ಬಿಬಿಎಂಪಿ ವಾರ್ಡ್ ಮೀಸಲಾತಿ: ಸುಪ್ರೀಂ ಕೋರ್ಟ್‌ ಕದತಟ್ಟಿದವರಿಗೆ ಶಾಕ್!

Aug 5, 2022, 1:24 PM IST

ಬಿಬಿಎಂಪಿ ವಾರ್ಡ್‌ ಪುನರ್‌ ವಿಂಗಡಣೆ ಹಾಗೂ ಮೀಸಲಾತಿ ನಿಗದಿ ಕಾರ್ಯವನ್ನು ಸುಪ್ರೀಂ ಕೋರ್ಟ್ ಆದೇಶದಂತೆ ರಾಜ್ಯ ಸರ್ಕಾರ ಪೂರ್ಣಗೊಳಿಸಿದೆ. ಜೊತೆಗೆ ಮೀಸಲಾತಿ ನಿಗದಿಪಡಿಸಿದ ಕೂಡಲೇ ಚುನಾವಣೆ ಪ್ರಕ್ರಿಯೆ ಆರಂಭಿಸುವಂತೆ ಈಗಾಗಲೇ ಸರ್ವೋಚ್ಛ ನ್ಯಾಯಾಲಯ ರಾಜ್ಯ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಿದೆ. 

ಚುನಾವಣೆಗಾಗಿ ಕಾನೂನು ಹೋರಾಟ ಮಾಡಿದವರಿಗೆ, ಸುಪ್ರೀಂ ಕೋರ್ಟ್ ಕದ ತಟ್ಟಿದವರಿಗೆ ಶಾಕ್ ನೀಡಲಾಗಿದೆ. ಹೊಸ ಮೀಸಲಾತಿ ಅಸ್ತ್ರದಿಂದ ಕಾಂಗ್ರೆಸ್ ಹಾಗೂ ಬಿಜೆಪಿ ನಾಯಕರು ವಾರ್ಡ್ ಕಳೆದುಕೊಂಡಿದ್ದಾರೆ. ಮೀಸಲಾತಿ ಹಂಚಿಕೆ ವಿರೋಧಿಸಿ ಆಕ್ಷೇಪ  ಸಲ್ಲಿಸಲು ಸಿದ್ಧತೆ ನಡೆಸಲಾಗಿದೆ.