Belagavi Riot: ಮರಾಠಿ ಪುಂಡಾಟಿಕೆ ವಿರುದ್ಧ ಕನ್ನಡಿಗರ ಶಕ್ತಿಪ್ರದರ್ಶನ, ಎಂಇಎಸ್ ನಿಷೇಧಕ್ಕೆ ಜನಾಗ್ರಹ.!

Belagavi Riot: ಮರಾಠಿ ಪುಂಡಾಟಿಕೆ ವಿರುದ್ಧ ಕನ್ನಡಿಗರ ಶಕ್ತಿಪ್ರದರ್ಶನ, ಎಂಇಎಸ್ ನಿಷೇಧಕ್ಕೆ ಜನಾಗ್ರಹ.!

Suvarna News   | Asianet News
Published : Dec 21, 2021, 09:59 AM IST

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣರಂಥ (Sangolli Rayanna) ಕರ್ನಾಟಕದ ಐತಿಹಾಸಿಕ ವ್ಯಕ್ತಿಗಳಿಗೆ ಅವಮಾನ ಮಾಡಿದ ಎಂಇಎಸ್‌ (MES) ವಿರುದ್ಧ ರಾಜ್ಯಾದ್ಯಂತ ಜನಾಕ್ರೋಶ ಭುಗಿಲೆದ್ದಿದ್ದು, ವ್ಯಾಪಕ ಪ್ರತಿಭಟನೆ ನಡೆದಿದೆ.

 

ಬೆಂಗಳೂರು (ಡಿ. 21): ಕ್ರಾಂತಿವೀರ ಸಂಗೊಳ್ಳಿ ರಾಯಣ್ಣರಂಥ (Sangolli Rayanna) ಕರ್ನಾಟಕದ ಐತಿಹಾಸಿಕ ವ್ಯಕ್ತಿಗಳಿಗೆ ಅವಮಾನ ಮಾಡಿದ ಎಂಇಎಸ್‌ (MES) ವಿರುದ್ಧ ರಾಜ್ಯಾದ್ಯಂತ ಜನಾಕ್ರೋಶ ಭುಗಿಲೆದ್ದಿದ್ದು, ವ್ಯಾಪಕ ಪ್ರತಿಭಟನೆ ನಡೆದಿದೆ.ನಾಡದ್ರೋಹಿ ಎಂಇಎಸ್‌ ನಿಷೇಧಕ್ಕೆ ಭಾರೀ ಜನಾಗ್ರಹ ವ್ಯಕ್ತವಾಗಿದೆ.

ಬೆಳಗಾವಿಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ವಿವಿಧ ಬಣಗಳು ಸೇರಿ ಅನೇಕ ಕನ್ನಡಪರ ಸಂಘಟನೆಗಳು  ಬೃಹತ್‌ ಶಕ್ತಿಪ್ರದರ್ಶನ ನಡೆಸಿದ್ದು, ರಾಜ್ಯಾದ್ಯಂತ ವಿವಿಧ ಸಂಘಟನೆಗಳೂ ಪ್ರತಿಭಟನೆ, ರ್ಯಾಲಿಗಳ ಮೂಲಕ ಎಂಇಎಸ್‌ ವಿರುದ್ಧ ತಮ್ಮ ಆಕ್ರೋಶ ಹೊರಹಾಕಿವೆ. ಕನ್ನಡಿಗರ ಸ್ವಾಭಿಮಾನ ಕೆಣಕುತ್ತಿರುವ ಎಂಇಎಸ್‌ ಪುಂಡರನ್ನು ಸದೆಬಡಿಯುವಂತೆ ಸರ್ಕಾರವನ್ನು ಒತ್ತಾಯಿಸಿವೆ.

ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಸಾರಿಗೆ ಸಚಿವ ಶ್ರೀರಾಮುಲು ಸೇರಿ ಹಲವು ಕಾಂಗ್ರೆಸ್‌, ಜೆಡಿಎಸ್‌ ಹಾಗೂ ಬಿಜೆಪಿ ಮುಖಂಡರು ಬಹಿರಂಗವಾಗಿಯೇ ಎಂಇಎಸ್‌ ನಿಷೇಧದ ಆಗ್ರಹಕ್ಕೆ ದನಿಗೂಡಿಸಿದರೆ, ಕನ್ನಡಪರ ಹೋರಾಟಗಾರರಾದ ನಾರಾಯಣಗೌಡ, ಪ್ರವೀಣ್‌ ಶೆಟ್ಟಿ, ಶಿವರಾಮೇಗೌಡ ಸೇರಿ ವಿವಿಧ ಕನ್ನಡಪರ ಸಂಘಟನೆಗಳ ಮುಖಂಡರು ನಾಡದ್ರೋಹಿಗಳನ್ನು ನಿಷೇಧಿಸದಿದ್ದರೆ ಹೋರಾಟ ತೀವ್ರಗೊಳಿಸುವ ಎಚ್ಚರಿಕೆ ಸಂದೇಶ ರವಾನಿಸಿದ್ದಾರೆ.

 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
Read more