ಬೆಂಗಳೂರಿನಲ್ಲಿ ಗುಡುಗು, ಸಿಡಿಲು ಸಹಿತ ಆಲಿಕಲ್ಲು ಮಳೆ, 25 ಕ್ಕೂ ಹೆಚ್ಚು ಮರ ಧರೆಗೆ

ಬೆಂಗಳೂರಿನಲ್ಲಿ ಗುಡುಗು, ಸಿಡಿಲು ಸಹಿತ ಆಲಿಕಲ್ಲು ಮಳೆ, 25 ಕ್ಕೂ ಹೆಚ್ಚು ಮರ ಧರೆಗೆ

Published : May 02, 2022, 10:00 AM IST

 ರಾಜಧಾನಿ ಬೆಂಗಳೂರಿನಲ್ಲಿ ಸತತ ಎರಡನೇ ದಿನ ಧಾರಾಕಾರ ಮಳೆ ಮುಂದುವರೆದಿದ್ದು, 25ಕ್ಕೂ ಹೆಚ್ಚು ಮರ ಧರೆಗುರುಳಿವೆ. ಜಂಕ್ಷನ್‌ ಮತ್ತು ಅಂಡರ್‌ ಪಾಸ್‌ಗಳಲ್ಲಿ ಭಾರೀ ಪ್ರಮಾಣದ ನೀರು ನಿಂತು ವಾಹನ ಸವಾರರು ಪರದಾಡಬೇಕಾಯಿತು.
 

ಬೆಂಗಳೂರು (ಮೇ. 02): ರಾಜಧಾನಿ ಬೆಂಗಳೂರಿನಲ್ಲಿ (Bengaluru) ಸತತ ಎರಡನೇ ದಿನ ಧಾರಾಕಾರ ಮಳೆ (Rain) ಮುಂದುವರೆದಿದ್ದು, 25ಕ್ಕೂ ಹೆಚ್ಚು ಮರ ಧರೆಗುರುಳಿವೆ. ಜಂಕ್ಷನ್‌ ಮತ್ತು ಅಂಡರ್‌ ಪಾಸ್‌ಗಳಲ್ಲಿ ಭಾರೀ ಪ್ರಮಾಣದ ನೀರು ನಿಂತು ವಾಹನ ಸವಾರರು ಪರದಾಡಬೇಕಾಯಿತು.

ಗಾಳಿ ಪ್ರಮಾಣ ಹೆಚ್ಚಾಗಿದ್ದರಿಂದ ಬಿಟಿಎಂ ಲೇಔಟ್‌ನಲ್ಲಿ 10ಕ್ಕೂ ಹೆಚ್ಚು ಮರ ಹಾಗೂ ಮರ ರಂಬೆಗಳು ಧರೆಗುರುಳಿವೆ. ವೈಟ್‌ಫೀಲ್ಡ್‌, ಸದಾನಂದ ನಗರ, ಶ್ರೀರಾಮಪುರ, ಮೈಕೋ ಲೇಔಟ್‌, ಡೈರಿ ವೃತ್ತ, ಗೋವಿಂದರಾಜ ನಗರದಲ್ಲಿ ತಲಾ ಒಂದು ಮರ ಬಿದ್ದ ವರದಿಯಾಗಿದೆ. ಇನ್ನು ಕೆ.ಆರ್‌.ರಸ್ತೆಯಲ್ಲಿ ಬಿಎಂಸಿಟಿ ಬಸ್‌ ಮೇಲೆ ಮರ ಬಿದ್ದಿದೆ. ಪ್ರಯಾಣಿಕರಿಗೆ ಯಾವುದೇ ತೊಂದರೆ ಆಗಿಲ್ಲ. ಇದೇ ವೇಳೆ ಆಟೋ, ಕಾರು ಜಖಂಗೊಂಡಿವೆ. ಉತ್ತರಹಳ್ಳಿಯ ಲಕ್ಷಯ್ಯ ಲೇಔಟ್‌ನಲ್ಲಿ ಕಳೆದ 20 ದಿನಗಳ ಹಿಂದೆ ಮಳೆ ಸುರಿದ ವೇಳೆ 100ಕ್ಕೂ ಅಧಿಕ ಮನೆಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿಯಾಗಿತ್ತು. ಭಾನುವಾರ ಮಳೆಗೂ ರಾಜಕಾಲುವೆಯ ಅಕ್ಕಪಕ್ಕದಲ್ಲಿರುವ 30ಕ್ಕೂ ಅಧಿಕ ಮನೆಗಳಿಗೆ ನೀರು ನುಗ್ಗಿ ಇಡೀ ಪ್ರದೇಶ ಜಲಾವೃತಗೊಂಡಿದ್ದು, ಬಿಬಿಎಂಪಿ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ.

 

26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್
Read more