Belagavi Riot: ಮರಾಠಿ ಪುಂಡಾಟಿಕೆ ವಿರುದ್ಧ ಕನ್ನಡಿಗರ ಶಕ್ತಿಪ್ರದರ್ಶನ, ಎಂಇಎಸ್ ನಿಷೇಧಕ್ಕೆ ಜನಾಗ್ರಹ.!

Belagavi Riot: ಮರಾಠಿ ಪುಂಡಾಟಿಕೆ ವಿರುದ್ಧ ಕನ್ನಡಿಗರ ಶಕ್ತಿಪ್ರದರ್ಶನ, ಎಂಇಎಸ್ ನಿಷೇಧಕ್ಕೆ ಜನಾಗ್ರಹ.!

Published : Dec 21, 2021, 09:59 AM IST

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣರಂಥ (Sangolli Rayanna) ಕರ್ನಾಟಕದ ಐತಿಹಾಸಿಕ ವ್ಯಕ್ತಿಗಳಿಗೆ ಅವಮಾನ ಮಾಡಿದ ಎಂಇಎಸ್‌ (MES) ವಿರುದ್ಧ ರಾಜ್ಯಾದ್ಯಂತ ಜನಾಕ್ರೋಶ ಭುಗಿಲೆದ್ದಿದ್ದು, ವ್ಯಾಪಕ ಪ್ರತಿಭಟನೆ ನಡೆದಿದೆ.

 

ಬೆಂಗಳೂರು (ಡಿ. 21): ಕ್ರಾಂತಿವೀರ ಸಂಗೊಳ್ಳಿ ರಾಯಣ್ಣರಂಥ (Sangolli Rayanna) ಕರ್ನಾಟಕದ ಐತಿಹಾಸಿಕ ವ್ಯಕ್ತಿಗಳಿಗೆ ಅವಮಾನ ಮಾಡಿದ ಎಂಇಎಸ್‌ (MES) ವಿರುದ್ಧ ರಾಜ್ಯಾದ್ಯಂತ ಜನಾಕ್ರೋಶ ಭುಗಿಲೆದ್ದಿದ್ದು, ವ್ಯಾಪಕ ಪ್ರತಿಭಟನೆ ನಡೆದಿದೆ.ನಾಡದ್ರೋಹಿ ಎಂಇಎಸ್‌ ನಿಷೇಧಕ್ಕೆ ಭಾರೀ ಜನಾಗ್ರಹ ವ್ಯಕ್ತವಾಗಿದೆ.

ಬೆಳಗಾವಿಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ವಿವಿಧ ಬಣಗಳು ಸೇರಿ ಅನೇಕ ಕನ್ನಡಪರ ಸಂಘಟನೆಗಳು  ಬೃಹತ್‌ ಶಕ್ತಿಪ್ರದರ್ಶನ ನಡೆಸಿದ್ದು, ರಾಜ್ಯಾದ್ಯಂತ ವಿವಿಧ ಸಂಘಟನೆಗಳೂ ಪ್ರತಿಭಟನೆ, ರ್ಯಾಲಿಗಳ ಮೂಲಕ ಎಂಇಎಸ್‌ ವಿರುದ್ಧ ತಮ್ಮ ಆಕ್ರೋಶ ಹೊರಹಾಕಿವೆ. ಕನ್ನಡಿಗರ ಸ್ವಾಭಿಮಾನ ಕೆಣಕುತ್ತಿರುವ ಎಂಇಎಸ್‌ ಪುಂಡರನ್ನು ಸದೆಬಡಿಯುವಂತೆ ಸರ್ಕಾರವನ್ನು ಒತ್ತಾಯಿಸಿವೆ.

ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಸಾರಿಗೆ ಸಚಿವ ಶ್ರೀರಾಮುಲು ಸೇರಿ ಹಲವು ಕಾಂಗ್ರೆಸ್‌, ಜೆಡಿಎಸ್‌ ಹಾಗೂ ಬಿಜೆಪಿ ಮುಖಂಡರು ಬಹಿರಂಗವಾಗಿಯೇ ಎಂಇಎಸ್‌ ನಿಷೇಧದ ಆಗ್ರಹಕ್ಕೆ ದನಿಗೂಡಿಸಿದರೆ, ಕನ್ನಡಪರ ಹೋರಾಟಗಾರರಾದ ನಾರಾಯಣಗೌಡ, ಪ್ರವೀಣ್‌ ಶೆಟ್ಟಿ, ಶಿವರಾಮೇಗೌಡ ಸೇರಿ ವಿವಿಧ ಕನ್ನಡಪರ ಸಂಘಟನೆಗಳ ಮುಖಂಡರು ನಾಡದ್ರೋಹಿಗಳನ್ನು ನಿಷೇಧಿಸದಿದ್ದರೆ ಹೋರಾಟ ತೀವ್ರಗೊಳಿಸುವ ಎಚ್ಚರಿಕೆ ಸಂದೇಶ ರವಾನಿಸಿದ್ದಾರೆ.

 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
Read more