Bengaluru: ಟಿಕೆಟ್‌ ವಿಚಾರಕ್ಕೆ ಗಲಾಟೆ, ಪ್ರಯಾಣಿಕ-ಕಂಡಕ್ಟರ್‌ ನಡುವೆ ಬಸ್‌ನಲ್ಲೇ ಫೈಟ್‌!

Bengaluru: ಟಿಕೆಟ್‌ ವಿಚಾರಕ್ಕೆ ಗಲಾಟೆ, ಪ್ರಯಾಣಿಕ-ಕಂಡಕ್ಟರ್‌ ನಡುವೆ ಬಸ್‌ನಲ್ಲೇ ಫೈಟ್‌!

Published : Jul 24, 2023, 10:01 PM IST

ಶಕ್ತಿ ಯೋಜನೆಯ ಕಿರಿಕ್‌ಗಳು ಮುಗಿಯುವ ಲಕ್ಷಣ ಕಾಣುತ್ತಿಲ್ಲ. ತುಮಕೂರಿನಲ್ಲಿ ಇಬ್ಬರು ಮಹಿಳೆಯರು ಸೋಮವಾರ ಗಲಾಟೆ ಮಾಡಿಕೊಂಡಿದ್ದರೆ, ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್‌ ಕಂಡಕ್ಟರ್‌ ಹಾಗೂ ಪುರುಷ ಪ್ರಯಾಣಿಕನ ನಡುವೆ ಬಸ್‌ನಲ್ಲಿ ಮಾರಾಮಾರಿ ನಡೆದಿದೆ.

ಬೆಂಗಳೂರು (ಜು.24): ಶಕ್ತಿ ಯೋಜನೆಯ ಅಡಿಯಲ್ಲಿ ಮಹಿಳೆಯರಿಗೆ ಉಚಿತ ಬಸ್‌ ಸೇವೆಯ ಕಿರಿಕ್‌ ಇನ್ನೂ ಮುಕ್ತಾಯವಾದ ರೀತಿ ಕಾಣುತ್ತಿಲ್ಲ. ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್ ಹತ್ತಿದ ಯುವಕ ಟಿಕೆಟ್‌ ತೆಗೆದುಕೊಳ್ಳಲು ನಿರಾಕರಿಸಿದ್ದಕ್ಕೆ, ಕಂಡಕ್ಟರ್ ಯುವಕನ ಮೇಲೆ ಹಲ್ಲೆ ಮಾಡಿದ ಘಟನೆ ನಡೆದಿದೆ. ರಾಮಯ್ಯ ಆಸ್ಪತ್ರೆ ಬಳಿ ಬಸ್ ಸ್ಟಾಪ್ ಈ ಘಟನೆ ನಡೆದಿದೆ.

ಭಾನುವಾರ ಈ ಘಟನೆ ನಡೆದಿದೆ. ರಾಮಯ್ಯ ಆಸ್ಪತ್ರೆ ಬಳಿ ಬಸ್‌ ಹತ್ತಿದ್ದ ಯುವಕನಿಗೆ ಕಂಡಕ್ಟರ್‌ ಯಶವಂತಪುರಕ್ಕೆ ಟಿಕೆಟ್‌ ನೀಡಿದ್ದ. ಮಹಿಳೆಯರಿಗೆ ಚಾರ್ಜ್ ಇಲ್ಲ ನಮಗ್ಯಾಕೆ ಎಂದು ಈ ವೇಳೆ ಪ್ರಯಾಣಿಕ ತಗಾದೆ ತೆಗೆದಿದ್ದಾನೆ.

ಬಸ್‌ನಲ್ಲಿ ಮಹಿಳೆಯರ ಜಡೆ ಜಗಳ, ತಲೆಚಚ್ಚಿಕೊಂಡ ಕಂಡಕ್ಟರ್‌!

ಈ ವೇಳೆ ಟಿಕೆಟ್ ಹಣ ನೀಡುವಂತೆ ಕಂಡಕ್ಟರ್‌ ಪಟ್ಟು ಹಿಡಿದಿದ್ದಾರೆ. ಈ ವೇಳೆ ಮಾತಿಗೆ ಮಾತು ಬೆಳೆದು ಕೈ ಕೈ ಮಿಲಾಯಿಸಿದ ಕಂಡಕ್ಟರ್ ಮತ್ತು ಪ್ರಯಾಣಿಕ. ಪ್ರಯಾಣಿಕ ಉತ್ತರ ಭಾರತದ ಮೂಲದವನಾಗಿದ್ದು, ನಂತರ ಇತರ ಪ್ರಯಾಣಿಕರು ತಿಳಿ ಹೇಳಿ ಕೆಳಗಿಳಿಸಿದ್ದಾರೆ. ಘಟನೆ ಕುರಿತು ಎಲ್ಲೂ ಪ್ರಕರಣ ದಾಖಲಾಗಿಲ್ಲ. ಘಟನೆಯನ್ನ ಸಹ ಪ್ರಯಾಣಿಕರು ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದಾರೆ.

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more