News Hour: ಸಿದ್ದು ಬಣದ ವಿರುದ್ಧ ಮತ್ತೆ ಸಿಡಿದ ಕೆಪಿಸಿಸಿ ಅಧ್ಯಕ್ಷ ಡಿಕೆಶಿ!

News Hour: ಸಿದ್ದು ಬಣದ ವಿರುದ್ಧ ಮತ್ತೆ ಸಿಡಿದ ಕೆಪಿಸಿಸಿ ಅಧ್ಯಕ್ಷ ಡಿಕೆಶಿ!

Published : Sep 17, 2022, 11:44 PM ISTUpdated : Sep 17, 2022, 11:51 PM IST

ರಾಹುಲ್‌ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಕಾಂಗ್ರೆಸ್‌ನ ಭಾರತ್‌ ಜೋಡೋ ಯಾತ್ರೆ ಇನ್ನೇನು ಕೆಲವೇ ದಿನಗಳಲ್ಲಿ ಕರ್ನಾಟಕಕ್ಕೆ ಪ್ರವೇಶಿಸಲಿದೆ. ಇದರ ನಡುವೆ ರಾಜ್ಯ ಕಾಂಗ್ರೆಸ್‌ ಈ ಯಾತ್ರೆಯ ಸ್ವಾಗತಕ್ಕೆ ಸಿದ್ಧತೆ ಆರಂಭಿಸಿದೆ. ಆದರೆ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌ಗೆ ಮಾತ್ರ ತಾವು ಅಂದುಕೊಂಡ ವೇಗದಲ್ಲಿ ಕೆಲಸ ಸಾಗುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
 

ಬೆಂಗಳೂರು (ಸೆ. 17): ಭಾರತ್‌ ಜೋಡೋ ಯಾತ್ರೆಯೊಂದಿಗೆ ರಾಜ್ಯ ಕಾಂಗ್ರೆಸ್‌ನ ಅಂತರ್ಯುದ್ಧ ಮತ್ತೊಮ್ಮೆ ಬಹಿರಂಗವಾಗಿದೆ. ಸಿದ್ಧರಾಮಯ್ಯ ಹಾಗೂ ಡಿಕೆ ಶಿವಕುಮಾರ್‌ ಬಣದ ಶಾಸಕರ ನಡುವೆ ಫೈಟ್‌ ಆರಂಭವಾಗಿರುವ ಸೂಚನೆ ಸಿಕ್ಕಿದೆ. ಭಾರತ್‌ ಜೋಡೋ ಯಾತ್ರೆಯ ಸಿದ್ಧತೆಗೆ ಕೆಪಿಸಿಸಿ ಅಧ್ಯಕ್ಷರಿಗೆ ಸಿದ್ಧು ಬಣದ ಶಾಸಕರು ಬೆಂಬಲ ನೀಡುತ್ತಿಲ್ಲ ಎಂದು ಮೇಲ್ನೋಟಕ್ಕೆ ಗೊತ್ತಾಗಿರುವ ಕಾರಣಕ್ಕೆ, ಡಿಕೆಶಿ ಪದೇ ಪದೇ ಟಿಕೆಟ್‌ ಅಸ್ತ್ರ ಬಳಕೆ ಮಾಡುತ್ತಿದ್ದಾರೆ.

ಕೆಲಸ ಮಾಡದ ಶಾಸಕರಿಗೆ ಡಿಕೆಶಿ ಖಡಕ್ ಎಚ್ಚರಿಕೆ ನೀಡಿರುವ ಡಿಕೆ ಶಿವಕುಮಾರ್, ಕೆಲಸ ಮಾಡದೇ ಇದ್ದರೆ ಯಾಕೆ ಟಿಕೆಟ್‌ ಕೊಡಬೇಕು. ನನಗೆ ನಂಬರ್‌ ಬೇಕು ನಮ್ಮ ಸರ್ಕಾರ ಬರಬೇಕು. ಕ್ಷೇತ್ರದಲ್ಲಿ ಮದುವೆ ಅಟೆಂಡ್‌ ಮಾಡ್ಕೊಂಡು ಇದ್ರೆ ಆಗೋದಿಲ್ಲ. ಬೂತ್‌ ಮಟ್ಟಕ್ಕೆ ಹೋಗಿ ಎಲ್ಲಾ ಕೆಲಸ ಮಾಡಬೇಕು. ಹಾಗಿದ್ದಾಗ ಮಾತ್ರವೇ ಪಕ್ಷ ಸಂಘಟನೆ ಸಾಧ್ಯ ಎಂದು ಬೆಂಗಳೂರಿನಲ್ಲಿ ಡಿಕೆ ಶಿವಕುಮಾರ್‌ ಎಚ್ಚರಿಕೆ ನೀಡಿದ್ದಾರೆ.

ಡಿಕೆಶಿಗೆ ಇ.ಡಿ ಸಮನ್ಸ್‌; ಭಾರತ ಏಕತಾ ಯಾತ್ರೆ, ಅಧಿವೇಶನದ ವೇಳೆ ಕಿರುಕುಳ ಎಂದ ಕಾಂಗ್ರೆಸ್‌ ಅಧ್ಯಕ್ಷ

ಇನ್ನು ಕೆಪಿಸಿಸಿ ಜನರಲ್‌ ಸೆಕ್ರೆಟರಿ ವಿರುದ್ಧವೂ ಡಿಕೆಶಿ ಸಿಟ್ಟು ಹೊರಹಾಕಿದ್ದಾರೆ. ಎಲ್ಲವೂ ನನ್ನೊಬ್ಬನಿಂದಲೇ ಮಾಡಲು ಸಾಧ್ಯವಿಲ್ಲ. ಉಪಾಧ್ಯಕ್ಷರು, ಜನರಲ್ ಸೆಕ್ರೆಟರಿ ಸ್ಪಂದಿಸುತ್ತಿಲ್ಲ ಎಂದಿದ್ದಾರೆ. ಈ ನಡುವೆ ಸಿದ್ಧರಾಮಯ್ಯ ಯಾತ್ರೆಗೆ ಸಹಕಾರ ಕೊಡುತ್ತಿಲ್ಲ ಎನ್ನುವ ಬಗ್ಗೆ ತಮಗೆ ಗೊತ್ತಿಲ್ಲ. ಯಾರು ಸಹಕಾರ ಕೊಡುತ್ತಿಲ್ಲ ಎಂದು ಡಿಕೆಶಿ ಅವರನ್ನೇ ಕೇಳಿ ಎಂದು ಹೇಳಿದ್ದಾರೆ.

25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
Read more