ತಾಯಿ ಗರ್ಭದಿಂದ ಹೊರಬಂದ ಹಸುಗೂಸಿಗೆ ನರಕ ತೋರಿಸಿದ ಆಸ್ಪತ್ರೆ: ಮಗುವಿಗೆ ಮುತ್ತಿಕೊಂಡು ಕಚ್ಚಿದ ಜಿರಳೆಗಳು

ತಾಯಿ ಗರ್ಭದಿಂದ ಹೊರಬಂದ ಹಸುಗೂಸಿಗೆ ನರಕ ತೋರಿಸಿದ ಆಸ್ಪತ್ರೆ: ಮಗುವಿಗೆ ಮುತ್ತಿಕೊಂಡು ಕಚ್ಚಿದ ಜಿರಳೆಗಳು

Published : Dec 02, 2023, 06:19 PM IST

ತಾಯಿ ಗರ್ಭದಿಂದ ಹೊರಬಂದ ಹಸುಗೂಸಿಗೆ ಬೆಂಗಳೂರಿನ ವಾಣಿ ವಿಲಾಸ ಆಸ್ಪತ್ರೆಯ ಸಿಬ್ಬಂದಿ ನರಕ ತೋರಿಸಿದ್ದಾರೆ. ಮಗುವಿಗೆ ಜಿರಳೆಗಳ ಹಿಂಡು ಮುತ್ತಿಕೊಂಡು ಕಚ್ಚುತ್ತಿದ್ದರೂ ಕೇರ್ ಮಾಡುವವರೇ ಇಲ್ಲ.

ಬೆಂಗಳೂರು (ಡಿ.2): ತಾಯಿ ಗರ್ಭದಲ್ಲಿ 9 ತಿಂಗಳು ಸಂತಸದಿಂದ ಇದ್ದು, ಭೂಮಿಗೆ ಬಂದ ಆ ಪುಟ್ಟ ಕಂದಮ್ಮನಿಗೆ ಕಣ್ಣು ಬಿಟ್ಟು ಜಗತ್ತನ್ನು ನೋಡುವ ಮೊದಲೇ ಸರ್ಕಾರಿ ಆಸ್ಪತ್ರೆ ಸಿಬ್ಬಂದಿ ನರಕವನ್ನೇ ತೋರಿಸಿದ್ದಾರೆ. ಮೂರು ದಿನದ ಹಿಂದೆ ಹೆರಿಗೆಯಾದ ತಾಯಿ ಹಾಗೂ ಮಗುವಿಗೆ ಸರೊಯಾದ ಹಾಸಿಗೆ ಕೊಡದೇ ಆರೈಕೆ ಮಾಡದೇ ನಿರ್ಲಕ್ಷ್ಯ ಮಾಡಲಾಗಿದೆ. ಇದು ಹೆರಿಗೆ ಮತ್ತು ಮಕ್ಕಳ ವಾರ್ಡ್‌ ಆಗಿದ್ದರೂ ಕನಿಷ್ಠ ಸ್ವಚ್ಛತೆಯೂ ಇಲ್ಲದಂತೆ ತಾಯಿ ಮಗುವನ್ನು ಕಸದಂತಿರುವ ಹಾಸಿಗೆ ಮೇಲೆ ಮಲಗಿಸಲಾಗಿದೆ. ಮೂರು ದಿನದ ಮಗುವಿಗೆ ರಾತ್ರಿಯಿಡೀ ಜಿರಳೆಗಳು ಮುತ್ತಿಕ್ಕಿ ಮನಸೋ ಇಚ್ಛೆ ಕಚ್ಚಿ ಗಾಯಗೊಳಿಸಿವೆ. ಇಲ್ಲಿಂದ ತಮ್ಮನ್ನು ಕಳಿಸಿಕೊಡಿ ಎಂದು ಕೇಳಿದರೂ ಬಾಣಂತಿ ತಾಯಿಗೆ ಬೈದು ಅಲ್ಲಿಯೇ ಮಲಗಿಸಿದ್ದು, ಮಗುವಿನ ಸ್ಥಿತಿ ನೋಡಿ ಕಣ್ಣೀರಿಟ್ಟಿದ್ದಾಳೆ.

ರೈತರಿಗೆ ಬರ ಪರಿಹಾರ ಕೊಡಲು ದುಡ್ಡಿಲ್ಲ, ಆದ್ರೆ ಶಾಸಕರ ಬರ್ತಡೇಲಿ ಹಣದ ಮಳೆಯನ್ನೇ ಸುರಿಸಲಾಗ್ತಿದೆ!

ರಾಕ್ಷಸೀ ಪ್ರವೃತ್ತಿ ಮೆರೆದ ಆಸ್ಪತ್ರೆ ಸಿಬ್ಬಂದಿ ಹಾಗೂ ಮನ ಕಲಕುವ ಘಟನೆ ನಡೆದಿದ್ದು ಯಾವುದೋ ಮೂಲೆಯಲ್ಲಿರುವ ಹಳ್ಳಿಯಲ್ಲಲ್ಲ. ವಾರ್ಷಿಕ ಕೋಟಿ, ಕೋಟಿ ರೂ. ಅನುದಾನ ಬಿಡುಗಡೆ ಆಗುವ ಹಾಗೂ ರಾಜ್ಯದಲ್ಲಿಯೇ ಪ್ರಸಿದ್ಧಿಯಾಗಿರುವ ರಾಜ್ಯ ರಾಜಧಾನಿ ಬೆಂಗಳೂರಿನ ವಾಣಿ ವಿಲಾಸ ಆಸ್ಪತ್ರೆಯಲ್ಲಿ. ಸರ್ಕಾರಿ ಆಸ್ಪತ್ರೆಯಲ್ಲಿ ಹೆರಿಗೆ ಮಾಡಿಸಿಕೊಳ್ಳುವುದೆಂದರೆ ಗರ್ಭಿಣಿಯರು ಸುತಾರಾಂ ಒಪ್ಪುವುದಿಲ್ಲ. ಅಲ್ಲಿ ವೈದ್ಯರು, ನರ್ಸ್‌ಗಳು ಹಾಗೂ ಸಿಬ್ಬಂದಿಯ ಕಾಟದ ಜೊತೆಗೆ ತಾಯಿ- ಮಗುವನ್ನು ಆರೈಕೆಯಲ್ಲಿ ಕೇರ್‌ಲೆಸ್ ಮಾಡುತ್ತಾರೆಂಬ ಆರೋಪ ಕೇಳಿಬರುತ್ತಿದೆ. ಇದಕ್ಕೆ ಸಾಕ್ಷಿ ಎಂಬಂತೆ ಬೆಂಗಳೂರಿನ ವಾಣಿ ವಿಲಾಸ ಆಸ್ಪತ್ರೆಯಲ್ಲಿ ಇಂತಹ ದುರ್ಘಟನೆ ನಡೆದಿರುವುದಕ್ಕೆ ಅಮಾಯಕ ಕೂಸು ನೋವನ್ನು ಅನುಭವಿಸುತ್ತಿದೆ.

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
Read more