ಹಿನ್ನೆಲೆಯಲ್ಲಿ ಕಳೆದ ಮೂರ್ನಾಲ್ಕು ದಿನಗಳ ಹಿಂದೆಯೇ ವಿಪಕ್ಷ ನಾಯಕ ಆರ್. ಅಶೋಕ್ ಹಾಗೂ ನಿನ್ನೆ ಜೆಡಿಎಸ್ ನಾಯಕರು ಭೇಟಿ ನೀಡಿದ್ದಾರೆ. ಆದರೆ, ಬಳ್ಳಾರಿಯಲ್ಲಿ ಬಾಣಂತಿ ಯರ ಸಾವು ಸಂಭವಿಸಿದ್ದರು ಉಸ್ತುವಾರಿ ಸಚಿವ ಜಮೀರ್ ಅಹಮದ್ ಖಾನ್ ಮಾತ್ರ ಈವರೆಗೆ ತಿರುಗಿಯೂ ನೋಡಿಲ್ಲ. ಸಂತ್ರಸ್ತರ ಕುಟುಂಬಕ್ಕೆ ಸಾಂತ್ವನ ಹೇಳುವುದು ಹಾಗೂ ಪರಿಹಾರ ಕೊಡಿಸುವ ಕಾರ್ಯವನ್ನೂ ಮಾಡಿಲ್ಲ. ಇನ್ನು ಎನ್‌ಡಿಎ ನಾಯಕರ ಭೇಟಿ ಬಳಿಕವಾದರೂ ಎಚ್ಚೆತ್ತುಕೊಳ್ಳದೇ ದಿವ್ಯ ನಿರ್ಲಕ್ಷ್ಯ ತೋರಿಸ್ದಾರೆ.

ಇದನ್ನೂ ಓದಿ: ಬೆಳಗಾವಿ: ಮಗಳನ್ನು ಪ್ರೀತಿಸಲು ನಿರಾಕರಿಸಿದ ತಾಯಿ, ಮಗನ ಬರ್ಬರ ಹತ್ಯೆ

ಈಗಾಗಲೇ ಬಾಣಂತಿಯರನ್ನು ಕಳೆದುಕೊಂಡು ನೋವಿನಲ್ಲಿರೋ ಕುಟುಂಬಗಳು, ಜಿಲ್ಲಾ ಉಸ್ತುವಾರಿ ಸಚಿವರ ನಿರ್ಲಕ್ಷಕ್ಕೆ ಹಿಡಿ ಶಾಪ ಹಾಕುತ್ತಿದ್ದಾರೆ. ಸಂಡೂರು ಉಪ ಚುನಾವಣೆಯಲ್ಲಿ ಜಿಲ್ಲೆಯಲ್ಲಿಯೇ ಮಲಗಿ ಎದ್ದೇಳುತ್ತಿದ್ದ ಜಿಲ್ಲಾ ಉಸ್ತುವಾರಿ ಜಮೀರ್ ಈಗ ಜನರು ಕಷ್ಟವೆಂದಾಗ ಏಕೆ ಬರುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹೀಗಾಗಿ, ಪ್ರತಿಪಕ್ಷಗಳಾದ ಎನ್‌ಡಿಎ ನಾಯಕರು ಪ್ರತಿಬಾರಿ ಬಳ್ಳಾರಿಗೆ ಭೇಟಿ ನೀಡಿದಾಗಲೆಲ್ಲಾ ಉಸ್ತುವಾರಿ ಸಚಿವನಿಗೆ ಬಾಯಿ ತುಂಬಾ ಬೈದು ಬರುತ್ತಿದ್ದಾರೆ.

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more