Dog Run Over By Audi: ಅಮಾಯಕ ನಾಯಿ ಮೇಲೆ ಆದಿ ದರ್ಪಕ್ಕೆ ನಟಿ ರಮ್ಯಾ ಖಂಡನೆ!

Dog Run Over By Audi: ಅಮಾಯಕ ನಾಯಿ ಮೇಲೆ ಆದಿ ದರ್ಪಕ್ಕೆ ನಟಿ ರಮ್ಯಾ ಖಂಡನೆ!

Published : Feb 02, 2022, 10:47 AM ISTUpdated : Feb 02, 2022, 10:49 AM IST

*ಆದಿಕೇಶವುಲು ಮೊಮ್ಮಗ ಆದಿ ಕಾರು ಹತ್ತಿಸಿದ್ದರಿಂದ ಸಾವನ್ನಪ್ಪಿದ ಲಾರಾ
*ನಟಿ ರಮ್ಯಾ, ಪ್ರಾಣಿಪ್ರಿಯರಿಂದ ನಮನ: ಸುಮ್ಮನಹಳ್ಳಿ ಚಿತಾಗಾರದಲ್ಲಿ ಅಂತ್ಯಕ್ರಿಯೆ
*ಅರ್ಧ ಕಿಮೀ ದೂರದಲ್ಲಿ ದೇಹ ಪತ್ತೆ: ಪಶು ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ

ಬೆಂಗಳೂರು(ಫೆ. 02): ಉದ್ಯಮಿ ದಿವಂಗತ ಆದಿಕೇಶವುಲು ಮೊಮ್ಮಗ ಆದಿ ಕಾರು ಹತ್ತಿಸಿದ್ದರಿಂದ ಮೃತಪಟ್ಟಿದ್ದ ಬೀದಿ ನಾಯಿ ‘ಲಾರಾ’ ಮೃತದೇಹವನ್ನು ಮಂಗಳವಾರ ನಗರದ ಸುಮ್ಮನಹಳ್ಳಿಯ ಬಿಬಿಎಂಪಿ ಪ್ರಾಣಿ ಚಿತಾಗಾರದಲ್ಲಿ ಹಲವರ ಕಣ್ಣೀರ ನಡುವೆ ಅಂತ್ಯಕ್ರಿಯೆ ನೆರವೇರಿಸಲಾಯಿತು. ಮಾಜಿ ಸಂಸದೆ ಹಾಗೂ ಸ್ಯಾಂಡವುಲ್‌ ನಟಿ ರಮ್ಯಾ ಸೇರಿದಂತೆ ಹಲವು ಪ್ರಾಣಿಪ್ರಿಯರು ‘ಲಾರಾ’ ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡು ಕಂಬನಿ ಮಿಡಿದರು.

ಇದನ್ನೂ ಓದಿ: Animal Cruelty : ಶ್ವಾನದ ಮೇಲೆ ಕಾರು ಹತ್ತಿಸಿದ ಆದಿ ಬಂಧನ, ಕೆಲ ಹೊತ್ತಲ್ಲೆ ಬಿಡುಗಡೆ

ಸುದ್ದಿಗಾರರೊಂದಿಗೆ ಮಾತನಾಡಿದ ನಟಿ ರಮ್ಯಾ, ಮನುಷ್ಯ ತಪ್ಪು ಮಾಡುವುದು ಸಹಜ. ಆಕಸ್ಮಿಕವಾಗಿ ಆಗುವ ತಪ್ಪು ಕ್ಷಮಿಸಬಹುದು. ಆದರೆ, ಈ ನಾಯಿ ಲಾರಾ ವಿಚಾರದಲ್ಲಿ ಆದಿ ಉದ್ದೇಶ ಪೂರ್ವಕವಾಗಿ ತಪ್ಪು ಮಾಡಿದ್ದಾನೆ. ಇದು ನನಗೆ ತುಂಬಾ ನೋವಾಯಿತು. ರಾಜಕಾರಣಿ ಆದಿಕೇಶವಲು ಕುಟುಂಬ ನಮಗೆ ಪರಿಚಯ. ಆದಿಯನ್ನು ನಾನು ತುಂಬಾ ಚಿಕ್ಕವನಿದ್ದಾಗ ನೋಡಿದ್ದೆ. ಆತನನ್ನು ನಾನು ಯಾವಾಗಲೂ ಭೇಟಿಯಾಗಿಲ್ಲ. ಯಾರೇ ತಪ್ಪು ಮಾಡಿದರೂ ತಪ್ಪೇ ಎಂದು ಆಕ್ರೋಶ ವ್ಯಕ್ತಪಡಿಸಿದರು.

ನಮ್ಮ ದೇಶದಲ್ಲಿ ಪಶು ಕಾನೂನು ಕಠಿಣವಾಗಿಲ್ಲ. 50 ರು. ಕೊಟ್ಟು ಠಾಣಾ ಬೇಲ್‌ ತೆಗೆದುಕೊಂಡು ಹೊರಬರುತ್ತಾರೆ. ಈಗಾಗಲೇ ಸರ್ಕಾರ ಪಶು ಕಾನೂನು ಕಠಿಣಗೊಳಿಸಲು ಕರಡು ಸಿದ್ಧಪಡಿದಿದೆ. .75 ಸಾವಿರ ದಂಡ ಹಾಗೂ ಐದು ವರ್ಷ ಜೈಲು ಶಿಕ್ಷೆ ವಿಧಿಸುವ ಕಾನೂನು ರೂಪಿಸುತ್ತಿದೆ. ಆದಷ್ಟುಬೇಗ ಈ ಕಾನೂನು ಜಾರಿಗೊಳಿಸಬೇಕು ಎಂದು ಆಗ್ರಹಿಸಿದರು. ಜತೆಗೆ ಟ್ವಿಟರ್‌ನಲ್ಲಿ ಈ ಘಟನೆ ಬಗ್ಗೆ ತಮಗೆ ತಿಳಿಯಿತು. ಈ ಸಂಬಂಧ ಹಲವು ಸಚಿವರು, ಸಂಸದರ ಗಮನಕ್ಕೆ ತರಲಾಗಿದೆ. ಕೇಂದ್ರ ಸಚಿವ ರಾಜೀವ್‌ ಚಂದ್ರಶೇಖರ್‌ ಅವರು ಸೇರಿದಂತೆ ಬಿಜೆಪಿಯ ಕೆಲ ಸಚಿವರು ಸ್ಪಂದಿಸಿದ್ದಾರೆ. ಹೀಗಾಗಿ ಎಲ್ಲರಿಗೂ ಧನ್ಯವಾದ ಹೇಳುತ್ತೇನೆ. ಕಾನೂನು ಬಿಗಿಯಾಗಬೇಕು. ಎಲ್ಲರೂ ಕಾನೂನು ಪಾಲನೆ ಮಾಡಬೇಕು ಎಂದು ರಮ್ಯಾ ಹೇಳಿದರು.

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
Read more