ತಾಯಿ ಗರ್ಭದಿಂದ ಹೊರಬಂದ ಹಸುಗೂಸಿಗೆ ನರಕ ತೋರಿಸಿದ ಆಸ್ಪತ್ರೆ: ಮಗುವಿಗೆ ಮುತ್ತಿಕೊಂಡು ಕಚ್ಚಿದ ಜಿರಳೆಗಳು

ತಾಯಿ ಗರ್ಭದಿಂದ ಹೊರಬಂದ ಹಸುಗೂಸಿಗೆ ನರಕ ತೋರಿಸಿದ ಆಸ್ಪತ್ರೆ: ಮಗುವಿಗೆ ಮುತ್ತಿಕೊಂಡು ಕಚ್ಚಿದ ಜಿರಳೆಗಳು

Published : Dec 02, 2023, 06:19 PM IST

ತಾಯಿ ಗರ್ಭದಿಂದ ಹೊರಬಂದ ಹಸುಗೂಸಿಗೆ ಬೆಂಗಳೂರಿನ ವಾಣಿ ವಿಲಾಸ ಆಸ್ಪತ್ರೆಯ ಸಿಬ್ಬಂದಿ ನರಕ ತೋರಿಸಿದ್ದಾರೆ. ಮಗುವಿಗೆ ಜಿರಳೆಗಳ ಹಿಂಡು ಮುತ್ತಿಕೊಂಡು ಕಚ್ಚುತ್ತಿದ್ದರೂ ಕೇರ್ ಮಾಡುವವರೇ ಇಲ್ಲ.

ಬೆಂಗಳೂರು (ಡಿ.2): ತಾಯಿ ಗರ್ಭದಲ್ಲಿ 9 ತಿಂಗಳು ಸಂತಸದಿಂದ ಇದ್ದು, ಭೂಮಿಗೆ ಬಂದ ಆ ಪುಟ್ಟ ಕಂದಮ್ಮನಿಗೆ ಕಣ್ಣು ಬಿಟ್ಟು ಜಗತ್ತನ್ನು ನೋಡುವ ಮೊದಲೇ ಸರ್ಕಾರಿ ಆಸ್ಪತ್ರೆ ಸಿಬ್ಬಂದಿ ನರಕವನ್ನೇ ತೋರಿಸಿದ್ದಾರೆ. ಮೂರು ದಿನದ ಹಿಂದೆ ಹೆರಿಗೆಯಾದ ತಾಯಿ ಹಾಗೂ ಮಗುವಿಗೆ ಸರೊಯಾದ ಹಾಸಿಗೆ ಕೊಡದೇ ಆರೈಕೆ ಮಾಡದೇ ನಿರ್ಲಕ್ಷ್ಯ ಮಾಡಲಾಗಿದೆ. ಇದು ಹೆರಿಗೆ ಮತ್ತು ಮಕ್ಕಳ ವಾರ್ಡ್‌ ಆಗಿದ್ದರೂ ಕನಿಷ್ಠ ಸ್ವಚ್ಛತೆಯೂ ಇಲ್ಲದಂತೆ ತಾಯಿ ಮಗುವನ್ನು ಕಸದಂತಿರುವ ಹಾಸಿಗೆ ಮೇಲೆ ಮಲಗಿಸಲಾಗಿದೆ. ಮೂರು ದಿನದ ಮಗುವಿಗೆ ರಾತ್ರಿಯಿಡೀ ಜಿರಳೆಗಳು ಮುತ್ತಿಕ್ಕಿ ಮನಸೋ ಇಚ್ಛೆ ಕಚ್ಚಿ ಗಾಯಗೊಳಿಸಿವೆ. ಇಲ್ಲಿಂದ ತಮ್ಮನ್ನು ಕಳಿಸಿಕೊಡಿ ಎಂದು ಕೇಳಿದರೂ ಬಾಣಂತಿ ತಾಯಿಗೆ ಬೈದು ಅಲ್ಲಿಯೇ ಮಲಗಿಸಿದ್ದು, ಮಗುವಿನ ಸ್ಥಿತಿ ನೋಡಿ ಕಣ್ಣೀರಿಟ್ಟಿದ್ದಾಳೆ.

ರೈತರಿಗೆ ಬರ ಪರಿಹಾರ ಕೊಡಲು ದುಡ್ಡಿಲ್ಲ, ಆದ್ರೆ ಶಾಸಕರ ಬರ್ತಡೇಲಿ ಹಣದ ಮಳೆಯನ್ನೇ ಸುರಿಸಲಾಗ್ತಿದೆ!

ರಾಕ್ಷಸೀ ಪ್ರವೃತ್ತಿ ಮೆರೆದ ಆಸ್ಪತ್ರೆ ಸಿಬ್ಬಂದಿ ಹಾಗೂ ಮನ ಕಲಕುವ ಘಟನೆ ನಡೆದಿದ್ದು ಯಾವುದೋ ಮೂಲೆಯಲ್ಲಿರುವ ಹಳ್ಳಿಯಲ್ಲಲ್ಲ. ವಾರ್ಷಿಕ ಕೋಟಿ, ಕೋಟಿ ರೂ. ಅನುದಾನ ಬಿಡುಗಡೆ ಆಗುವ ಹಾಗೂ ರಾಜ್ಯದಲ್ಲಿಯೇ ಪ್ರಸಿದ್ಧಿಯಾಗಿರುವ ರಾಜ್ಯ ರಾಜಧಾನಿ ಬೆಂಗಳೂರಿನ ವಾಣಿ ವಿಲಾಸ ಆಸ್ಪತ್ರೆಯಲ್ಲಿ. ಸರ್ಕಾರಿ ಆಸ್ಪತ್ರೆಯಲ್ಲಿ ಹೆರಿಗೆ ಮಾಡಿಸಿಕೊಳ್ಳುವುದೆಂದರೆ ಗರ್ಭಿಣಿಯರು ಸುತಾರಾಂ ಒಪ್ಪುವುದಿಲ್ಲ. ಅಲ್ಲಿ ವೈದ್ಯರು, ನರ್ಸ್‌ಗಳು ಹಾಗೂ ಸಿಬ್ಬಂದಿಯ ಕಾಟದ ಜೊತೆಗೆ ತಾಯಿ- ಮಗುವನ್ನು ಆರೈಕೆಯಲ್ಲಿ ಕೇರ್‌ಲೆಸ್ ಮಾಡುತ್ತಾರೆಂಬ ಆರೋಪ ಕೇಳಿಬರುತ್ತಿದೆ. ಇದಕ್ಕೆ ಸಾಕ್ಷಿ ಎಂಬಂತೆ ಬೆಂಗಳೂರಿನ ವಾಣಿ ವಿಲಾಸ ಆಸ್ಪತ್ರೆಯಲ್ಲಿ ಇಂತಹ ದುರ್ಘಟನೆ ನಡೆದಿರುವುದಕ್ಕೆ ಅಮಾಯಕ ಕೂಸು ನೋವನ್ನು ಅನುಭವಿಸುತ್ತಿದೆ.

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more