Bengaluru: ಟಿಕೆಟ್‌ ವಿಚಾರಕ್ಕೆ ಗಲಾಟೆ, ಪ್ರಯಾಣಿಕ-ಕಂಡಕ್ಟರ್‌ ನಡುವೆ ಬಸ್‌ನಲ್ಲೇ ಫೈಟ್‌!

Bengaluru: ಟಿಕೆಟ್‌ ವಿಚಾರಕ್ಕೆ ಗಲಾಟೆ, ಪ್ರಯಾಣಿಕ-ಕಂಡಕ್ಟರ್‌ ನಡುವೆ ಬಸ್‌ನಲ್ಲೇ ಫೈಟ್‌!

Published : Jul 24, 2023, 10:01 PM IST

ಶಕ್ತಿ ಯೋಜನೆಯ ಕಿರಿಕ್‌ಗಳು ಮುಗಿಯುವ ಲಕ್ಷಣ ಕಾಣುತ್ತಿಲ್ಲ. ತುಮಕೂರಿನಲ್ಲಿ ಇಬ್ಬರು ಮಹಿಳೆಯರು ಸೋಮವಾರ ಗಲಾಟೆ ಮಾಡಿಕೊಂಡಿದ್ದರೆ, ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್‌ ಕಂಡಕ್ಟರ್‌ ಹಾಗೂ ಪುರುಷ ಪ್ರಯಾಣಿಕನ ನಡುವೆ ಬಸ್‌ನಲ್ಲಿ ಮಾರಾಮಾರಿ ನಡೆದಿದೆ.

ಬೆಂಗಳೂರು (ಜು.24): ಶಕ್ತಿ ಯೋಜನೆಯ ಅಡಿಯಲ್ಲಿ ಮಹಿಳೆಯರಿಗೆ ಉಚಿತ ಬಸ್‌ ಸೇವೆಯ ಕಿರಿಕ್‌ ಇನ್ನೂ ಮುಕ್ತಾಯವಾದ ರೀತಿ ಕಾಣುತ್ತಿಲ್ಲ. ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್ ಹತ್ತಿದ ಯುವಕ ಟಿಕೆಟ್‌ ತೆಗೆದುಕೊಳ್ಳಲು ನಿರಾಕರಿಸಿದ್ದಕ್ಕೆ, ಕಂಡಕ್ಟರ್ ಯುವಕನ ಮೇಲೆ ಹಲ್ಲೆ ಮಾಡಿದ ಘಟನೆ ನಡೆದಿದೆ. ರಾಮಯ್ಯ ಆಸ್ಪತ್ರೆ ಬಳಿ ಬಸ್ ಸ್ಟಾಪ್ ಈ ಘಟನೆ ನಡೆದಿದೆ.

ಭಾನುವಾರ ಈ ಘಟನೆ ನಡೆದಿದೆ. ರಾಮಯ್ಯ ಆಸ್ಪತ್ರೆ ಬಳಿ ಬಸ್‌ ಹತ್ತಿದ್ದ ಯುವಕನಿಗೆ ಕಂಡಕ್ಟರ್‌ ಯಶವಂತಪುರಕ್ಕೆ ಟಿಕೆಟ್‌ ನೀಡಿದ್ದ. ಮಹಿಳೆಯರಿಗೆ ಚಾರ್ಜ್ ಇಲ್ಲ ನಮಗ್ಯಾಕೆ ಎಂದು ಈ ವೇಳೆ ಪ್ರಯಾಣಿಕ ತಗಾದೆ ತೆಗೆದಿದ್ದಾನೆ.

ಬಸ್‌ನಲ್ಲಿ ಮಹಿಳೆಯರ ಜಡೆ ಜಗಳ, ತಲೆಚಚ್ಚಿಕೊಂಡ ಕಂಡಕ್ಟರ್‌!

ಈ ವೇಳೆ ಟಿಕೆಟ್ ಹಣ ನೀಡುವಂತೆ ಕಂಡಕ್ಟರ್‌ ಪಟ್ಟು ಹಿಡಿದಿದ್ದಾರೆ. ಈ ವೇಳೆ ಮಾತಿಗೆ ಮಾತು ಬೆಳೆದು ಕೈ ಕೈ ಮಿಲಾಯಿಸಿದ ಕಂಡಕ್ಟರ್ ಮತ್ತು ಪ್ರಯಾಣಿಕ. ಪ್ರಯಾಣಿಕ ಉತ್ತರ ಭಾರತದ ಮೂಲದವನಾಗಿದ್ದು, ನಂತರ ಇತರ ಪ್ರಯಾಣಿಕರು ತಿಳಿ ಹೇಳಿ ಕೆಳಗಿಳಿಸಿದ್ದಾರೆ. ಘಟನೆ ಕುರಿತು ಎಲ್ಲೂ ಪ್ರಕರಣ ದಾಖಲಾಗಿಲ್ಲ. ಘಟನೆಯನ್ನ ಸಹ ಪ್ರಯಾಣಿಕರು ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದಾರೆ.

25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
Read more