Belagavi Riot: ಕನ್ನಡ ಹೋರಾಟಗಾರರ ಮೇಲೆ ಸರ್ಕಾರದ ಪ್ರತಾಪ ಬೇಡ: ಎಚ್‌ಡಿಕೆ

Belagavi Riot: ಕನ್ನಡ ಹೋರಾಟಗಾರರ ಮೇಲೆ ಸರ್ಕಾರದ ಪ್ರತಾಪ ಬೇಡ: ಎಚ್‌ಡಿಕೆ

Published : Dec 19, 2021, 05:49 PM IST

ಕಿತ್ತೂರು ರಾಣಿ ಚನ್ನಮ್ಮ (Kittur Rani Channamma)  ಅವರ ಜತೆಗೂಡಿ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಪಾಲ್ಗೊಂಡಿದ್ದ ಕನ್ನಡನಾಡಿನ ಹೆಮ್ಮೆಯ ಪುತ್ರ ಸಂಗೊಳ್ಳಿ ರಾಯಣ್ಣ (Sangolli Rayanna) ಅವರ ಪ್ರತಿಮೆಯನ್ನು ವಿರೂಪಗೊಳಿಸಿರುವುದು ದೇಶಕ್ಕೆ ಎಸಗಿದ ದ್ರೋಹ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ (HD Kumaraswamy) ಕಿಡಿಕಾರಿದ್ದಾರೆ.

ಬೆಂಗಳೂರು (ಡಿ. 19):  ಕಿತ್ತೂರು ರಾಣಿ ಚನ್ನಮ್ಮ (Kittur Rani Channamma)  ಅವರ ಜತೆಗೂಡಿ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಪಾಲ್ಗೊಂಡಿದ್ದ ಕನ್ನಡನಾಡಿನ ಹೆಮ್ಮೆಯ ಪುತ್ರ ಸಂಗೊಳ್ಳಿ ರಾಯಣ್ಣ (Sangolli Rayanna) ಅವರ ಪ್ರತಿಮೆಯನ್ನು ವಿರೂಪಗೊಳಿಸಿರುವುದು ಅತ್ಯಂತ ಖಂಡನೀಯ. ಇದು ಕನ್ನಡಿಗರಿಷ್ಟೇ ಮಾಡಿದ ದ್ರೋಹವಲ್ಲ, ಇಡೀ ದೇಶಕ್ಕೆ ಎಸಗಿದ ದ್ರೋಹ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ (HD Kumaraswamy) ಕಿಡಿಕಾರಿದ್ದಾರೆ.

' ಕತ್ತಲಾದ ಮೇಲೆ ಕಳ್ಳರಂತೆ ನುಸುಳಿ ವಾಹನಗಳಿಗೆ ಕಲ್ಲು ಹೊಡೆಯುವುದು ಹೇಡಿತನ. ಮಹಾನ್ ರಾಷ್ಟ್ರಪ್ರೇಮಿ, ಕೆಚ್ಚದೆಯ ವೀರರಾದ ರಾಯಣ್ಣ ಅವರ ಪ್ರತಿಮೆಗೆ ಹಾನಿ ಮಾಡಿದ್ದು ನಿಜವಾದ ವಿಕೃತ. ಮಹಾರಾಷ್ಟ್ರ ಮುಖ್ಯಮಂತ್ರಿಗಳು ಇದನ್ನೆಲ್ಲ ಸಮರ್ಥನೆ ಮಾಡಿಕೊಳ್ಳುತ್ತಿರುವುದು ವಿಪರ್ಯಾಸ. ವಿಕೃತ ಮನಸ್ಸು ಯಾರದ್ದು ಎನ್ನುವುದು ಉದ್ಧವ್ ಠಾಕ್ರೆ ಅವರು ಅರ್ಥ ಮಾಡಿಕೊಂಡರೆ ಉತ್ತಮ. ನಿಮಗೆ ಶಿವಾಜಿ ಹೇಗೆ ಮುಖ್ಯರೋ, ನಮಗೆ ಸಂಗೊಳ್ಳಿ ರಾಯಣ್ಣ ಅವರು ಹಾಗೆಯೇ ಪೂಜ್ಯರು. ಈ ವಿಷಯ ನಿಮಗೆ ಅರ್ಥವಾಗಲಿಲ್ಲ, ಯಾಕೆ? ಬೆಳಗಾವಿಯಲ್ಲಿ ಬೇರೆಯವರು ಬೇಳೆ ಬೇಯಿಸಿಕೊಳ್ಳುವುದು ಬೇಡ. ನಮ್ಮ ಹೆಮ್ಮೆಯ ಕಲಿ ಸಂಗೊಳ್ಳಿ ರಾಯಣ್ಣ ಅವರ ಪ್ರತಿಮೆಯನ್ನು ವಿರೂಪಗೊಳಿಸಿದ ದೇಶ ದ್ರೋಹಿಗಳಿಗೆ ತಕ್ಕ ಪಾಠ ಕಲಿಸುವುದು ಬಿಟ್ಟು ಕನ್ನಡಪರ ಹೋರಾಟಗಾರರ ಮೇಲೆ ರಾಜ್ಯ ಸರಕಾರ ಪ್ರತಾಪ ತೋರಿಸುವುದು ಬೇಡ' ಎಂದಿದ್ದಾರೆ. 

 

24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
Read more