ರಾಜ್ಯದ ಸೋಂಕಿತರಲ್ಲಿ ಬೆಂಗಳೂರಿನದ್ದೇ ಸಿಂಹಪಾಲು ..!

ರಾಜ್ಯದ ಸೋಂಕಿತರಲ್ಲಿ ಬೆಂಗಳೂರಿನದ್ದೇ ಸಿಂಹಪಾಲು ..!

Suvarna News   | Asianet News
Published : Jul 06, 2020, 11:43 AM IST

ರಾಜ್ಯದ ಕೊರೋನಾ ಸೋಂಕಿತರ ಪಟ್ಟಿಯಲ್ಲಿ ಅರ್ಧಪಾಲು ಬೆಂಗಳೂರಿನದ್ದು ಎನ್ನುವ ಆಘಾತಕಾರಿ ಮಾಹಿತಿ ಹೊರಬಿದ್ದಿದೆ. ಸಿಲಿಕಾನ್ ಸಿಟಿಯಲ್ಲಿ ಸಿಕ್ಕಸಿಕ್ಕವರಿಗೆಲ್ಲಾ ಕೊರೋನಾ ಮಹಾಮಾರಿ ವಕ್ಕರಿಸಿಕೊಳ್ಳಲಾರಂಭಿಸಿದೆ. ಸದ್ಯ ಬೆಂಗಳೂರಿನಲ್ಲೇ ಕೊರೋನಾ ಪೀಡಿತರ ಸಂಖ್ಯೆ 9 ಸಾವಿರದ ಗಡಿ ದಾಟಿದೆ. 

ಬೆಂಗಳೂರು(ಜು.06): ಕೊರೋನಾ ಸುನಾಮಿಗೆ ರಾಜ್ಯ ರಾಜಧಾನಿ ಬೆಂಗಳೂರು ಅಕ್ಷರಶಃ ಬೆಚ್ಚಿಬಿದ್ದಿದೆ. ಕೊರೋನಾ ಹೆಚ್ಚಳ ವಿಚಾರದಲ್ಲಿ ರಾಜ್ಯದ್ದೇ ಒಂದು ಲೆಕ್ಕವಾದರೆ, ಬೆಂಗಳೂರಿನದ್ದು ಮತ್ತೊಂದು ಲೆಕ್ಕ ಎನ್ನುವಂತಾಗಿದೆ.

ಹೌದು, ರಾಜ್ಯದ ಕೊರೋನಾ ಸೋಂಕಿತರ ಪಟ್ಟಿಯಲ್ಲಿ ಅರ್ಧಪಾಲು ಬೆಂಗಳೂರಿನದ್ದು ಎನ್ನುವ ಆಘಾತಕಾರಿ ಮಾಹಿತಿ ಹೊರಬಿದ್ದಿದೆ. ಸಿಲಿಕಾನ್ ಸಿಟಿಯಲ್ಲಿ ಸಿಕ್ಕಸಿಕ್ಕವರಿಗೆಲ್ಲಾ ಕೊರೋನಾ ಮಹಾಮಾರಿ ವಕ್ಕರಿಸಿಕೊಳ್ಳಲಾರಂಭಿಸಿದೆ. ಸದ್ಯ ಬೆಂಗಳೂರಿನಲ್ಲೇ ಕೊರೋನಾ ಪೀಡಿತರ ಸಂಖ್ಯೆ 9 ಸಾವಿರದ ಗಡಿ ದಾಟಿದೆ. ಬೆಂಗಳೂರಿನಲ್ಲಿ ದಿನವೊಂದರಲ್ಲಿ ಮೂರರಿಂದ ಮೂರುವರೆ ಸಾವಿರ ಸ್ಯಾಂಪಲ್ ಟೆಸ್ಟ್ ಮಾಡಲಾಗುತ್ತಿದೆ. ಟೆಸ್ಟ್ ಸಂಖ್ಯೆ ಹೆಚ್ಚಾದಂತೆ ಪಾಸಿಟಿವ್ ಸಂಖ್ಯೆಗಳು ಹೆಚ್ಚಾಗಲಾರಂಭಿಸಿದೆ. 

ಜುಲೈ 06ರ ಮುಂಜಾನೆ ವೇಳೆಗೆ ಬೆಂಗಳೂರಿನಲ್ಲಿ 9,580 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, ಸಂಜೆಯಾಗುವುದರೊಳಗಾಗಿ ಸೋಂಕಿತರ ಸಂಖ್ಯೆ 10 ಸಾವಿರದ ಗಡಿ ದಾಟುವುದು ಪಕ್ಕಾ ಎನಿಸಿದೆ. ಕಳೆದೊಂದು ವಾರದಲ್ಲೇ 5800ಕ್ಕೂ ಹೆಚ್ಚು ಪಾಸಿಟಿವ್ ಪ್ರಕರಣಗಳು ಬೆಂಗಳೂರಿನಲ್ಲೇ ಪತ್ತೆಯಾಗಿದೆ. ಈ ಕುರಿತಾದ ಹೆಚ್ಚಿನ ಡೀಟೈಲ್ಸ್ ಇಲ್ಲಿದೆ ನೋಡಿ.

18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?