ಬೆಂಗಳೂರಿನಲ್ಲಿ ಗುಡುಗು, ಸಿಡಿಲು ಸಹಿತ ಆಲಿಕಲ್ಲು ಮಳೆ, 25 ಕ್ಕೂ ಹೆಚ್ಚು ಮರ ಧರೆಗೆ

ಬೆಂಗಳೂರಿನಲ್ಲಿ ಗುಡುಗು, ಸಿಡಿಲು ಸಹಿತ ಆಲಿಕಲ್ಲು ಮಳೆ, 25 ಕ್ಕೂ ಹೆಚ್ಚು ಮರ ಧರೆಗೆ

Published : May 02, 2022, 10:00 AM IST

 ರಾಜಧಾನಿ ಬೆಂಗಳೂರಿನಲ್ಲಿ ಸತತ ಎರಡನೇ ದಿನ ಧಾರಾಕಾರ ಮಳೆ ಮುಂದುವರೆದಿದ್ದು, 25ಕ್ಕೂ ಹೆಚ್ಚು ಮರ ಧರೆಗುರುಳಿವೆ. ಜಂಕ್ಷನ್‌ ಮತ್ತು ಅಂಡರ್‌ ಪಾಸ್‌ಗಳಲ್ಲಿ ಭಾರೀ ಪ್ರಮಾಣದ ನೀರು ನಿಂತು ವಾಹನ ಸವಾರರು ಪರದಾಡಬೇಕಾಯಿತು.
 

ಬೆಂಗಳೂರು (ಮೇ. 02): ರಾಜಧಾನಿ ಬೆಂಗಳೂರಿನಲ್ಲಿ (Bengaluru) ಸತತ ಎರಡನೇ ದಿನ ಧಾರಾಕಾರ ಮಳೆ (Rain) ಮುಂದುವರೆದಿದ್ದು, 25ಕ್ಕೂ ಹೆಚ್ಚು ಮರ ಧರೆಗುರುಳಿವೆ. ಜಂಕ್ಷನ್‌ ಮತ್ತು ಅಂಡರ್‌ ಪಾಸ್‌ಗಳಲ್ಲಿ ಭಾರೀ ಪ್ರಮಾಣದ ನೀರು ನಿಂತು ವಾಹನ ಸವಾರರು ಪರದಾಡಬೇಕಾಯಿತು.

ಗಾಳಿ ಪ್ರಮಾಣ ಹೆಚ್ಚಾಗಿದ್ದರಿಂದ ಬಿಟಿಎಂ ಲೇಔಟ್‌ನಲ್ಲಿ 10ಕ್ಕೂ ಹೆಚ್ಚು ಮರ ಹಾಗೂ ಮರ ರಂಬೆಗಳು ಧರೆಗುರುಳಿವೆ. ವೈಟ್‌ಫೀಲ್ಡ್‌, ಸದಾನಂದ ನಗರ, ಶ್ರೀರಾಮಪುರ, ಮೈಕೋ ಲೇಔಟ್‌, ಡೈರಿ ವೃತ್ತ, ಗೋವಿಂದರಾಜ ನಗರದಲ್ಲಿ ತಲಾ ಒಂದು ಮರ ಬಿದ್ದ ವರದಿಯಾಗಿದೆ. ಇನ್ನು ಕೆ.ಆರ್‌.ರಸ್ತೆಯಲ್ಲಿ ಬಿಎಂಸಿಟಿ ಬಸ್‌ ಮೇಲೆ ಮರ ಬಿದ್ದಿದೆ. ಪ್ರಯಾಣಿಕರಿಗೆ ಯಾವುದೇ ತೊಂದರೆ ಆಗಿಲ್ಲ. ಇದೇ ವೇಳೆ ಆಟೋ, ಕಾರು ಜಖಂಗೊಂಡಿವೆ. ಉತ್ತರಹಳ್ಳಿಯ ಲಕ್ಷಯ್ಯ ಲೇಔಟ್‌ನಲ್ಲಿ ಕಳೆದ 20 ದಿನಗಳ ಹಿಂದೆ ಮಳೆ ಸುರಿದ ವೇಳೆ 100ಕ್ಕೂ ಅಧಿಕ ಮನೆಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿಯಾಗಿತ್ತು. ಭಾನುವಾರ ಮಳೆಗೂ ರಾಜಕಾಲುವೆಯ ಅಕ್ಕಪಕ್ಕದಲ್ಲಿರುವ 30ಕ್ಕೂ ಅಧಿಕ ಮನೆಗಳಿಗೆ ನೀರು ನುಗ್ಗಿ ಇಡೀ ಪ್ರದೇಶ ಜಲಾವೃತಗೊಂಡಿದ್ದು, ಬಿಬಿಎಂಪಿ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ.

 

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
Read more