ಬೆಂಗಳೂರು ಟೆಕ್ಕಿ ಅತುಲ್‌ ಸುಭಾಶ್ ಕೇಸ್: ನಿಖಿತಾ ಅಂಡ್ ಫ್ಯಾಮಿಲಿಗೆ ಬಂಧನ ಭೀತಿ?

ಬೆಂಗಳೂರು ಟೆಕ್ಕಿ ಅತುಲ್‌ ಸುಭಾಶ್ ಕೇಸ್: ನಿಖಿತಾ ಅಂಡ್ ಫ್ಯಾಮಿಲಿಗೆ ಬಂಧನ ಭೀತಿ?

Published : Dec 12, 2024, 05:54 PM IST

ಬೆಂಗಳೂರಿನಲ್ಲಿ ಉತ್ತರ ಪ್ರದೇಶ ಮೂಲದ ಸಾಫ್ಟ್‌ವೇರ್ ಇಂಜಿನಿಯರ್ ಅತುಲ್ ಸುಭಾಷ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 24 ಪುಟಗಳ ಡೆತ್ ನೋಟ್‌ನಲ್ಲಿ ಪತ್ನಿ ಮತ್ತು ಅವರ ಕುಟುಂಬದ ಕಿರುಕುಳದ ಬಗ್ಗೆ ಬರೆದಿದ್ದಾರೆ. ಈ ಘಟನೆ ನ್ಯಾಯಾಂಗ ವ್ಯವಸ್ಥೆಯನ್ನು ಪ್ರಶ್ನಿಸುವಂತೆ ಮಾಡಿದೆ.

ಉತ್ತರ ಪ್ರದೇಶ ಮೂಲದ ಬೆಂಗಳೂರಿನ ಸಾಫ್ಟ್‌ವೇರ್ ಇಂಜಿನಿಯರ್ ಅತುಲ್ ಸುಭಾಷ್ ಡೆತ್‌ ನೋಟ್‌ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ದೇಶಾದ್ಯಂತ ಭಾರಿ ಸದ್ದು ಮಾಡುತ್ತಿದೆ. 24 ಪುಟಗಳ  ಡೆತ್‌ನೋಟ್‌ನಲ್ಲಿ ಅವರು ಕೊಟ್ಟ 'ಜಸ್ಟೀಸ್‌ ಈಸ್‌ ಡ್ಯೂ' (ನ್ಯಾಯ ಬಾಕಿಯಿದೆ) ಎಂಬ ಫಲಕ ನೇತು ಹಾಕಿಕೊಂಡಿರುವುದು ದೇಶದಲ್ಲಿ  ಸ್ತ್ರೀಪರವಾಗಿರುವ ಕಾನೂನು ಸೇರಿದಂತೆ, ಇಡೀ ನ್ಯಾಯಾಂಗದ ವ್ಯವಸ್ಥೆಯನ್ನು ಅಣಕಿಸುವಂತಿದೆ. ನ್ಯಾಯ ಕೇಳಲು ಹೋಗುವ ಸಾಮಾನ್ಯ ಜನರಿಗೆ ಆಗುವ ತಲ್ಲಣಗಳನ್ನು ಅವರ ಡೆತ್‌ನೋಟ್‌ ಅಭಿವ್ಯಕ್ತಪಡಿಸಿದೆ.

ಡಿ.9 ರಂದು ರಂಬಲ್‌ನಲ್ಲಿ ಪೋಸ್ಟ್ ಮಾಡಿದ 1.30 ಗಂಟೆಗಳ ವೀಡಿಯೊದಲ್ಲಿ, ಅವರು ತಮ್ಮ ಹೆಂಡತಿ ಮತ್ತು ಅವರ ಕುಟುಂಬದ ಕಿರುಕುಳದ ಕಾರಣದಿಂದ ಸಾವಿನ ಹಾದಿ ತುಳಿಯುವುದು ಅನಿವಾರ್ಯವಾಗಿದೆ ಎಂದು ಹೇಳಿಕೊಂಡಿದ್ದಾರೆ. ದೆಹಲಿಯ ಪ್ರತಿಷ್ಠಿತ ಸಾಫ್ಟ್‌ವೇರ್ ಕಂಪೆನಿಯಲ್ಲಿ ಕೆಲಸ ಮಾಡುತ್ತಿರುವ ತಮ್ಮ ವಿಚ್ಛೇದಿತ ಪತ್ನಿ ತಮ್ಮ ವಿರುದ್ಧ 9 ಬೋಗಸ್ ಕೇಸ್ ದಾಖಲಿಸಿದ್ದಾರೆ. ಜೊತೆಗೆ ವಿನಾಕಾರಣ ನಿರ್ವಹಣೆ ಮೊತ್ತವನ್ನು ಮೂರು ಕೋಟಿ  ಕೇಳುತ್ತಿದ್ದಾರೆ ಎಂದು ಅತುಲ್ ಸುಭಾಷ್ ವೀಡಿಯೊದಲ್ಲಿ ಹೇಳಿದ್ದಾರೆ.

