ತಾಯಿ ಗರ್ಭದಿಂದ ಹೊರಬಂದ ಹಸುಗೂಸಿಗೆ ನರಕ ತೋರಿಸಿದ ಆಸ್ಪತ್ರೆ: ಮಗುವಿಗೆ ಮುತ್ತಿಕೊಂಡು ಕಚ್ಚಿದ ಜಿರಳೆಗಳು

ತಾಯಿ ಗರ್ಭದಿಂದ ಹೊರಬಂದ ಹಸುಗೂಸಿಗೆ ನರಕ ತೋರಿಸಿದ ಆಸ್ಪತ್ರೆ: ಮಗುವಿಗೆ ಮುತ್ತಿಕೊಂಡು ಕಚ್ಚಿದ ಜಿರಳೆಗಳು

Published : Dec 02, 2023, 06:19 PM IST

ತಾಯಿ ಗರ್ಭದಿಂದ ಹೊರಬಂದ ಹಸುಗೂಸಿಗೆ ಬೆಂಗಳೂರಿನ ವಾಣಿ ವಿಲಾಸ ಆಸ್ಪತ್ರೆಯ ಸಿಬ್ಬಂದಿ ನರಕ ತೋರಿಸಿದ್ದಾರೆ. ಮಗುವಿಗೆ ಜಿರಳೆಗಳ ಹಿಂಡು ಮುತ್ತಿಕೊಂಡು ಕಚ್ಚುತ್ತಿದ್ದರೂ ಕೇರ್ ಮಾಡುವವರೇ ಇಲ್ಲ.

ಬೆಂಗಳೂರು (ಡಿ.2): ತಾಯಿ ಗರ್ಭದಲ್ಲಿ 9 ತಿಂಗಳು ಸಂತಸದಿಂದ ಇದ್ದು, ಭೂಮಿಗೆ ಬಂದ ಆ ಪುಟ್ಟ ಕಂದಮ್ಮನಿಗೆ ಕಣ್ಣು ಬಿಟ್ಟು ಜಗತ್ತನ್ನು ನೋಡುವ ಮೊದಲೇ ಸರ್ಕಾರಿ ಆಸ್ಪತ್ರೆ ಸಿಬ್ಬಂದಿ ನರಕವನ್ನೇ ತೋರಿಸಿದ್ದಾರೆ. ಮೂರು ದಿನದ ಹಿಂದೆ ಹೆರಿಗೆಯಾದ ತಾಯಿ ಹಾಗೂ ಮಗುವಿಗೆ ಸರೊಯಾದ ಹಾಸಿಗೆ ಕೊಡದೇ ಆರೈಕೆ ಮಾಡದೇ ನಿರ್ಲಕ್ಷ್ಯ ಮಾಡಲಾಗಿದೆ. ಇದು ಹೆರಿಗೆ ಮತ್ತು ಮಕ್ಕಳ ವಾರ್ಡ್‌ ಆಗಿದ್ದರೂ ಕನಿಷ್ಠ ಸ್ವಚ್ಛತೆಯೂ ಇಲ್ಲದಂತೆ ತಾಯಿ ಮಗುವನ್ನು ಕಸದಂತಿರುವ ಹಾಸಿಗೆ ಮೇಲೆ ಮಲಗಿಸಲಾಗಿದೆ. ಮೂರು ದಿನದ ಮಗುವಿಗೆ ರಾತ್ರಿಯಿಡೀ ಜಿರಳೆಗಳು ಮುತ್ತಿಕ್ಕಿ ಮನಸೋ ಇಚ್ಛೆ ಕಚ್ಚಿ ಗಾಯಗೊಳಿಸಿವೆ. ಇಲ್ಲಿಂದ ತಮ್ಮನ್ನು ಕಳಿಸಿಕೊಡಿ ಎಂದು ಕೇಳಿದರೂ ಬಾಣಂತಿ ತಾಯಿಗೆ ಬೈದು ಅಲ್ಲಿಯೇ ಮಲಗಿಸಿದ್ದು, ಮಗುವಿನ ಸ್ಥಿತಿ ನೋಡಿ ಕಣ್ಣೀರಿಟ್ಟಿದ್ದಾಳೆ.

ರೈತರಿಗೆ ಬರ ಪರಿಹಾರ ಕೊಡಲು ದುಡ್ಡಿಲ್ಲ, ಆದ್ರೆ ಶಾಸಕರ ಬರ್ತಡೇಲಿ ಹಣದ ಮಳೆಯನ್ನೇ ಸುರಿಸಲಾಗ್ತಿದೆ!

ರಾಕ್ಷಸೀ ಪ್ರವೃತ್ತಿ ಮೆರೆದ ಆಸ್ಪತ್ರೆ ಸಿಬ್ಬಂದಿ ಹಾಗೂ ಮನ ಕಲಕುವ ಘಟನೆ ನಡೆದಿದ್ದು ಯಾವುದೋ ಮೂಲೆಯಲ್ಲಿರುವ ಹಳ್ಳಿಯಲ್ಲಲ್ಲ. ವಾರ್ಷಿಕ ಕೋಟಿ, ಕೋಟಿ ರೂ. ಅನುದಾನ ಬಿಡುಗಡೆ ಆಗುವ ಹಾಗೂ ರಾಜ್ಯದಲ್ಲಿಯೇ ಪ್ರಸಿದ್ಧಿಯಾಗಿರುವ ರಾಜ್ಯ ರಾಜಧಾನಿ ಬೆಂಗಳೂರಿನ ವಾಣಿ ವಿಲಾಸ ಆಸ್ಪತ್ರೆಯಲ್ಲಿ. ಸರ್ಕಾರಿ ಆಸ್ಪತ್ರೆಯಲ್ಲಿ ಹೆರಿಗೆ ಮಾಡಿಸಿಕೊಳ್ಳುವುದೆಂದರೆ ಗರ್ಭಿಣಿಯರು ಸುತಾರಾಂ ಒಪ್ಪುವುದಿಲ್ಲ. ಅಲ್ಲಿ ವೈದ್ಯರು, ನರ್ಸ್‌ಗಳು ಹಾಗೂ ಸಿಬ್ಬಂದಿಯ ಕಾಟದ ಜೊತೆಗೆ ತಾಯಿ- ಮಗುವನ್ನು ಆರೈಕೆಯಲ್ಲಿ ಕೇರ್‌ಲೆಸ್ ಮಾಡುತ್ತಾರೆಂಬ ಆರೋಪ ಕೇಳಿಬರುತ್ತಿದೆ. ಇದಕ್ಕೆ ಸಾಕ್ಷಿ ಎಂಬಂತೆ ಬೆಂಗಳೂರಿನ ವಾಣಿ ವಿಲಾಸ ಆಸ್ಪತ್ರೆಯಲ್ಲಿ ಇಂತಹ ದುರ್ಘಟನೆ ನಡೆದಿರುವುದಕ್ಕೆ ಅಮಾಯಕ ಕೂಸು ನೋವನ್ನು ಅನುಭವಿಸುತ್ತಿದೆ.

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more