Belagavi Riot: ಸೊಲ್ಲೆತ್ತದ ಕರ್ನಾಟಕದ ರಾಜಕಾರಣಿಗಳ ವಿರುದ್ಧ ಎಚ್‌ಡಿಕೆ ಕಿಡಿ

Belagavi Riot: ಸೊಲ್ಲೆತ್ತದ ಕರ್ನಾಟಕದ ರಾಜಕಾರಣಿಗಳ ವಿರುದ್ಧ ಎಚ್‌ಡಿಕೆ ಕಿಡಿ

Suvarna News   | Asianet News
Published : Dec 20, 2021, 03:54 PM ISTUpdated : Dec 20, 2021, 04:12 PM IST

'MES ದಾಂಧಲೆ ನಡೆಸುತ್ತಿದ್ದರೂ, ಸರ್ಕಾರ ಮೌನ ವಹಿಸುತ್ತಿರುವುದಕ್ಕೆ HDK ಅಸಮಾಧಾನ ವ್ಯಕ್ತಪಡಿಸಿದರು. ಸುವರ್ಣ ಸೌಧದಲ್ಲಿ ಅಧಿವೇಶನ ನಡೆಯುತ್ತಿರುವಾಗ, ಈ ಗಲಭೆ ನಡೆಯುತ್ತಿದೆ. ಭಯವೇ ಇಲ್ಲದಂತಾಗಿದೆ. ಸಿಎಂ ಕಠಿಣವಾದ ಕ್ರಮ ತೆಗೆದುಕೊಳ್ಳಬೇಕಾಗಿದೆ' ಎಂದರು. 

ಬೆಂಗಳೂರು (ಡಿ. 20): ಬೆಳಗಾವಿಯಲ್ಲಿ (Belagavi)ಎಂಇಎಸ್‌ (MES) ಶಿವಸೇನೆ (Shivasene)ಕಾರ್ಯಕರ್ತರ ಪುಂಡಾಟ, ಸಂಗೊಳ್ಳಿ ರಾಯಣ್ಣನ ಪ್ರತಿಮೆ ಧ್ವಂಸ ಹಾಗೂ ಮಹಾರಾಷ್ಟ್ರದಲ್ಲಿ ಕನ್ನಡಿಗರ ಮೇಲಿನ ದೌರ್ಜನ್ಯ ಖಂಡಿಸಿ ರಾಜ್ಯಾದ್ಯಂತಕನ್ನಡಪರ ಸಂಘಟನೆಗಳು ಪ್ರತಿಭಟನೆ ನಡೆಸಿವೆ. 

ಬೆಂಗಳೂರು, ಬೆಳಗಾವಿ ಸೇರಿದಂತೆ ಎಲ್ಲೆಡೆ ಬೀದಿಗಿಳಿದು ಪ್ರತಿಭಟನೆ, ರ್ಯಾಲಿ, ರಸ್ತೆ ತಡೆ ನಡೆಸಿದ ಕನ್ನಡಪರ ಹೋರಾಟಗಾರರು ಎಂಇಎಸ್‌ ನಿಷೇಧಕ್ಕೆ ಆಗ್ರಹಿಸಿದರು. ಜತೆಗೆ, ಕರ್ನಾಟಕ, ಕನ್ನಡಿಗರ ವಿರುದ್ಧ ಉದ್ಧಟತನದ ಹೇಳಿಕೆ ನೀಡಿದ ಶಿವಸೇನೆ, ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್‌ ಠಾಕ್ರೆ ಪ್ರತಿಕೃತಿಯನ್ನು ದಹಿಸಿ ಆಕ್ರೋಶ ಹೊರಹಾಕಿದರು. ಈ ಘಟನೆಯ ಬಗ್ಗೆ ಮಾಜಿ ಸಿಎಂ ಎಚ್‌ ಡಿ ಕುಮಾರಸ್ವಾಮಿ (HD Kumaraswamy) ಪ್ರತಿಕ್ರಿಯಿಸಿದ್ದಾರೆ. 

'MES ದಾಂಧಲೆ ನಡೆಸುತ್ತಿದ್ದರೂ, ಸರ್ಕಾರ ಮೌನ ವಹಿಸುತ್ತಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದರು. ಸುವರ್ಣ ಸೌಧದಲ್ಲಿ ಅಧಿವೇಶನ ನಡೆಯುತ್ತಿರುವಾಗ, ಈ ಗಲಭೆ ನಡೆಯುತ್ತಿದೆ. ಭಯವೇ ಇಲ್ಲದಂತಾಗಿದೆ. ಸಿಎಂ ಕಠಿಣವಾದ ಕ್ರಮ ತೆಗೆದುಕೊಳ್ಳಬೇಕಾಗಿದೆ. ಈ ಬಗ್ಗೆ ನಾನು ಉದ್ಧವ್ ಠಾಕ್ರೆಗೆ ಟ್ವೀಟ್ ಮಾಡಿದ್ದೇನೆ. ನಾಳೆ ಬೆಳಗಾವಿ ಸದನಕ್ಕೆ ಹೋಗಲಿದ್ದೇನೆ. ಅಲ್ಲಿಯೂ ಈ ಬಗ್ಗೆ ಧ್ವನಿ ಎತ್ತಲಿದ್ದೇನೆ' ಎಂದಿದ್ದಾರೆ. 

 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more