ಬಳ್ಳಾರಿ ಬಾಣಂತಿಯರ ಸಾವಿನ ತನಿಖಾ ವರದಿಯೂ ಬಂತು; ಆದ್ರೂ ಸಚಿವ ಜಮೀರ್ ಬರಲಿಲ್ಲ!

ಬಳ್ಳಾರಿ ಬಾಣಂತಿಯರ ಸಾವಿನ ತನಿಖಾ ವರದಿಯೂ ಬಂತು; ಆದ್ರೂ ಸಚಿವ ಜಮೀರ್ ಬರಲಿಲ್ಲ!

Published : Dec 05, 2024, 07:37 PM IST

ಬಳ್ಳಾರಿಯಲ್ಲಿ ಬಾಣಂತಿಯರ ಸಾವು ಪ್ರಕರಣದಲ್ಲಿ ಬಿಜೆಪಿ ಮತ್ತು ಜೆಡಿಎಸ್ ನಾಯಕರು ಭೇಟಿ ನೀಡಿದ್ದಾರೆ. ಆದರೆ ಉಸ್ತುವಾರಿ ಸಚಿವ ಜಮೀರ್ ಅಹಮದ್ ಖಾನ್ ಮಾತ್ರ ಈವರೆಗೂ ಬಳ್ಳಾರಿ ಜಿಲ್ಲೆಗೆ ಭೇಟಿ ನೀಡಿಲ್ಲ. ಇದರಿಂದ ಸಚಿವರ ವಿರುದ್ಧ ಅಸಮಾಧಾನ ಭುಗಿಲೆದ್ದಿದೆ.

ಬಳ್ಳಾರಿ (ಡಿ.05): ಬಳ್ಳಾರಿಯಲ್ಲಿ ಬಾಣಂತಿಯರ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮತ್ತು ಜೆಡಿಎಸ್ ವಿರೋಧ ಪಕ್ಷದ ನಾಯಕರು ಬಂದು ಹೋದರು. ಈ ಪ್ರಕರಣದ ತನಿಖೆಗೆ ಸರ್ಕಾರ ಅದೇಶ ಮಾಡಿದೆ. ಮೃತಪಟ್ಟವರಿಗೆ ಪರಿಹಾರವನ್ನು ಘೋಷಣೆ ಮಾಡಿದೆ. ಆದರೆ, ಉಸ್ತುವಾರಿ ಸಚಿವ ಜಮೀರ್ ಅಹಮದ್ ಖಾನ್ ಮಾತ್ರ ಈವರೆಗೂ ಬಳ್ಳಾರಿ ಜಿಲ್ಲೆಗೆ ಭೇಟಿ ನೀಡಿಲ್ಲ. ಬಾಣಂತಿಯರ ಸಾವಿನ ನಂತರ ಜಿಲ್ಲೆಗೆ ಬಾರದ   ಸಚಿವ ಜಮೀರ ಅಹ್ಮದ ವಿರುದ್ಧ ಅಸಮಾಧಾನ ಭುಗಿಲೆದ್ದಿದೆ. ಹೀಗಾಗಿ, ಬಿಜೆಪಿ ವಿಪಕ್ಷ ನಾಯಕ ಆರ್. ಅಶೋಕ ಅವರು ಆಡಳಿತ ಪಕ್ಷದ ಕಾರ್ಯವೈಖರಿ ಪರಿಶೀಲನೆಗೆ ಮುಂದಾಗಿದ್ದಾರೆ.

ಬಳ್ಳಾರಿ ಜಿಲ್ಲಾ ಆಸ್ಪತ್ರೆಯಲ್ಲಿ ಬಾಣಂತಿಯರ ಸಾವು ಹಿನ್ನೆಲೆಯಲ್ಲಿ ಕಳೆದ ಮೂರ್ನಾಲ್ಕು ದಿನಗಳ ಹಿಂದೆಯೇ ವಿಪಕ್ಷ ನಾಯಕ ಆರ್. ಅಶೋಕ್ ಹಾಗೂ ನಿನ್ನೆ ಜೆಡಿಎಸ್ ನಾಯಕರು ಭೇಟಿ ನೀಡಿದ್ದಾರೆ. ಆದರೆ, ಬಳ್ಳಾರಿಯಲ್ಲಿ ಬಾಣಂತಿ ಯರ ಸಾವು ಸಂಭವಿಸಿದ್ದರು ಉಸ್ತುವಾರಿ ಸಚಿವ ಜಮೀರ್ ಅಹಮದ್ ಖಾನ್ ಮಾತ್ರ ಈವರೆಗೆ ತಿರುಗಿಯೂ ನೋಡಿಲ್ಲ. ಸಂತ್ರಸ್ತರ ಕುಟುಂಬಕ್ಕೆ ಸಾಂತ್ವನ ಹೇಳುವುದು ಹಾಗೂ ಪರಿಹಾರ ಕೊಡಿಸುವ ಕಾರ್ಯವನ್ನೂ ಮಾಡಿಲ್ಲ. ಇನ್ನು ಎನ್‌ಡಿಎ ನಾಯಕರ ಭೇಟಿ ಬಳಿಕವಾದರೂ ಎಚ್ಚೆತ್ತುಕೊಳ್ಳದೇ ದಿವ್ಯ ನಿರ್ಲಕ್ಷ್ಯ ತೋರಿಸ್ದಾರೆ.

ಇದನ್ನೂ ಓದಿ: ಬೆಳಗಾವಿ: ಮಗಳನ್ನು ಪ್ರೀತಿಸಲು ನಿರಾಕರಿಸಿದ ತಾಯಿ, ಮಗನ ಬರ್ಬರ ಹತ್ಯೆ

ಈಗಾಗಲೇ ಬಾಣಂತಿಯರನ್ನು ಕಳೆದುಕೊಂಡು ನೋವಿನಲ್ಲಿರೋ ಕುಟುಂಬಗಳು, ಜಿಲ್ಲಾ ಉಸ್ತುವಾರಿ ಸಚಿವರ ನಿರ್ಲಕ್ಷಕ್ಕೆ ಹಿಡಿ ಶಾಪ ಹಾಕುತ್ತಿದ್ದಾರೆ. ಸಂಡೂರು ಉಪ ಚುನಾವಣೆಯಲ್ಲಿ ಜಿಲ್ಲೆಯಲ್ಲಿಯೇ ಮಲಗಿ ಎದ್ದೇಳುತ್ತಿದ್ದ ಜಿಲ್ಲಾ ಉಸ್ತುವಾರಿ ಜಮೀರ್ ಈಗ ಜನರು ಕಷ್ಟವೆಂದಾಗ ಏಕೆ ಬರುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹೀಗಾಗಿ, ಪ್ರತಿಪಕ್ಷಗಳಾದ ಎನ್‌ಡಿಎ ನಾಯಕರು ಪ್ರತಿಬಾರಿ ಬಳ್ಳಾರಿಗೆ ಭೇಟಿ ನೀಡಿದಾಗಲೆಲ್ಲಾ ಉಸ್ತುವಾರಿ ಸಚಿವನಿಗೆ ಬಾಯಿ ತುಂಬಾ ಬೈದು ಬರುತ್ತಿದ್ದಾರೆ.

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
Read more