ಡಿಜಿ ಹಳ್ಳಿ ಗಲಭೆ: ಗಲ್ಲಿ ಗಲ್ಲಿಯಲ್ಲೂ ಖಾಕಿ ಕಟ್ಟೆಚ್ಚರ, ಅನಗತ್ಯವಾಗಿ ಓಡಾಡ್ತಿದ್ದವರಿಗೆ ಲಾಠಿ ಏಟು

Aug 12, 2020, 10:51 AM IST

ಬೆಂಗಳೂರು (ಆ. 12): ಇಸ್ಲಾಂ ಧರ್ಮ ಗುರು ಮಹಮ್ಮದ್ ಪೈಗಂಬರ್ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಲಾಗಿದೆ ಎಂದು ಉದ್ರಿಕ್ತ ಗುಂಪೊಂದು ಅಖಂಡ ಶ್ರೀನಿವಾಸ ಮೂರ್ತಿ ಹಾಗೂ ಪೊಲೀಸ್‌ ಠಾಣೆ ಮೇಲೆ ದಾಳಿ ನಡೆಸಿದೆ. 

ಗಲಭೆಯಲ್ಲಿ 50 ಕ್ಕೂ ಹೆಚ್ಚು ದ್ವಿಚಕ್ರ ವಾಹನಗಳು, 6 ಕಾರುಗಳು, 2 ಬಸ್‌ಗಳು ಸುಟ್ಟು ಭಸ್ಮವಾಗಿವೆ. ಇದುವರೆಗೂ 147 ಜನರನ್ನು ಬಂಧಿಸಲಾಗಿದೆ. ಇದೊಂದು ವ್ಯವಸ್ಥಿತವಾದ ಷಡ್ಯಂತ್ರ. ಡಿಜೆ ಹಳ್ಳಿ ಪೊಲೀಸ್ ಸ್ಟೇಷನ್ ಎದುರು ಸೇರಿ ಎಂದು ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಾಕಿ ಕರೆ ನೀಡಲಾಗಿತ್ತು. ಬೆಳಗಿನ ಜಾವದಲ್ಲಿ ಪೊಲೀಸ್ ಬಂದೋಬಸ್ತ್ ಬಿಗಿಗೊಳಿಸಲಾಗಿದೆ. ಸೆಕ್ಷನ್ 144 ಜಾರಿಯಲ್ಲಿದೆ. ಅನಗತ್ಯವಾಗಿ ಓಡಾಡುತ್ತಿದ್ದವರ ಮೇಲೆ ಪೊಲೀಸರು ಲಾಠಿ ಬೀಸಿದ್ದಾರೆ. 

ಬೆಂಗಳೂರು ಗಲಭೆ: ಸುವರ್ಣ ನ್ಯೂಸ್ ಪ್ರತಿನಿಧಿ ಮೇಲೆ ಹಲ್ಲೆ, ಕಾರು ಜಖಂ, ಕ್ಯಾಮೆರಾ ಪುಡಿಪುಡಿ