ತಾಯಿ ಗರ್ಭದಿಂದ ಹೊರಬಂದ ಹಸುಗೂಸಿಗೆ ನರಕ ತೋರಿಸಿದ ಆಸ್ಪತ್ರೆ: ಮಗುವಿಗೆ ಮುತ್ತಿಕೊಂಡು ಕಚ್ಚಿದ ಜಿರಳೆಗಳು

ತಾಯಿ ಗರ್ಭದಿಂದ ಹೊರಬಂದ ಹಸುಗೂಸಿಗೆ ನರಕ ತೋರಿಸಿದ ಆಸ್ಪತ್ರೆ: ಮಗುವಿಗೆ ಮುತ್ತಿಕೊಂಡು ಕಚ್ಚಿದ ಜಿರಳೆಗಳು

Published : Dec 02, 2023, 06:19 PM IST

ತಾಯಿ ಗರ್ಭದಿಂದ ಹೊರಬಂದ ಹಸುಗೂಸಿಗೆ ಬೆಂಗಳೂರಿನ ವಾಣಿ ವಿಲಾಸ ಆಸ್ಪತ್ರೆಯ ಸಿಬ್ಬಂದಿ ನರಕ ತೋರಿಸಿದ್ದಾರೆ. ಮಗುವಿಗೆ ಜಿರಳೆಗಳ ಹಿಂಡು ಮುತ್ತಿಕೊಂಡು ಕಚ್ಚುತ್ತಿದ್ದರೂ ಕೇರ್ ಮಾಡುವವರೇ ಇಲ್ಲ.

ಬೆಂಗಳೂರು (ಡಿ.2): ತಾಯಿ ಗರ್ಭದಲ್ಲಿ 9 ತಿಂಗಳು ಸಂತಸದಿಂದ ಇದ್ದು, ಭೂಮಿಗೆ ಬಂದ ಆ ಪುಟ್ಟ ಕಂದಮ್ಮನಿಗೆ ಕಣ್ಣು ಬಿಟ್ಟು ಜಗತ್ತನ್ನು ನೋಡುವ ಮೊದಲೇ ಸರ್ಕಾರಿ ಆಸ್ಪತ್ರೆ ಸಿಬ್ಬಂದಿ ನರಕವನ್ನೇ ತೋರಿಸಿದ್ದಾರೆ. ಮೂರು ದಿನದ ಹಿಂದೆ ಹೆರಿಗೆಯಾದ ತಾಯಿ ಹಾಗೂ ಮಗುವಿಗೆ ಸರೊಯಾದ ಹಾಸಿಗೆ ಕೊಡದೇ ಆರೈಕೆ ಮಾಡದೇ ನಿರ್ಲಕ್ಷ್ಯ ಮಾಡಲಾಗಿದೆ. ಇದು ಹೆರಿಗೆ ಮತ್ತು ಮಕ್ಕಳ ವಾರ್ಡ್‌ ಆಗಿದ್ದರೂ ಕನಿಷ್ಠ ಸ್ವಚ್ಛತೆಯೂ ಇಲ್ಲದಂತೆ ತಾಯಿ ಮಗುವನ್ನು ಕಸದಂತಿರುವ ಹಾಸಿಗೆ ಮೇಲೆ ಮಲಗಿಸಲಾಗಿದೆ. ಮೂರು ದಿನದ ಮಗುವಿಗೆ ರಾತ್ರಿಯಿಡೀ ಜಿರಳೆಗಳು ಮುತ್ತಿಕ್ಕಿ ಮನಸೋ ಇಚ್ಛೆ ಕಚ್ಚಿ ಗಾಯಗೊಳಿಸಿವೆ. ಇಲ್ಲಿಂದ ತಮ್ಮನ್ನು ಕಳಿಸಿಕೊಡಿ ಎಂದು ಕೇಳಿದರೂ ಬಾಣಂತಿ ತಾಯಿಗೆ ಬೈದು ಅಲ್ಲಿಯೇ ಮಲಗಿಸಿದ್ದು, ಮಗುವಿನ ಸ್ಥಿತಿ ನೋಡಿ ಕಣ್ಣೀರಿಟ್ಟಿದ್ದಾಳೆ.

ರೈತರಿಗೆ ಬರ ಪರಿಹಾರ ಕೊಡಲು ದುಡ್ಡಿಲ್ಲ, ಆದ್ರೆ ಶಾಸಕರ ಬರ್ತಡೇಲಿ ಹಣದ ಮಳೆಯನ್ನೇ ಸುರಿಸಲಾಗ್ತಿದೆ!

ರಾಕ್ಷಸೀ ಪ್ರವೃತ್ತಿ ಮೆರೆದ ಆಸ್ಪತ್ರೆ ಸಿಬ್ಬಂದಿ ಹಾಗೂ ಮನ ಕಲಕುವ ಘಟನೆ ನಡೆದಿದ್ದು ಯಾವುದೋ ಮೂಲೆಯಲ್ಲಿರುವ ಹಳ್ಳಿಯಲ್ಲಲ್ಲ. ವಾರ್ಷಿಕ ಕೋಟಿ, ಕೋಟಿ ರೂ. ಅನುದಾನ ಬಿಡುಗಡೆ ಆಗುವ ಹಾಗೂ ರಾಜ್ಯದಲ್ಲಿಯೇ ಪ್ರಸಿದ್ಧಿಯಾಗಿರುವ ರಾಜ್ಯ ರಾಜಧಾನಿ ಬೆಂಗಳೂರಿನ ವಾಣಿ ವಿಲಾಸ ಆಸ್ಪತ್ರೆಯಲ್ಲಿ. ಸರ್ಕಾರಿ ಆಸ್ಪತ್ರೆಯಲ್ಲಿ ಹೆರಿಗೆ ಮಾಡಿಸಿಕೊಳ್ಳುವುದೆಂದರೆ ಗರ್ಭಿಣಿಯರು ಸುತಾರಾಂ ಒಪ್ಪುವುದಿಲ್ಲ. ಅಲ್ಲಿ ವೈದ್ಯರು, ನರ್ಸ್‌ಗಳು ಹಾಗೂ ಸಿಬ್ಬಂದಿಯ ಕಾಟದ ಜೊತೆಗೆ ತಾಯಿ- ಮಗುವನ್ನು ಆರೈಕೆಯಲ್ಲಿ ಕೇರ್‌ಲೆಸ್ ಮಾಡುತ್ತಾರೆಂಬ ಆರೋಪ ಕೇಳಿಬರುತ್ತಿದೆ. ಇದಕ್ಕೆ ಸಾಕ್ಷಿ ಎಂಬಂತೆ ಬೆಂಗಳೂರಿನ ವಾಣಿ ವಿಲಾಸ ಆಸ್ಪತ್ರೆಯಲ್ಲಿ ಇಂತಹ ದುರ್ಘಟನೆ ನಡೆದಿರುವುದಕ್ಕೆ ಅಮಾಯಕ ಕೂಸು ನೋವನ್ನು ಅನುಭವಿಸುತ್ತಿದೆ.

20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
Read more