ಬೆಂಗಳೂರಿನಲ್ಲಿ ಗುಡುಗು, ಸಿಡಿಲು ಸಹಿತ ಆಲಿಕಲ್ಲು ಮಳೆ, 25 ಕ್ಕೂ ಹೆಚ್ಚು ಮರ ಧರೆಗೆ

ಬೆಂಗಳೂರಿನಲ್ಲಿ ಗುಡುಗು, ಸಿಡಿಲು ಸಹಿತ ಆಲಿಕಲ್ಲು ಮಳೆ, 25 ಕ್ಕೂ ಹೆಚ್ಚು ಮರ ಧರೆಗೆ

Published : May 02, 2022, 10:00 AM IST

 ರಾಜಧಾನಿ ಬೆಂಗಳೂರಿನಲ್ಲಿ ಸತತ ಎರಡನೇ ದಿನ ಧಾರಾಕಾರ ಮಳೆ ಮುಂದುವರೆದಿದ್ದು, 25ಕ್ಕೂ ಹೆಚ್ಚು ಮರ ಧರೆಗುರುಳಿವೆ. ಜಂಕ್ಷನ್‌ ಮತ್ತು ಅಂಡರ್‌ ಪಾಸ್‌ಗಳಲ್ಲಿ ಭಾರೀ ಪ್ರಮಾಣದ ನೀರು ನಿಂತು ವಾಹನ ಸವಾರರು ಪರದಾಡಬೇಕಾಯಿತು.
 

ಬೆಂಗಳೂರು (ಮೇ. 02): ರಾಜಧಾನಿ ಬೆಂಗಳೂರಿನಲ್ಲಿ (Bengaluru) ಸತತ ಎರಡನೇ ದಿನ ಧಾರಾಕಾರ ಮಳೆ (Rain) ಮುಂದುವರೆದಿದ್ದು, 25ಕ್ಕೂ ಹೆಚ್ಚು ಮರ ಧರೆಗುರುಳಿವೆ. ಜಂಕ್ಷನ್‌ ಮತ್ತು ಅಂಡರ್‌ ಪಾಸ್‌ಗಳಲ್ಲಿ ಭಾರೀ ಪ್ರಮಾಣದ ನೀರು ನಿಂತು ವಾಹನ ಸವಾರರು ಪರದಾಡಬೇಕಾಯಿತು.

ಗಾಳಿ ಪ್ರಮಾಣ ಹೆಚ್ಚಾಗಿದ್ದರಿಂದ ಬಿಟಿಎಂ ಲೇಔಟ್‌ನಲ್ಲಿ 10ಕ್ಕೂ ಹೆಚ್ಚು ಮರ ಹಾಗೂ ಮರ ರಂಬೆಗಳು ಧರೆಗುರುಳಿವೆ. ವೈಟ್‌ಫೀಲ್ಡ್‌, ಸದಾನಂದ ನಗರ, ಶ್ರೀರಾಮಪುರ, ಮೈಕೋ ಲೇಔಟ್‌, ಡೈರಿ ವೃತ್ತ, ಗೋವಿಂದರಾಜ ನಗರದಲ್ಲಿ ತಲಾ ಒಂದು ಮರ ಬಿದ್ದ ವರದಿಯಾಗಿದೆ. ಇನ್ನು ಕೆ.ಆರ್‌.ರಸ್ತೆಯಲ್ಲಿ ಬಿಎಂಸಿಟಿ ಬಸ್‌ ಮೇಲೆ ಮರ ಬಿದ್ದಿದೆ. ಪ್ರಯಾಣಿಕರಿಗೆ ಯಾವುದೇ ತೊಂದರೆ ಆಗಿಲ್ಲ. ಇದೇ ವೇಳೆ ಆಟೋ, ಕಾರು ಜಖಂಗೊಂಡಿವೆ. ಉತ್ತರಹಳ್ಳಿಯ ಲಕ್ಷಯ್ಯ ಲೇಔಟ್‌ನಲ್ಲಿ ಕಳೆದ 20 ದಿನಗಳ ಹಿಂದೆ ಮಳೆ ಸುರಿದ ವೇಳೆ 100ಕ್ಕೂ ಅಧಿಕ ಮನೆಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿಯಾಗಿತ್ತು. ಭಾನುವಾರ ಮಳೆಗೂ ರಾಜಕಾಲುವೆಯ ಅಕ್ಕಪಕ್ಕದಲ್ಲಿರುವ 30ಕ್ಕೂ ಅಧಿಕ ಮನೆಗಳಿಗೆ ನೀರು ನುಗ್ಗಿ ಇಡೀ ಪ್ರದೇಶ ಜಲಾವೃತಗೊಂಡಿದ್ದು, ಬಿಬಿಎಂಪಿ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ.

 

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
Read more