Bengaluru: ಟಿಕೆಟ್‌ ವಿಚಾರಕ್ಕೆ ಗಲಾಟೆ, ಪ್ರಯಾಣಿಕ-ಕಂಡಕ್ಟರ್‌ ನಡುವೆ ಬಸ್‌ನಲ್ಲೇ ಫೈಟ್‌!

Bengaluru: ಟಿಕೆಟ್‌ ವಿಚಾರಕ್ಕೆ ಗಲಾಟೆ, ಪ್ರಯಾಣಿಕ-ಕಂಡಕ್ಟರ್‌ ನಡುವೆ ಬಸ್‌ನಲ್ಲೇ ಫೈಟ್‌!

Published : Jul 24, 2023, 10:01 PM IST

ಶಕ್ತಿ ಯೋಜನೆಯ ಕಿರಿಕ್‌ಗಳು ಮುಗಿಯುವ ಲಕ್ಷಣ ಕಾಣುತ್ತಿಲ್ಲ. ತುಮಕೂರಿನಲ್ಲಿ ಇಬ್ಬರು ಮಹಿಳೆಯರು ಸೋಮವಾರ ಗಲಾಟೆ ಮಾಡಿಕೊಂಡಿದ್ದರೆ, ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್‌ ಕಂಡಕ್ಟರ್‌ ಹಾಗೂ ಪುರುಷ ಪ್ರಯಾಣಿಕನ ನಡುವೆ ಬಸ್‌ನಲ್ಲಿ ಮಾರಾಮಾರಿ ನಡೆದಿದೆ.

ಬೆಂಗಳೂರು (ಜು.24): ಶಕ್ತಿ ಯೋಜನೆಯ ಅಡಿಯಲ್ಲಿ ಮಹಿಳೆಯರಿಗೆ ಉಚಿತ ಬಸ್‌ ಸೇವೆಯ ಕಿರಿಕ್‌ ಇನ್ನೂ ಮುಕ್ತಾಯವಾದ ರೀತಿ ಕಾಣುತ್ತಿಲ್ಲ. ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್ ಹತ್ತಿದ ಯುವಕ ಟಿಕೆಟ್‌ ತೆಗೆದುಕೊಳ್ಳಲು ನಿರಾಕರಿಸಿದ್ದಕ್ಕೆ, ಕಂಡಕ್ಟರ್ ಯುವಕನ ಮೇಲೆ ಹಲ್ಲೆ ಮಾಡಿದ ಘಟನೆ ನಡೆದಿದೆ. ರಾಮಯ್ಯ ಆಸ್ಪತ್ರೆ ಬಳಿ ಬಸ್ ಸ್ಟಾಪ್ ಈ ಘಟನೆ ನಡೆದಿದೆ.

ಭಾನುವಾರ ಈ ಘಟನೆ ನಡೆದಿದೆ. ರಾಮಯ್ಯ ಆಸ್ಪತ್ರೆ ಬಳಿ ಬಸ್‌ ಹತ್ತಿದ್ದ ಯುವಕನಿಗೆ ಕಂಡಕ್ಟರ್‌ ಯಶವಂತಪುರಕ್ಕೆ ಟಿಕೆಟ್‌ ನೀಡಿದ್ದ. ಮಹಿಳೆಯರಿಗೆ ಚಾರ್ಜ್ ಇಲ್ಲ ನಮಗ್ಯಾಕೆ ಎಂದು ಈ ವೇಳೆ ಪ್ರಯಾಣಿಕ ತಗಾದೆ ತೆಗೆದಿದ್ದಾನೆ.

ಬಸ್‌ನಲ್ಲಿ ಮಹಿಳೆಯರ ಜಡೆ ಜಗಳ, ತಲೆಚಚ್ಚಿಕೊಂಡ ಕಂಡಕ್ಟರ್‌!

ಈ ವೇಳೆ ಟಿಕೆಟ್ ಹಣ ನೀಡುವಂತೆ ಕಂಡಕ್ಟರ್‌ ಪಟ್ಟು ಹಿಡಿದಿದ್ದಾರೆ. ಈ ವೇಳೆ ಮಾತಿಗೆ ಮಾತು ಬೆಳೆದು ಕೈ ಕೈ ಮಿಲಾಯಿಸಿದ ಕಂಡಕ್ಟರ್ ಮತ್ತು ಪ್ರಯಾಣಿಕ. ಪ್ರಯಾಣಿಕ ಉತ್ತರ ಭಾರತದ ಮೂಲದವನಾಗಿದ್ದು, ನಂತರ ಇತರ ಪ್ರಯಾಣಿಕರು ತಿಳಿ ಹೇಳಿ ಕೆಳಗಿಳಿಸಿದ್ದಾರೆ. ಘಟನೆ ಕುರಿತು ಎಲ್ಲೂ ಪ್ರಕರಣ ದಾಖಲಾಗಿಲ್ಲ. ಘಟನೆಯನ್ನ ಸಹ ಪ್ರಯಾಣಿಕರು ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದಾರೆ.

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
Read more