ಹಿಜಾಬ್ ಸಂಘರ್ಷ ಹಿನ್ನಲೆ ಬೆಂಗಳೂರು ನಗರದಲ್ಲಿ (Bengaluru City) ಕಾನೂನು ಸುವ್ಯವಸ್ಥೆಗೆ ಧಕ್ಕೆ ಆಗದಂತೆ ಪೊಲೀಸರು ಹೈಅಲರ್ಟ್ ಆಗಿದ್ದಾರೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ನೋಡಿಕೊಳ್ಳಿ ಎಂದು ಕಮಿಷನರ್ ಪಂತ್ ಆದೇಶಿಸಿದ್ದಾರೆ.
ಹಿಜಾಬ್ ಸಂಘರ್ಷ ಹಿನ್ನಲೆ ಬೆಂಗಳೂರು ನಗರದಲ್ಲಿ (Bengaluru City) ಕಾನೂನು ಸುವ್ಯವಸ್ಥೆಗೆ ಧಕ್ಕೆ ಆಗದಂತೆ ಪೊಲೀಸರು ಹೈಅಲರ್ಟ್ ಆಗಿದ್ದಾರೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ನೋಡಿಕೊಳ್ಳಿ ಎಂದು ಕಮಿಷನರ್ ಪಂತ್ ಆದೇಶಿಸಿದ್ದಾರೆ. ಯಾದಗಿರಿಯಲ್ಲಿ ಕಾಲೇಜು ಎದುರು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ. 600 ವಿದ್ಯಾರ್ಥಿಗಳು ಗೈರಾಗಿದ್ದಾರೆ.
ಹಿಜಾಬ್ ವಿಚಾರದಲ್ಲಿ ನ್ಯಾಯಾಲಯ ಹಾಗೂ ಸರ್ಕಾರದ ನಿರ್ಧಾರಕ್ಕೆ ಎಲ್ಲರೂ ಬದ್ಧರಾಗಿರಬೇಕು. ಈಗಾಗಲೇ ಈ ಪ್ರಕರಣ ನ್ಯಾಯಾಲಯದಲ್ಲಿ ಇದೆ. ನ್ಯಾಯಾಲಯ ಹಾಗೂ ಸರ್ಕಾರದ ನಿರ್ಧಾರಕ್ಕೆ ಎಲ್ಲರೂ ಕಟಿಬದ್ಧರಾಗಿ ಇರಬೇಕು. ಇದರಲ್ಲಿ ನನ್ನ ವೈಯಕ್ತಿಕ ಅಭಿಪ್ರಾಯ ಇಲ್ಲ ಎಂದು ಮೈಸೂರು ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದ್ದಾರೆ.