Bengaluru: ಟಿಕೆಟ್‌ ವಿಚಾರಕ್ಕೆ ಗಲಾಟೆ, ಪ್ರಯಾಣಿಕ-ಕಂಡಕ್ಟರ್‌ ನಡುವೆ ಬಸ್‌ನಲ್ಲೇ ಫೈಟ್‌!

Bengaluru: ಟಿಕೆಟ್‌ ವಿಚಾರಕ್ಕೆ ಗಲಾಟೆ, ಪ್ರಯಾಣಿಕ-ಕಂಡಕ್ಟರ್‌ ನಡುವೆ ಬಸ್‌ನಲ್ಲೇ ಫೈಟ್‌!

Published : Jul 24, 2023, 10:01 PM IST

ಶಕ್ತಿ ಯೋಜನೆಯ ಕಿರಿಕ್‌ಗಳು ಮುಗಿಯುವ ಲಕ್ಷಣ ಕಾಣುತ್ತಿಲ್ಲ. ತುಮಕೂರಿನಲ್ಲಿ ಇಬ್ಬರು ಮಹಿಳೆಯರು ಸೋಮವಾರ ಗಲಾಟೆ ಮಾಡಿಕೊಂಡಿದ್ದರೆ, ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್‌ ಕಂಡಕ್ಟರ್‌ ಹಾಗೂ ಪುರುಷ ಪ್ರಯಾಣಿಕನ ನಡುವೆ ಬಸ್‌ನಲ್ಲಿ ಮಾರಾಮಾರಿ ನಡೆದಿದೆ.

ಬೆಂಗಳೂರು (ಜು.24): ಶಕ್ತಿ ಯೋಜನೆಯ ಅಡಿಯಲ್ಲಿ ಮಹಿಳೆಯರಿಗೆ ಉಚಿತ ಬಸ್‌ ಸೇವೆಯ ಕಿರಿಕ್‌ ಇನ್ನೂ ಮುಕ್ತಾಯವಾದ ರೀತಿ ಕಾಣುತ್ತಿಲ್ಲ. ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್ ಹತ್ತಿದ ಯುವಕ ಟಿಕೆಟ್‌ ತೆಗೆದುಕೊಳ್ಳಲು ನಿರಾಕರಿಸಿದ್ದಕ್ಕೆ, ಕಂಡಕ್ಟರ್ ಯುವಕನ ಮೇಲೆ ಹಲ್ಲೆ ಮಾಡಿದ ಘಟನೆ ನಡೆದಿದೆ. ರಾಮಯ್ಯ ಆಸ್ಪತ್ರೆ ಬಳಿ ಬಸ್ ಸ್ಟಾಪ್ ಈ ಘಟನೆ ನಡೆದಿದೆ.

ಭಾನುವಾರ ಈ ಘಟನೆ ನಡೆದಿದೆ. ರಾಮಯ್ಯ ಆಸ್ಪತ್ರೆ ಬಳಿ ಬಸ್‌ ಹತ್ತಿದ್ದ ಯುವಕನಿಗೆ ಕಂಡಕ್ಟರ್‌ ಯಶವಂತಪುರಕ್ಕೆ ಟಿಕೆಟ್‌ ನೀಡಿದ್ದ. ಮಹಿಳೆಯರಿಗೆ ಚಾರ್ಜ್ ಇಲ್ಲ ನಮಗ್ಯಾಕೆ ಎಂದು ಈ ವೇಳೆ ಪ್ರಯಾಣಿಕ ತಗಾದೆ ತೆಗೆದಿದ್ದಾನೆ.

ಬಸ್‌ನಲ್ಲಿ ಮಹಿಳೆಯರ ಜಡೆ ಜಗಳ, ತಲೆಚಚ್ಚಿಕೊಂಡ ಕಂಡಕ್ಟರ್‌!

ಈ ವೇಳೆ ಟಿಕೆಟ್ ಹಣ ನೀಡುವಂತೆ ಕಂಡಕ್ಟರ್‌ ಪಟ್ಟು ಹಿಡಿದಿದ್ದಾರೆ. ಈ ವೇಳೆ ಮಾತಿಗೆ ಮಾತು ಬೆಳೆದು ಕೈ ಕೈ ಮಿಲಾಯಿಸಿದ ಕಂಡಕ್ಟರ್ ಮತ್ತು ಪ್ರಯಾಣಿಕ. ಪ್ರಯಾಣಿಕ ಉತ್ತರ ಭಾರತದ ಮೂಲದವನಾಗಿದ್ದು, ನಂತರ ಇತರ ಪ್ರಯಾಣಿಕರು ತಿಳಿ ಹೇಳಿ ಕೆಳಗಿಳಿಸಿದ್ದಾರೆ. ಘಟನೆ ಕುರಿತು ಎಲ್ಲೂ ಪ್ರಕರಣ ದಾಖಲಾಗಿಲ್ಲ. ಘಟನೆಯನ್ನ ಸಹ ಪ್ರಯಾಣಿಕರು ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದಾರೆ.

18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
Read more