ಟೀಸಿಗಾಗಿ ತಾಳಿ ಮಾರಲು ಸಿದ್ದವಾಗಿದ್ದ ತಾಯಿಗೆ BIG 3 ನೆರವು, ಮಗನಿಗೆ ಬೇರೆ ಶಾಲೆಯಲ್ಲಿ ಅಡ್ಮಿಶನ್..!

ಟೀಸಿಗಾಗಿ ತಾಳಿ ಮಾರಲು ಸಿದ್ದವಾಗಿದ್ದ ತಾಯಿಗೆ BIG 3 ನೆರವು, ಮಗನಿಗೆ ಬೇರೆ ಶಾಲೆಯಲ್ಲಿ ಅಡ್ಮಿಶನ್..!

Published : Jun 06, 2022, 02:46 PM IST

ಶಾಲಾ ಟೀಸಿ ಕೊಡುವ ವಿಚಾರವಾಗಿ ಕಳೆದ ಎರಡು ವರ್ಷಗಳಿಂದ ಶಾಲಾ ಆಡಳಿತ ಮಂಡಳಿ ಸತಾಯಿಸುತ್ತಾ ಬಂದಿದ್ದು, ಬೇಸತ್ತ ವಿದ್ಯಾರ್ಥಿ ತಾಯಿ (Mother )ತನ್ನ ಮಾಂಗಲ್ಯ ಸರ (Mangalsutra ) ಮಾರಿ, ವಿದ್ಯಾರ್ಥಿಯ ಫೀ ಕಟ್ಟಲು ಸಿದ್ದವಾಗಿದ್ದಳು.‌ ಇಂತ ಮನಕಲಕುವ ಘಟನೆ ಕೊಪ್ಪಳದ ಕನಕಗಿರಿಯಲ್ಲಿ ನಡೆದಿದೆ. 

ಕೊಪ್ಪಳ (ಜೂ. 06):  ಶಾಲಾ ಟೀಸಿ ಕೊಡುವ ವಿಚಾರವಾಗಿ ಕಳೆದ ಎರಡು ವರ್ಷಗಳಿಂದ ಶಾಲಾ ಆಡಳಿತ ಮಂಡಳಿ ಸತಾಯಿಸುತ್ತಾ ಬಂದಿದ್ದು, ಬೇಸತ್ತ ವಿದ್ಯಾರ್ಥಿ ತಾಯಿ (Mother )ತನ್ನ ಮಾಂಗಲ್ಯ ಸರ (Mangalsutra ) ಮಾರಿ, ವಿದ್ಯಾರ್ಥಿಯ ಫೀ ಕಟ್ಟಲು ಸಿದ್ದವಾಗಿದ್ದಳು.‌  ಇಂತ ಮನಕಲಕುವ ಘಟನೆ ಕೊಪ್ಪಳದ ಕನಕಗಿರಿಯಲ್ಲಿ ನಡೆದಿದೆ. 

ಕೊಪ್ಪಳ (Koppala) ಜಿಲ್ಲೆಯ ಕನಕಗಿರಿ ಪಟ್ಟಣದ ಮಾರುತಿರಾವ್ ಹಾಗೂ ರುಕ್ಮೀಣಿ ಎನ್ನುವರ ಮಗ ದರ್ಶನ್ ಗಂಗಾವತಿ ತಾಲೂಕಿನ ಕೆಸರಟ್ಟಿಯ ಸ್ವಾಮಿ ವಿವೇಕಾನಂದ ಇಂಗ್ಲಿಷ್ ಮೀಡಿಯಂ ಶಾಲೆಯಲ್ಲಿ 2019 ರಲ್ಲಿ 5 ನೇ ತರಗತಿಗೆ ಅಡ್ಮಿಶನ್ ಮಾಡಿಸಿದ್ದಾರೆ. ಆ ವೇಳೆಯಲ್ಲಿ ದರ್ಶನ್ ತಾಯಿ ರುಕ್ಮಿಣಿ 20  ಸಾವಿರ ಫೀಸ್ ತುಂಬಿದ್ದಾರೆ. ಬಳಿಕ ಶಾಲೆಯ ಫೀ ಕಟ್ಟಲು ಸಾಧ್ಯವಾಗದ ಹಿನ್ನಲೆಯಲ್ಲಿ 2020-21ನೇ ಸಾಲಿನಲ್ಲಿ ದರ್ಶನ್ ತಾಯಿ ರುಕ್ಮಿಣಿ ಮಗನ ಟಿಸಿ ನೀಡಲು ಶಾಲೆಯವರನ್ನು ಕೇಳಿದ್ದಾರೆ. ಆಗ ಶಾಲೆಯವರು ಒಂದು ವರ್ಷದ 20 ಸಾವಿರ ಫೀ ಕಟ್ಟಿ, ಟಿಸಿ ತೆಗೆದುಕೊಂಡು ಹೋಗಲು ಹೇಳಿದ್ದಾರೆ.

ಆಗ ರುಕ್ಮಿಣಿ ನನ್ನ ಬಳಿ ಅಷ್ಟೊಂದು ಹಣ ಇಲ್ಲವೆಂದು ಹೇಳಿದ್ದಾಳೆ. ಜೊತೆಗೆ ಕೊವೀಡ್ ಸಹ ಹೆಚ್ಚಳವಾದ ಹಿನ್ನಲೆಯಲ್ಲಿ ಶಾಲೆಗೆ ಹೋಗಲೇ ಇಲ್ಲ.‌ಬಳಿಕ 2021-22 ನೇ ಸಾಲಿನಲ್ಲಿಯೂ ಟಿಸಿ ಕೇಳಲು ಹೋದಾಗ ಶಾಲೆಯವರು 2 ವರ್ಷದ 40 ಸಾವಿರ ಫೀ ಕಟ್ಟಲು ಹೇಳಿದ್ದಾರೆ. ಇದರಿಂದ ಕಂಗಾಲಾದ ದರ್ಶನ್ ತಾಯಿ ಸೀದಾ ಏಷ್ಯಾನೆಟ್ ಸುವರ್ಣ ನ್ಯೂಸ್ ಬಿಗ್ 3 ಕಾರ್ಯಕ್ರಮ ನಡೆಸಿಕೊಡುವ ಜಯಪ್ರಕಾಶ್ ಶೆಟ್ಟಿ ಅವರಿಗೆ ಕರೆ ಮಾಡಿ ತನ್ನ ಸಮಸ್ಯೆ ಹೇಳಿಕೊಂಡೊದ್ದಾಳೆ. ಇದನ್ನ ಬಿಗ್ 3 ಪ್ರಸಾರ ಮಾಡಿ, ಆ ತಾಯಿಗೆ ನ್ಯಾಯ ಒದಗಿಸಿದೆ. ಬಿಗ್ 3 ವರದಿ ಬಳಿಕ ಶಾಲೆಯಿಂದ ಟಿಸಿ ಕೊಡಲಾಯಿತು, ಬೇರೆ ಶಾಲೆಗೆ ಅಡ್ಮಿಶನ್ ಕೂಡಾ ಆಗಿದೆ. 

 


 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!