ಅಧಿಕಾರಿಗಳ ನಿರ್ಲಕ್ಷ್ಯದಿಂದಲೇ ಬಿಬಿಎಂಪಿ ಬೆಂಕಿ ದುರಂತ, ತನಿಖೆಗೂ ಮುನ್ನವೇ ಕಾಂಗ್ರೆಸ್‌ 'ಬೆಂಕಿ' ಟ್ವೀಟ್‌!

ಅಧಿಕಾರಿಗಳ ನಿರ್ಲಕ್ಷ್ಯದಿಂದಲೇ ಬಿಬಿಎಂಪಿ ಬೆಂಕಿ ದುರಂತ, ತನಿಖೆಗೂ ಮುನ್ನವೇ ಕಾಂಗ್ರೆಸ್‌ 'ಬೆಂಕಿ' ಟ್ವೀಟ್‌!

Published : Aug 12, 2023, 11:18 PM IST

ಅಧಿಕಾರಿಗಳ ನಿರ್ಲಕ್ಷ್ಯದಿಂದಲೇ ಬಿಬಿಎಂಪಿ ಬೆಂಕಿ ದುರಂತ ಸಂಭವಿಸಿದೆ. ಬೆಂಜಿನ್ ಸೋರಿಕೆಯಿಂದ್ಲೇ ಕಂಟ್ರೋಲ್ ರೂಮ್ ಧಗಧಗ ಎಂದಿದೆ. ಆಡಿಯೋ ಸಾಕ್ಷ್ಯದಲ್ಲಿ ಅಧಿಕಾರಿಗಳ ಬಂಡವಾಳ ಬಯಲಾಗಿದೆ.

ಬೆಂಗಳೂರು (ಆ.12): ಕಮಿಷನ್ ಆರೋಪದ ಬೆನ್ನಲ್ಲೇ ಬಿಬಿಎಂಪಿ ಕಚೇರಿಗೆ ಬೆಂಕಿ ಬಿದ್ದಿದ್ದು ಅಚ್ಚರಿಗೆ ಕಾರಣವಾಗಿತ್ತು. ರಾಜಕೀಯ ಅಂಗಳದಲ್ಲಿ ಈ ಪ್ರಕರಣ ಸಹಜವಾಗಿ ಭಾರಿ ಸಂಚಲನ ಮೂಡಿಸಿತ್ತು. ಬೆಂಕಿ ಬಿದ್ದ ಕ್ಷಣದಿಂದಲೇ ರಾಜಕೀಯದ ಕಿಡಿ ಕೂಡಾ ಹೊತ್ತಿಕೊಂಡಿತ್ತು. ಘಟನೆ ನಡೆಯುತ್ತಿದ್ದಂತೆಯೇ ಬೆಳಗಾವಿಯಿಂದ ಬೆಂಗಳೂರಿಗೆ ಬಂದ ಸಿಎಂ, ಡಿಸಿಎಂ ವಿಕ್ಟೋರಿಯಾ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದ್ದರು.

ಈ ನಡುವೆ ಪ್ರಾಥಮಿಕ ತನಿಖೆಯಲ್ಲಿ ಅಧಿಕಾರಿಗಳ ನಿರ್ಲಕ್ಷ್ಯದಿಂದಲೇ ಈ ಅಚಾತುರ್ಯ ಸಂಭವಿಸಿದೆ ಎನ್ನಲಾಗಿದೆ. ಆದರೆ, ತನಿಖೆಗೂ ಮುನ್ನವೇ ಇದು ಬಿಜೆಪಿ ಹಾಕಿಸಿದ ಬೆಂಕಿ ಎಂದು ನೇರವಾಗಿ ಆರೋಪ ಮಾಡಿದ್ದ ಕಾಂಗ್ರೆಸ್‌ ಈಗ ಮುಜುಗರಕ್ಕೆ ಈಡಾಗಿದೆ.

 

ಬಿಬಿಎಂಪಿ ಅಗ್ನಿ ದುರಂತ: ಇಬ್ಬರನ್ನು ವಶಕ್ಕೆ ಪಡೆದ ಪೊಲೀಸರು, ಬೆಂಕಿ ಇಟ್ಟವರ‍್ಯಾರು?

ಸ್ವತಃ ಡಿಕೆ ಶಿವಕುಮಾರ್‌ ಈ ಬಗ್ಗೆ ಮಾತನಾಡಿದ್ದು, ತನಿಖೆಗೂ ಮೊದಲೇ ನಿರ್ಧಾರಕ್ಕೆ ಬರಲ್ಲ. ನಮ್ಮ ಹುಡುಗರು ಏನೋ ಟ್ವೀಟ್ ಮಾಡಿದ್ದಾರೆ, ವಾಪಸ್ ತೆಗೆಸಿದ್ದೇನೆ ಅಂತಾ ಹೇಳಿದ್ದಾರೆ. ಇನ್ನು ದಿನೇಶ್‌ ಗುಂಡೂರಾವ್‌ ಕೂಡ ಇದೇ ಮಾತು ಹೇಳಿದ್ದಾರೆ.

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more