ಇದನ್ನೂ ಓದಿ: 

ಇದಲ್ಲದೇ ಅತುಲ್ ಸುಭಾಶ್ ಡೆತ್ ನೋಟ್‌ನಲ್ಲಿ 'ಪತ್ನಿಯ ಕುಟುಂಬವು ತಿಂಗಳಿಗೆ 40 ಸಾವಿರ ರೂಪಾಯಿ ಬೇಡಿಕೆ ಇಟ್ಟಿತ್ತು. ನಂತರ ಅದನ್ನು ದ್ವಿಗುಣಗೊಳಿಸಲಾಯಿತು. 4 ವರ್ಷದ ಮಗನಿಗೆ ಜೀವನಾಂಶದ ನೆಪದಲ್ಲಿ 1 ಲಕ್ಷ ರೂ. ಕೇಳಿದರು. ಆ ಮೊತ್ತವನ್ನು ಪಾವತಿಸಲು ಸಾಧ್ಯವಾಗದಿದ್ದರೆ ಹೋಗಿ ಆತ್ಮಹತ್ಯೆ ಮಾಡಿಕೋ ಎಂದು ಪತ್ನಿ ಹೇಳಿದಳು. ಇದನ್ನು ನ್ಯಾಯಾಧೀಶರ ಎದುರು ಹೇಳಿದಾಗ ಅವರು ನಕ್ಕು ಬಿಟ್ಟರು. ಇದು ನನಗೆ ತುಂಬಾ ನೋವನ್ನು ಉಂಟು ಮಾಡಿತು. ಇದಾದ ಬಳಿಕ ನ್ಯಾಯಾಲಯದಿಂದ ಹೊರಕ್ಕೆ ಹೋದಾಗ ನೀನಿನ್ನು ಸಾಯಲಿಲ್ವ ಎಂದು ಪತ್ನಿಯ ತಾಯಿ ಕೇಳಿದರು. ಇವೆಲ್ಲಾ ನನ್ನನ್ನು ಘಾಸಿಗೊಳಿಸಿತು' ಎಂದು ಉಲ್ಲೇಖ ಮಾಡಿದ್ದಾರೆ.

ಇದೀಗ ಅತುಲ್ ಸುಭಾಶ್‌ನ ಹೆಂಡತಿ ನಿಖಿತಾ ಹಾಗೂ ಅವರ ಕುಟುಂಬ ಸದಸ್ಯರಿಗೆ ಬಂಧನದ ಭೀತಿ ಎದುರಾಗಿದೆ. ಬೆಂಗಳೂರು ಪೊಲೀಸರು ಕಳೆದ ಎರಡು ದಿನಗಳಿಂದ ವಿಚಾರಣೆ ಮಾಡಿದ್ದು, ದೇಶದ ಜನರು ಈ ಪ್ರಕರಣಕ್ಕೆ ಸೂಕ್ತ ನ್ಯಾಯ ಸಿಗಬೇಕಿದೆ ಎಂದು ಆಗ್ರಹ ಮಾಡುತ್ತಿದ್ದಾರೆ. ಈ ಪ್ರಕರಣವನ್ನು ಸ್ವತಃ ಸುಪ್ರೀಂ ಕೋರ್ಟ್ ಕೈಗೆತ್ತಿಕೊಂಡು ಅತುಲ್ ಸಾವಿಗೆ ನ್ಯಾಯ ಒದಗಿಸಬೇಕು ಎಂಬ ಮಾತುಗಳು ಕೂಡ ಕೇಳಿಬರುತ್ತಿವೆ. 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!