ಬೆಂಗಳೂರು 8 ತಿಂಗಳ ಮಗುವಿಗೆ HMPV ಸೋಂಕು, ಇಲ್ಲಿದೆ ಲೇಟೆಸ್ಟ್‌ ಹೆಲ್ತ್‌ ಅಪ್ಡೇಟ್

ಬೆಂಗಳೂರು 8 ತಿಂಗಳ ಮಗುವಿಗೆ HMPV ಸೋಂಕು, ಇಲ್ಲಿದೆ ಲೇಟೆಸ್ಟ್‌ ಹೆಲ್ತ್‌ ಅಪ್ಡೇಟ್

Published : Jan 07, 2025, 08:52 PM IST

ಬೆಂಗಳೂರಿನಲ್ಲಿ ಎಂಟು ತಿಂಗಳ ಮಗುವಿಗೆ ಚೀನಾದ HMPV ವೈರಸ್ ಪತ್ತೆಯಾಗಿದ್ದು, ಚಿಕಿತ್ಸೆ ನಂತರ ಮಗು ಸಂಪೂರ್ಣವಾಗಿ ಚೇತರಿಸಿಕೊಂಡಿದೆ. ಮಗುವಿನಲ್ಲಿ ಯಾವುದೇ ಗಂಭೀರ ಲಕ್ಷಣಗಳು ಕಂಡುಬಂದಿಲ್ಲ ಮತ್ತು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ.

ಬೆಂಗಳೂರಿನ 8 ತಿಂಗಳ ಮಗುವಿಗೆ ಕಾಣಿಸಿಕೊಂಡಿದ್ದ ಚೀನಾದ ಹೆಚ್‌ಎಂಪಿ ವೈರಸ್ ಬಗ್ಗೆ ಆರೋಗ್ಯ ಇಲಾಖೆಯಿಂದ ಅಪ್ಡೇಟ್ ಮಾಹಿತಿ ನೀಡಲಾಗಿದೆ. ಈ ಮಗು ಈಗ ಸಂಪೂರ್ಣವಾಗಿ ಚೇತರಿಸಿಕೊಂಡಿದೆ. ಈ ಮಗುವಿನ ಆರೋಗ್ಯದಲ್ಲಿ ಯಾವುದೇ ಗಂಭೀರ ಅನಾರೋಗ್ಯದ ಲಕ್ಷಣಗಳು ಇರಲಿಲ್ಲ. ಹೀಗಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ.

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಚೀನಾದ ಹೆಚ್‌ಎಂಪಿ ವೈರಸ್‌ಗೆ ತುತ್ತಾಗಿರುವ 2ನೇ ಕೇಸ್ 8 ವರ್ಷದ ಮಗುವಿಗೆ ಆರೋಗ್ಯ ಸುಧಾರಿಸಿದೆ. ಈ ಮಗುವನ್ನು ಮಧ್ಯಾಹ್ನ 3 ಗಂಟೆಯ ನಂತರ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗುವುದು. 8 ತಿಂಗಳ ಸ್ನೇಹಲ್ ಎಂಬ ಮಗು ಕಳೆದೊಂದು ವಾರದಿಂದ ಅನಾರೋಗ್ಯ ಸಮಸ್ಯೆ ಇದ್ದು, ಆಸ್ಪತ್ರೆಗೆ ದಾಖಲಾಗಿತ್ತು. ಆಸ್ಪತ್ರೆಗೆ ಬಂದು ಮಗು ದಾಖಲಾದಾಗ ಜ್ವರ, ಶೀತ, ನೆಗಡಿ ಕಂಡುಬಂದಿದ್ದು, ಹೆಚ್‌ಎಂಪಿ ವೈರಸ್ ಇರುವುದು ಪತ್ತೆಯಾಗಿತ್ತು. ಎರಡು ದಿನಗಳ ಕಾಲ ಮಗುವನ್ನು ನಿಗಾದಲ್ಲಿ ಇರಿಸಲಾಗಿದ್ದು, ನಂತರ ಚೇತರಿಕೆ ಕಾಣಿಸಿಕೊಂಡ ನಂತರ ಮನೆಗೆ ಕಳುಹಿಸಲಾಗುತ್ತದೆ. 

ಇನ್ನು ಈ ಬಗ್ಗೆ ಮಾತನಾಡಿದ ಪೋಷಕರು ಹೆಚ್‌ಎಂಪಿವಿ ವೈರಸ್ ತಗುಲಿದ ಬಗ್ಗೆ ನಮಗೆ ನಂಬಿಕೆಯಿಲ್ಲ. ಕಾರಣ ನಾವು ಮಗುವನ್ನು ಕರೆದುಕೊಂಡು ಎಲ್ಲಿಗೂ ಹೊರಗಡೆ ಹೋಗಿಲ್ಲ. ನಾವು ಇನ್ನೊಂದು ಆಸ್ಪತ್ರೆಗೆ ಭೇಟಿ ನೀಡಿ ತಪಾಸಣೆ ಮಾಡಿಸಿ ಖಚಿತಪಡಿಸಿಕೊಳ್ಳುತ್ತೇವೆ ಎಂದು ತಿಳಿಸಿದ್ದಾರೆ.

23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
Read more