ಮಡಿಕೇರಿಯಲ್ಲಿ ಮಳೆರಾಯ ಅಬ್ಬರಿಸುತ್ತಿದ್ದಾನೆ. ಭಾಗಮಂಡಲ ಸಂಪೂರ್ಣ ಜಲಾವೃತವಾಗಿದೆ. ಭಗಂಡೇಶ್ವರ ದೇಗುಲ ಸಂಪೂರ್ಣ ಜಲಾವೃತವಾಗಿದೆ. ಆ ಕಡೆಯಿಂದ ಈ ಕಡೆ, ಈ ಕಡೆಯಿಂದ ಆ ಕಡೆ ಹೋಗುವ ಹಾಗೆಯೇ ಇಲ್ಲ. ರಸ್ತೆಯೇ ಹೊಳೆಯಾಗಿ ಹರಿಯುತ್ತಿದೆ. ಕೊಡಗಿನಲ್ಲಿ ಕಳೆದ ಮೂರು ದಿನಗಳಿಂದ ಎಡೆಬಿಡದೇ ಮಳೆ ಸುರಿಯುತ್ತಿದ್ದು ಪ್ರವಾಹದ ಭೀತಿ ಎದುರಾಗಿದೆ. ಕಳೆದ ವರ್ಷದಂತೆ ಪ್ರವಾಹ ಉಂಟಾಗುವ ಸಾಧ್ಯತೆ ಎದುರಾಗಿದೆ.
ಬೆಂಗಳೂರು (ಆ. 06): ಮಡಿಕೇರಿಯಲ್ಲಿ ಮಳೆರಾಯ ಅಬ್ಬರಿಸುತ್ತಿದ್ದಾನೆ. ಭಾಗಮಂಡಲ ಸಂಪೂರ್ಣ ಜಲಾವೃತವಾಗಿದೆ. ಭಗಂಡೇಶ್ವರ ದೇಗುಲ ಸಂಪೂರ್ಣ ಜಲಾವೃತವಾಗಿದೆ. ಆ ಕಡೆಯಿಂದ ಈ ಕಡೆ, ಈ ಕಡೆಯಿಂದ ಆ ಕಡೆ ಹೋಗುವ ಹಾಗೆಯೇ ಇಲ್ಲ. ರಸ್ತೆಯೇ ಹೊಳೆಯಾಗಿ ಹರಿಯುತ್ತಿದೆ. ಕೊಡಗಿನಲ್ಲಿ ಕಳೆದ ಮೂರು ದಿನಗಳಿಂದ ಎಡೆಬಿಡದೇ ಮಳೆ ಸುರಿಯುತ್ತಿದ್ದು ಪ್ರವಾಹದ ಭೀತಿ ಎದುರಾಗಿದೆ. ಕಳೆದ ವರ್ಷದಂತೆ ಪ್ರವಾಹ ಉಂಟಾಗುವ ಸಾಧ್ಯತೆ ಎದುರಾಗಿದೆ.