ಬೆಂಗಳೂರಿನಲ್ಲಿ ಗುಡುಗು, ಸಿಡಿಲು ಸಹಿತ ಆಲಿಕಲ್ಲು ಮಳೆ, 25 ಕ್ಕೂ ಹೆಚ್ಚು ಮರ ಧರೆಗೆ

ಬೆಂಗಳೂರಿನಲ್ಲಿ ಗುಡುಗು, ಸಿಡಿಲು ಸಹಿತ ಆಲಿಕಲ್ಲು ಮಳೆ, 25 ಕ್ಕೂ ಹೆಚ್ಚು ಮರ ಧರೆಗೆ

Published : May 02, 2022, 10:00 AM IST

 ರಾಜಧಾನಿ ಬೆಂಗಳೂರಿನಲ್ಲಿ ಸತತ ಎರಡನೇ ದಿನ ಧಾರಾಕಾರ ಮಳೆ ಮುಂದುವರೆದಿದ್ದು, 25ಕ್ಕೂ ಹೆಚ್ಚು ಮರ ಧರೆಗುರುಳಿವೆ. ಜಂಕ್ಷನ್‌ ಮತ್ತು ಅಂಡರ್‌ ಪಾಸ್‌ಗಳಲ್ಲಿ ಭಾರೀ ಪ್ರಮಾಣದ ನೀರು ನಿಂತು ವಾಹನ ಸವಾರರು ಪರದಾಡಬೇಕಾಯಿತು.
 

ಬೆಂಗಳೂರು (ಮೇ. 02): ರಾಜಧಾನಿ ಬೆಂಗಳೂರಿನಲ್ಲಿ (Bengaluru) ಸತತ ಎರಡನೇ ದಿನ ಧಾರಾಕಾರ ಮಳೆ (Rain) ಮುಂದುವರೆದಿದ್ದು, 25ಕ್ಕೂ ಹೆಚ್ಚು ಮರ ಧರೆಗುರುಳಿವೆ. ಜಂಕ್ಷನ್‌ ಮತ್ತು ಅಂಡರ್‌ ಪಾಸ್‌ಗಳಲ್ಲಿ ಭಾರೀ ಪ್ರಮಾಣದ ನೀರು ನಿಂತು ವಾಹನ ಸವಾರರು ಪರದಾಡಬೇಕಾಯಿತು.

ಗಾಳಿ ಪ್ರಮಾಣ ಹೆಚ್ಚಾಗಿದ್ದರಿಂದ ಬಿಟಿಎಂ ಲೇಔಟ್‌ನಲ್ಲಿ 10ಕ್ಕೂ ಹೆಚ್ಚು ಮರ ಹಾಗೂ ಮರ ರಂಬೆಗಳು ಧರೆಗುರುಳಿವೆ. ವೈಟ್‌ಫೀಲ್ಡ್‌, ಸದಾನಂದ ನಗರ, ಶ್ರೀರಾಮಪುರ, ಮೈಕೋ ಲೇಔಟ್‌, ಡೈರಿ ವೃತ್ತ, ಗೋವಿಂದರಾಜ ನಗರದಲ್ಲಿ ತಲಾ ಒಂದು ಮರ ಬಿದ್ದ ವರದಿಯಾಗಿದೆ. ಇನ್ನು ಕೆ.ಆರ್‌.ರಸ್ತೆಯಲ್ಲಿ ಬಿಎಂಸಿಟಿ ಬಸ್‌ ಮೇಲೆ ಮರ ಬಿದ್ದಿದೆ. ಪ್ರಯಾಣಿಕರಿಗೆ ಯಾವುದೇ ತೊಂದರೆ ಆಗಿಲ್ಲ. ಇದೇ ವೇಳೆ ಆಟೋ, ಕಾರು ಜಖಂಗೊಂಡಿವೆ. ಉತ್ತರಹಳ್ಳಿಯ ಲಕ್ಷಯ್ಯ ಲೇಔಟ್‌ನಲ್ಲಿ ಕಳೆದ 20 ದಿನಗಳ ಹಿಂದೆ ಮಳೆ ಸುರಿದ ವೇಳೆ 100ಕ್ಕೂ ಅಧಿಕ ಮನೆಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿಯಾಗಿತ್ತು. ಭಾನುವಾರ ಮಳೆಗೂ ರಾಜಕಾಲುವೆಯ ಅಕ್ಕಪಕ್ಕದಲ್ಲಿರುವ 30ಕ್ಕೂ ಅಧಿಕ ಮನೆಗಳಿಗೆ ನೀರು ನುಗ್ಗಿ ಇಡೀ ಪ್ರದೇಶ ಜಲಾವೃತಗೊಂಡಿದ್ದು, ಬಿಬಿಎಂಪಿ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ.

 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more