News Hour: ಗ್ಯಾರಂಟಿ ಜಾರಿಯಿಂದಾಗಿ ಖಾಲಿಯಾಯ್ತಾ ಸರ್ಕಾರದ ಖಜಾನೆ?

News Hour: ಗ್ಯಾರಂಟಿ ಜಾರಿಯಿಂದಾಗಿ ಖಾಲಿಯಾಯ್ತಾ ಸರ್ಕಾರದ ಖಜಾನೆ?

Published : Aug 03, 2023, 11:07 PM ISTUpdated : Aug 04, 2023, 12:29 AM IST


ಗ್ಯಾರಂಟಿ ಜಾರಿಯಿಂದಾಗಿ ಸರ್ಕಾರದ ಖಜಾನೆ ಖಾಲಿಯಾಯ್ತಾ ಎನ್ನುವ ಅನುಮಾನ ವ್ಯಕ್ತವಾಗಿದೆ. ಸಾರಿಗೆ ನೌಕರರಿಗೆ ಅರ್ಧ ಸಂಬಳ, ಪೊಲೀಸರಿಗೆ ಸ್ಯಾಲರಿ ಲೇಟ್‌ ಆಗಿದೆ. ಈ ನಡುವೆ ಇದನ್ನೇ ಇರಿಸಿಕೊಂಡು ಮೋದಿ ಮಾತು ನಿಜವಾಗಿದೆ ಎಂದು ಬಿಜೆಪಿ ಟೀಕಿಸಿದೆ.

ಬೆಂಗಳೂರು (ಆ.3): ರಾಜ್ಯ ಸರ್ಕಾರಕ್ಕೆ ಅನುದಾನದ ಕೊರೆತೆ ಎದುರಾಗಿದೆಯೇ ಎನ್ಜುವ ಅನುಮಾನ ಕಾಡಿದೆ. ಗ್ಯಾರಂಟಿ ಜಾರಿಯಿಂದಾಗಿ ಸರ್ಕಾರಿ ನೌಕರರಿಗೆ ಸಂಬಳ ಕೊಡಲು ಹಣವಿಲ್ಲ ಎನ್ನುವ ಪರಿಸ್ಥಿತಿ ನಿರ್ಮಾಣವಾಗಿರುವ ಸೂಚನೆ ಸಿಕ್ಕಿದೆ. ಯಾದಗಿರಿ ಪೋಲಿಸರಿಗೆ ಜುಲೈ ತಿಂಗಳ ಸಂಬಳ ವಿಳಂಬವಾಗಿದೆ. ಸಂಬಳ ವಿಳಂಬದ ಬಗ್ಗೆ ಪೊಲೀಸರಿಗೆ ಎಸ್‌ಪಿ ಮಾಹಿತಿ ನೀಡಿದ್ದಾರೆ.

‘ಜುಲೈ ತಿಂಗಳ ಸಂಬಳ ನಿಗದಿತ ಸಮಯದಲ್ಲಿ ಸಿಗಲ್ಲ. ಅನುದಾನ ಕೊರತೆ ಕಾರಣ ಎಂದು ಎಸ್‌ಪಿ ವೇದಮೂರ್ತಿ ಹೇಳಿದ್ದಾರೆ. ಎಸ್ಪಿ ಪತ್ರದ ಬೆನ್ನಲ್ಲೇ ಸರ್ಕಾರದ ಮೇಲೆ ಬಸವನಗೌಡ ಪಾಟೀಲ್‌ ಯತ್ನಾಳ್‌ ಮುಗಿಬಿದ್ದಿದ್ದಾರೆ. ಗ್ಯಾರಂಟಿಯಿಂದಾಗಿ ಆರ್ಥಿಕ ಸಂಕಷ್ಟ ಎಂದು ವಾಗ್ದಾಳಿ ಮಾಡಿದ್ದಾರೆ.

ಸುಳ್ಳು ಜಾತಿ, ಶೈಕ್ಷಣಿಕ ಪ್ರಮಾಣಪತ್ರ ಆರೋಪ; ಪ್ರಿಯಾಂಕ್‌ ಖರ್ಗೆ ಆಯ್ಕೆ ರದ್ದತಿ ಕೋರಿ ಹೈಕೋರ್ಟ್‌ಗೆ ಅರ್ಜಿ

ಬಿಜೆಪಿ ಟೀಕೆಯ ಬಳಿಕ, ತನ್ನ ಆದೇಶವನ್ನು ಯಾದಗಿರಿ ಎಸ್‌ಪಿ ಹಿಂಪಡೆದಿದ್ದಾರೆ.  HRMS ತಾಂತ್ರಿಕ ದೋಷದಿಂದಾಗಿ ವೇತನ ವಿಳಂಬಬವಾಗಿದೆ. ಅನುದಾನ ಕೊರತೆ ವಿಚಾರ ಹಿಂಪಡೆಯಲಾಗಿದೆ ಎಂದು ತಿಳಿಸಿದ್ದಾರೆ. ಈ ನಡುವೆ ಬಿಜೆಪಿ ಆರೋಪವನ್ನೂ ಗೃಹ ಸಚಿವ ಪರಮೇಶ್ವರ್‌ ಅಲ್ಲಗಳೆದಿದ್ದಾರೆ. ಸಂಬಳ‌ ನಿಲ್ಲಿಸಿ ಗ್ಯಾರಂಟಿಗೆ ಹಣ ನೀಡಿಲ್ಲ ಎಂದು ಪರಮೇಶ್ವರ್‌ ತಿಳಿಸಿದ್ದಾರೆ.

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more