ಬೆಂಗಳೂರು 8 ತಿಂಗಳ ಮಗುವಿಗೆ HMPV ಸೋಂಕು, ಇಲ್ಲಿದೆ ಲೇಟೆಸ್ಟ್‌ ಹೆಲ್ತ್‌ ಅಪ್ಡೇಟ್

ಬೆಂಗಳೂರು 8 ತಿಂಗಳ ಮಗುವಿಗೆ HMPV ಸೋಂಕು, ಇಲ್ಲಿದೆ ಲೇಟೆಸ್ಟ್‌ ಹೆಲ್ತ್‌ ಅಪ್ಡೇಟ್

Published : Jan 07, 2025, 08:52 PM IST

ಬೆಂಗಳೂರಿನಲ್ಲಿ ಎಂಟು ತಿಂಗಳ ಮಗುವಿಗೆ ಚೀನಾದ HMPV ವೈರಸ್ ಪತ್ತೆಯಾಗಿದ್ದು, ಚಿಕಿತ್ಸೆ ನಂತರ ಮಗು ಸಂಪೂರ್ಣವಾಗಿ ಚೇತರಿಸಿಕೊಂಡಿದೆ. ಮಗುವಿನಲ್ಲಿ ಯಾವುದೇ ಗಂಭೀರ ಲಕ್ಷಣಗಳು ಕಂಡುಬಂದಿಲ್ಲ ಮತ್ತು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ.

ಬೆಂಗಳೂರಿನ 8 ತಿಂಗಳ ಮಗುವಿಗೆ ಕಾಣಿಸಿಕೊಂಡಿದ್ದ ಚೀನಾದ ಹೆಚ್‌ಎಂಪಿ ವೈರಸ್ ಬಗ್ಗೆ ಆರೋಗ್ಯ ಇಲಾಖೆಯಿಂದ ಅಪ್ಡೇಟ್ ಮಾಹಿತಿ ನೀಡಲಾಗಿದೆ. ಈ ಮಗು ಈಗ ಸಂಪೂರ್ಣವಾಗಿ ಚೇತರಿಸಿಕೊಂಡಿದೆ. ಈ ಮಗುವಿನ ಆರೋಗ್ಯದಲ್ಲಿ ಯಾವುದೇ ಗಂಭೀರ ಅನಾರೋಗ್ಯದ ಲಕ್ಷಣಗಳು ಇರಲಿಲ್ಲ. ಹೀಗಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ.

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಚೀನಾದ ಹೆಚ್‌ಎಂಪಿ ವೈರಸ್‌ಗೆ ತುತ್ತಾಗಿರುವ 2ನೇ ಕೇಸ್ 8 ವರ್ಷದ ಮಗುವಿಗೆ ಆರೋಗ್ಯ ಸುಧಾರಿಸಿದೆ. ಈ ಮಗುವನ್ನು ಮಧ್ಯಾಹ್ನ 3 ಗಂಟೆಯ ನಂತರ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗುವುದು. 8 ತಿಂಗಳ ಸ್ನೇಹಲ್ ಎಂಬ ಮಗು ಕಳೆದೊಂದು ವಾರದಿಂದ ಅನಾರೋಗ್ಯ ಸಮಸ್ಯೆ ಇದ್ದು, ಆಸ್ಪತ್ರೆಗೆ ದಾಖಲಾಗಿತ್ತು. ಆಸ್ಪತ್ರೆಗೆ ಬಂದು ಮಗು ದಾಖಲಾದಾಗ ಜ್ವರ, ಶೀತ, ನೆಗಡಿ ಕಂಡುಬಂದಿದ್ದು, ಹೆಚ್‌ಎಂಪಿ ವೈರಸ್ ಇರುವುದು ಪತ್ತೆಯಾಗಿತ್ತು. ಎರಡು ದಿನಗಳ ಕಾಲ ಮಗುವನ್ನು ನಿಗಾದಲ್ಲಿ ಇರಿಸಲಾಗಿದ್ದು, ನಂತರ ಚೇತರಿಕೆ ಕಾಣಿಸಿಕೊಂಡ ನಂತರ ಮನೆಗೆ ಕಳುಹಿಸಲಾಗುತ್ತದೆ. 

ಇನ್ನು ಈ ಬಗ್ಗೆ ಮಾತನಾಡಿದ ಪೋಷಕರು ಹೆಚ್‌ಎಂಪಿವಿ ವೈರಸ್ ತಗುಲಿದ ಬಗ್ಗೆ ನಮಗೆ ನಂಬಿಕೆಯಿಲ್ಲ. ಕಾರಣ ನಾವು ಮಗುವನ್ನು ಕರೆದುಕೊಂಡು ಎಲ್ಲಿಗೂ ಹೊರಗಡೆ ಹೋಗಿಲ್ಲ. ನಾವು ಇನ್ನೊಂದು ಆಸ್ಪತ್ರೆಗೆ ಭೇಟಿ ನೀಡಿ ತಪಾಸಣೆ ಮಾಡಿಸಿ ಖಚಿತಪಡಿಸಿಕೊಳ್ಳುತ್ತೇವೆ ಎಂದು ತಿಳಿಸಿದ್ದಾರೆ.

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
Read more